nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!

    January 16, 2026

    ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

    January 16, 2026

    ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ

    January 16, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!
    • ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ
    • ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ
    • ತುಮಕೂರು: ಜ.20ರಂದು ಸಾರ್ವಜನಿಕರ ಸಭೆ
    • ಹುಳಿಯಾರು ಕೆಂಕೆರೆ ಕೊಲೆ ಪ್ರಕರಣ: 48 ಗಂಟೆಯೊಳಗೆ ಅಂತರ್ ರಾಜ್ಯ ನಾಲ್ವರು ಕೊಲೆ ಆರೋಪಿಗಳ ಸೆರೆ
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಂದಿಬೆಟ್ಟ ರೋಪ್-ವೇ ನಿರ್ಮಾಣಕ್ಕೆ ಅನುಮೋದನೆ
    ರಾಜ್ಯ ಸುದ್ದಿ February 20, 2022

    ನಂದಿಬೆಟ್ಟ ರೋಪ್-ವೇ ನಿರ್ಮಾಣಕ್ಕೆ ಅನುಮೋದನೆ

    By adminFebruary 20, 2022No Comments2 Mins Read

    ಜನಪ್ರಿಯ ಪ್ರವಾಸಿ ತಾಣ ನಂದಿ ಗಿರಿಧಾಮವನ್ನು ಪ್ರವಾಸೋದ್ಯಮ ತಾಣವಾಗಿ ಬೆಳೆಸುವ ಉದ್ದೇಶದೊಂದಿಗೆ ರೂಪಿಸಿರುವ ರೋಪ್-ವೇ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ನಂದಿ ಬೆಟ್ಟ ಕೆಲವೇ ವರ್ಷಗಳಲ್ಲಿ ಅತ್ಯಂತ ಆಕರ್ಷಣೀಯ ಪ್ರವಾಸಿ ಸ್ಥಳವಾಗಿ ಅಭಿವೃದ್ಧಿಯಾಗಲಿದೆ. ಇದು ಜಿಲ್ಲೆಯ ಆರ್ಥಿಕಾಭಿವೃದ್ಧಿಯಲ್ಲಿ ಮಹತ್ವದ ಮೈಲುಗಲ್ಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

    ಬೆಂಗಳೂರಿನಿಂದ 60 ಕಿ.ಮೀ. ದೂರದಲ್ಲಿರುವ ನಂದಿ ಗಿರಿಧಾಮ ಆಕರ್ಷಣೀಯ ಪ್ರವಾಸಿ ತಾಣವಾಗಿದ್ದು, ಪ್ರವಾಸಿಗರಿಗೆ ವಾರಾಂತ್ಯದಲ್ಲಿ ಭೇಟಿ ನೀಡಲು ಸೂಕ್ತ ಸ್ಥಳವಾಗಿದೆ. ಪಾರಂಪರಿಕ ಸ್ಮಾರಕ, ಕೋಟೆ, ಮನಸ್ಸಿಗೆ ಮುದ ನೀಡುವ ಪರಿಸರದಿಂದಾಗಿ ಇದು ಪ್ರವಾಸಿಗರ ಆಕರ್ಷಣೆ ಕೇಂದ್ರಬಿಂದುವಾಗಿದೆ. ಈ ಭಾಗದಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಿದರೆ ಬೇರೆ ದೇಶಗಳಿಂದಲೂ ಪ್ರವಾಸಿಗರನ್ನು ಸೆಳೆಯಬಹುದು ಎಂಬ ಅಂಶ ಗಮನಕ್ಕೆ ಬಂದಿತ್ತು. ಈ ನಿಟ್ಟಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ DBFOT ಮಾದರಿಯಲ್ಲಿ ರೋಪ್-ವೇ ನಿರ್ಮಿಸುವ ಯೋಜನೆಯನ್ನು ರೂಪಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 93.40 ಕೋಟಿ ರೂ. ವೆಚ್ಚದ ಪ್ರವಾಸೋದ್ಯಮ ಇಲಾಖೆಯ ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.


