nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026
    Facebook Twitter Instagram
    ಟ್ರೆಂಡಿಂಗ್
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    • ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ಸಿಎಂ ಅನ್ನಬೇಡಿ, ನನ್ನ ವಿರುದ್ದ ಒಳ ಕೂಯಿಲು ಆರಂಭವಾಗುತ್ತದೆ: ಜಿ.ಪರಮೇಶ್ವರ್ ಹೇಳಿಕೆ
    ಕೊರಟಗೆರೆ January 23, 2022

    ನಾನು ಸಿಎಂ ಅನ್ನಬೇಡಿ, ನನ್ನ ವಿರುದ್ದ ಒಳ ಕೂಯಿಲು ಆರಂಭವಾಗುತ್ತದೆ: ಜಿ.ಪರಮೇಶ್ವರ್ ಹೇಳಿಕೆ

    By adminJanuary 23, 2022No Comments2 Mins Read
    g parameshwar

    ಕೊರಟಗೆರೆ:  ಕ್ಷೇತ್ರದ ಜನರು ಭಾವೋದ್ರೇಕವಾಗಿ ನಾನು ಮುಖ್ಯಮಂತ್ರಿಯಾಗಬೇಕು ಎಂದು ಭಾಷಣ ಮಾಡಬೇಡಿ. ನೀವು ಇಲ್ಲಿ ಕೂಗಿದರೆ ನನ್ನ ವಿರುದ್ದ ಒಳ ಕೂಯಿಲು ಅಲ್ಲಿ ಶುರುವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ಪ್ರತಿಕ್ರಿಯಿಸಿದರು.

    ಕೊರಟಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೋರಾ ಹೋಬಳಿಯ ಚಿಕ್ಕಗುಂಡಗಲ್ಲು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆದ ಸುಮಾರು 5 ಕೋಟಿ ರೂಗಳ ವೆಚ್ಚದ 17 ಕಾಮಗಾರಿಗಳನ್ನು ಶಂಕುಸ್ಥಾಪನೆ  ಶನಿವಾರ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದಿಗೆ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದೇನೆ. ಪ್ರತಿಯೊಬ್ಬ ಮತದಾರರ ಋಣ ತೀರಿಸುವ ಕೆಲಸವನ್ನು ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಸರ್ಕಾರದಿಂದ ಹಣ ತರುವುದು ಕಷ್ಟ. ಇತರ ಕ್ಷೇತ್ರಗಳನ್ನು ಗಮನಿಸಿ ನಮ್ಮ ಕ್ಷೇತ್ರವನ್ನು ಗಮನಿಸಿ. ಆಗ ಅಭಿವೃದ್ಧಿ ತಿಳಿಯುತ್ತದೆ ಎಂದರು.

    ಕ್ಷೇತ್ರ ಜನರು ನಾನು ಮುಖ್ಯಮಂತ್ರಿಯಾಗಲಿ ಎಂದು ಕೂಗುತ್ತೀರಿ. ಆದರೆ ಅದು ನಮ್ಮ ಕೈಯಲ್ಲಿ ಇಲ್ಲ. ಪಕ್ಷದ ವರಿಷ್ಠರು ಶಾಸಕರು ಸೇರಿದಂತೆ  ಹಲವು   ಹಂತಗಳಲ್ಲಿ ನಡೆಯುವ ಕೆಲಸ ಅದಾಗಿದೆ. ನಾನು ರಾಜ್ಯದ ಒಬ್ಬ ನಾಯಕ ಎಂದು ಗುರುತಿಸಿ ಮತ ಹಾಕಿ ಎಂದು ಪರಮೇಶ್ವರ್ ಮನವಿ ಮಾಡಿಕೊಂಡರು.

    ರಾಜ್ಯದಲ್ಲಿ ಸಮಿಶ್ರ ಸರ್ಕಾರದಲ್ಲಿ ನೀಡಿದಂತಹ ಆಶ್ರಯ ಮನೆಗಳಿಗೆ ಸರ್ಕಾರ ಇಲ್ಲಿಯವರೆಗೂ ಹಣ ಬಿಡುಗಡೆ ಮಾಡಿದೆ ಆದರೆ ಸರ್ಕಾರದಿಂದ ಯಾವುದೇ ಹೊಸ ಮನೆಯನ್ನು ಬಿಡುಗಡೆ ಮಾಡಿಲ್ಲ ನಾವುಗಳು ವಿಧಾನ ಸಭೆಯಲ್ಲಿ ಒತ್ತಡ ಹಾಕಿದ ಮೇಲೆ ಸರ್ಕಾರವು ಪ್ರತೀ ಪಂಚಾಯ್ತಿಗೆ 40 ಮನೆಗಳನ್ನು ನೀಡಿದೆ, ಆದರೆ ವಿಶೇಷವಾಗಿ ವಸತಿ ಸಚಿವರಾದ ವಿ. ಸೋಮಣ್ಣನವರು ನನ್ನ ಮನವಿ ಮತ್ತು ವಿಶ್ವಾಸಕ್ಕೆ ಸ್ಪಂಧಿಸಿ ಕೊರಟಗೆರೆ ಕ್ಷೇತ್ರಕ್ಕೆ 3600 ಮನೆಗಳನ್ನು ವಿಶೇಷ ಆದ್ಯತೆಯ ಮೇಲೆ ಬಿಡುಗಡೆಗೊಳಿಸಿದ್ದಾರೆ ಈ ಹಿಂದೆಯೂ ನನಗೆ 8 ಸಾವಿರ ಮನೆಗಳನ್ನು ಮಂಜೂರು ವಸತಿ ಸಚಿವರಿಗೆ ಕ್ಷೇತ್ರದ ಜನರ ಪರವಾಗಿ ಹಾಗೂ ವೈಯಕ್ತಿಕವಾಗಿ ಅಭಿನಂದನೆ ಮತ್ತು ಧನ್ಯವಾದಗಳನ್ನು ತಿಳಿಸುತ್ತೇನೆ  ಎಂದರು.

    ಸರ್ಕಾರದಲ್ಲಿ ಭ್ರಷ್ಠಾಚಾರದ ಕೂಗು ಸಾಕಷ್ಟು ಕೇಳುತ್ತಿದೆ, ಸರ್ಕಾರದ ಕಾಮಗಾರಿ ಮತ್ತು ಕೆಲಸ ನಿರ್ವಹಿಸುವವರು, ಬಹಿರಂಗವಾಗಿಯೇ ಈ ಆರೋಪ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಯಾವುದೇ ಸರ್ಕಾರವಾಗಲಿ ಜನರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕಿದೆ ಎಂದ ಅವರು ಬರುವ ಆಯ ವ್ಯಯದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಕ್ಷೇತ್ರದ ಎತ್ತಿನ ಹೊಳೆ ಯೋಜನೆಗೆ ಸಾವಿರಾರು ಕೋಟಿ ರೂಗಳನ್ನು ಬಿಡುಗಡೆ ಮಾಡಲಿ ಇದರಿಂದ ಬಯಲು ಸೀಮೆಯ ಜನರಿಗೆ ನೀರಿನ ನೆರವಾಗುತ್ತದೆ ನನ್ನ ಕ್ಷೇತ್ರದಲ್ಲಿ 110 ಕೆರೆಗಳು ಈ ಯೋಜನೆಯಲ್ಲಿ ತುಂಬಲಿವೆ,ಅದೇ ರೀತಿಯಾಗಿ ತುಮಕೂರು-ರಾಯದುರ್ಗ-ಬಳ್ಳಾರಿ ರೈಲ್ವೇ ಮಾರ್ಗವು ಹಳ್ಳ ಹಿಡಿದಿದೆ, ಯಪಿಎ ಸರ್ಕಾರದಲ್ಲಿ ತಂದಂತಹ ಈ ಯೋಜನೆ ಅರ್ಧಕ್ಕೆ ನಿಂತಿರುವುದು ದುರದುಷ್ಠಕರ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ ಆದರೆ ಯೋಜನೆ ಮಾತ್ರ ಸಕಾರಗೊಂಡಿಲ್ಲ ನೆರೆಯ ಆಂದ್ರಪ್ರದೇಶದಲ್ಲಿ ಈ ಯೋಜನೆ ಅಂತಿಮ ಘಟ್ಟಕ್ಕೆ ಬಂದಿದೆ ಈ ಕೂಡಲೇ ರಾಜ್ಯದ ಮುಖ್ಯಂತ್ರಿಗಳು ಇದರ ಬಗ್ಗೆ ಒತ್ತು ನೀಡಿ ಹೆಚ್ಚಿನ ಹಣ ಬಿಡುಗಡೆಗೊಳಿಸಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದರು.

    ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಸುಜಾತ, ಸದಸ್ಯರಾದ ನಾಗರಾಜು, ಅಂಜನಪ್ಪ, ಆನಂದ್, ರಾಜು ಕೆಪಿಸಿಸಿ ಕಾರ್ಯದರ್ಶಿ ಬಿ.ಎಸ್. ದಿನೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕೆರೆ ಶಂಕರ್, ಅಶ್ವಥ್ ನಾರಾಯಣ,ಮಾಜಿ ಅಧ್ಯಕ್ಷ ಗಂಗಾಧರಪ್ಪ, ಮಹಿಳಾ ಅಧ್ಯಕ್ಷೆ ಜಯಮ್ಮ, ಯುವ ಕಾಂಗ್ರೇಸ್ ಅಧ್ಯಕ್ಷ ವಿನಯ್ ಕುಮಾರ್, ಮುಖಂಡರಾದ ಹನುಮಂತರಾಯಪ್ಪ, ನ್ಯಾತೇಗೌಡ, ನಜೀರ್, ಸುರೇಶ್ ಸೇರಿದಂತೆ ಹಲವು ಸ್ಥಳೀಯ ಮುಖಂಡರುಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    July 25, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ಜುಲೈ 29ರಂದು ಬೆಳಿಗ್ಗೆ 10:30ಕ್ಕೆ ಪತ್ರಿಕಾ ದಿನಾಚರಣೆ…

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.