    Provided by
    Provided by

    ಈ ಯೋಜನೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರ ಗಮನ ಸೆಳೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ನಂದಿ ಬೆಟ್ಟದ ತಪ್ಪಲಿನಿಂದ ಸುಮಾರು 2.93 ಕಿ.ಮೀ. ಎತ್ತರದ ಬೆಟ್ಟ ಪ್ರದೇಶಕ್ಕೆ ರೋಪ್-ವೇ ನಿರ್ಮಿಸಿ ಪ್ರವಾಸಿಗರನ್ನು ಕರೆದೊಯ್ಯಲು ಉದ್ದೇಶಿಸಿದ್ದು, ಲ್ಯಾಂಡಿಂಗ್ ಸ್ಟೇಷನ್ (ಇಳಿಯುವ ಸ್ಥಳ) ಬೆಟ್ಟದ ತಳಭಾಗ ಹಾಗೂ ಮೇಲ್ಭಾಗದ ಎರಡೂ ಕಡೆ ಇರುವಂತೆ ಯೋಜನೆ ರೂಪಿಸಲಾಗಿದೆ. ಇದರಲ್ಲಿ ಒಟ್ಟು 18 ಟವರ್‍ಗಳನ್ನು ನಿರ್ಮಿಸಲಾಗುತ್ತದೆ.

    ಇದರ ಜೊತೆಗೆ ರೆಸ್ಟೋರೆಂಟï, ಕೆಫೆ, ಆಹಾರ ಮಳಿಗೆ, ಇತರೆ ಮಳಿಗೆಗಳನ್ನು ನಿರ್ಮಿಸಲು ಅವಕಾಶವಿರುತ್ತದೆ. ರೋಪ್-ವೇನಲ್ಲಿ 50 ಕ್ಯಾಬಿನ್ ಗಳಿರಲಿದ್ದು, ಪ್ರತಿಯೊಂದರಲ್ಲೂ 10 ಮಂದಿ ಪ್ರಯಾಣಿಸಬಹುದು. ಒಟ್ಟು 28 ನಿಮಿಷಗಳಲ್ಲಿ ಕ್ರಮಿಸಬಹುದು ಎಂದು ಸಚಿವರು ವಿವರಿಸಿದ್ದಾರೆ.

    ಈ ಯೋಜನೆಯಿಂದಾಗಿ ಚಿಕ್ಕಬಳ್ಳಾಪುರದ ಇತಿಹಾಸ, ಪರಂಪರೆ, ನಿಸರ್ಗ ರಮಣೀಯತೆ ಹೊರಜಗತ್ತಿಗೆ ತಿಳಿದುಬರಲಿದೆ. ಹೆಚ್ಚು ಪ್ರವಾಸಿಗರು ಬರುವುದರಿಂದ ಉದ್ಯೋಗ ಸೃಷ್ಟಿಯೂ ಸಾಧ್ಯವಾಗಿ, ಸ್ಥಳೀಯ ಆರ್ಥಿಕತೆ ಅಭಿವೃದ್ಧಿಯಾಗಲಿದೆ. ಸೂರ್ಯೋದಯ ಹಾಗೂ ಸೂರ್ಯಾಸ್ತಮಾನದ ಸಮಯದಲ್ಲಿ ಹೆಚ್ಚು ಜನರು ಖಾಸಗಿ ವಾಹನಗಳಲ್ಲಿ ಬಂದು ಬೆಟ್ಟಕ್ಕೆ ತೆರಳುತ್ತಾರೆ.

    ರೋಪ್-ವೇ ನಿಂದಾಗಿ ಪರಿಸರ ಸ್ನೇಹಿ ವಾತಾವರಣ ಸೃಷ್ಟಿಯಾಗುವುದರೊಂದಿಗೆ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಜೊತೆಗೆ ಜನಜಂಗುಳಿಯನ್ನು ಸುಲಭವಾಗಿ ನಿರ್ವಹಣೆ ಮಾಡಬಹುದು. ರೋಪ್ -ವೇ ನಲ್ಲಿನ ಸಂಚಾರದ ವೇಳೆ ಪ್ರವಾಸಿಗರು ವಿಹಂಗಮ ನೋಟವನ್ನೂ ಕಣ್ತುಂಬಿಕೊಳ್ಳಬಹುದು. ಈ ಯೋಜನೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಗೂ ಉತ್ತಮ ಹೆಸರು ಬರಲಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!

    January 16, 2026

    ವೈ.ಎನ್.ಹೊಸಕೋಟೆ: ಹಣಕಾಸಿನ ವಿಚಾರದಲ್ಲಿ ಉಂಟಾದ ಕ್ಷುಲ್ಲಕ ಜಗಳದಿಂದ ಮಹಿಳೆಯ ಪ್ರಾಣಕ್ಕೆ ಕುತ್ತು ತಂದ ಘಟನೆ ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ಬುಧವಾರ…

    ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

    January 16, 2026

    ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ

    January 16, 2026

    ತುಮಕೂರು: ಜ.20ರಂದು ಸಾರ್ವಜನಿಕರ ಸಭೆ

    January 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.