nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರೇಗಾ ಹಬ್ಬ 2025: ತುಮಕೂರು ಜಿಲ್ಲೆಗೆ 3 ಪ್ರಶಸ್ತಿ
    ತುಮಕೂರು February 5, 2025

    ನರೇಗಾ ಹಬ್ಬ 2025: ತುಮಕೂರು ಜಿಲ್ಲೆಗೆ 3 ಪ್ರಶಸ್ತಿ

    By adminFebruary 5, 2025No Comments2 Mins Read

    ತುಮಕೂರು:  ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿಕೆ, ಶಾಲಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಜಿಲ್ಲೆಯ ವಿನೂತನ ಕಾರ್ಯಕ್ರಮಗಳನ್ನು ಪರಿಗಣಿಸಿ ತುಮಕೂರು ಜಿಲ್ಲಾ ಪಂಚಾಯಿತಿಗೆ 2025ರ ನರೇಗಾ ಪ್ರಶಸ್ತಿ, ಉತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ ಹಾಗೂ ಕಾಯಕ ಬಂಧು ಗಂಗಮ್ಮ ಅವರಿಗೆ ಮೇಟ್ ಪ್ರಶಸ್ತಿ ಸೇರಿ 3 ಪ್ರಶಸ್ತಿಗಳು ಲಭಿಸಿವೆ.

    ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನರೇಗಾ ಹಬ್ಬ–2025ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಉಮಾಮಹದೇವನ್, ಅಪರ ಮುಖ್ಯ ಕಾರ್ಯದರ್ಶಿ(ಗ್ರಾಮೀಣಾಭಿವೃದ್ಧಿ) ಅಂಜುಮ್ ಪರ್ವೇಜ್, ಗ್ರಾಮೀಣಾಭಿವೃದ್ಧಿ ಆಯುಕ್ತ ಪವನ್ ಕುಮಾರ್ ಮಲಪಾಟಿ ಉಪಸ್ಥಿತರಿದ್ದರು.


    Provided by
    Provided by

    ನರೇಗಾ ಯೋಜನೆಯಡಿ ಜಿಲ್ಲೆಗೆ 2023-24ನೇ ಸಾಲಿಗಾಗಿ 42 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ನೀಡಲಾಗಿದ್ದು, 63 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಜಿಲ್ಲೆಯು ಶೇಕಡ 150ರಷ್ಟು ಸಾಧನೆ ಮಾಡಿದೆ. ಈ ಯೋಜನೆಯಡಿ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಾದ ಶಾಲೆ, ಆಸ್ಪತ್ರೆ, ರಸ್ತೆ, ಚರಂಡಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಆದ್ಯತೆ ಮೇರೆಗೆ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

    ಅಲ್ಲದೆ 2023–24ನೇ ಸಾಲಿನಲ್ಲಿ 123 ಕೋಟಿ ರೂ.ವೆಚ್ಚದಲ್ಲಿ 4015 ಶಾಲಾ ಅಭಿವೃದ್ಧಿ, 98 ಕೋಟಿ ರೂ. ವೆಚ್ಚದಲ್ಲಿ 2080 ರಸ್ತೆ ಕಾಮಗಾರಿ, 85 ಕೋಟಿ ರೂ. ವೆಚ್ಚದಲ್ಲಿ 2069 ಚರಂಡಿ ಕಾಮಗಾರಿ, 12 ಕೋಟಿ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ, ಅಂಗನವಾಡಿ, ಸಂಜೀವಿನಿ ಭವನ ಕಾಮಗಾರಿಗಳನ್ನು ಅನುಷ್ಠಾನಿಸಲಾಗಿದೆ.

    ಬರದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಿಷನ್ 500 ಅಭಿಯಾನವನ್ನು ಹಮ್ಮಿಕೊಂಡು ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತಿಯ 400 ರಿಂದ 500 ರೈತರನ್ನು ಗುರುತಿಸಿ ಅವರಿಗೆ ವೈಯಕ್ತಿಕ ಕಾಮಗಾರಿಗಳನ್ನು ನೀಡುವ ಅಭಿಯಾನ ಮಾಡಲಾಗಿದೆ. ಈ ಅಭಿಯಾನದಡಿ ಜಿಲ್ಲೆಯಲ್ಲಿ 2023–24ನೇ ಸಾಲಿನಲ್ಲಿ 52,400 ಬದು ಕಾಮಗಾರಿಗಳನ್ನು ರೈತರಿಗೆ ನೀಡಲಾಗಿದೆ.

    ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ 1010 ಕೆರೆ ಅಭಿವೃದ್ಧಿ, 1450 ನಾಲಾ ಅಭಿವೃದ್ಧಿ, 15200 ಅರಣ್ಯೀಕರಣದ ಕಾಮಗಾರಿಗಳು ಸೇರಿದಂತೆ ತೋಟಗಾರಿಕೆ, ರೇಷ್ಮೆ ಹಾಗೂ ಕೃಷಿ ಇಲಾಖೆಯಲ್ಲಿಯೂ ಉದ್ಯೋಗವನ್ನು ನೀಡಿರುವುದನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

    ಉಜ್ಜಿನಿಗೆ ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ:

    ಕುಣಿಗಲ್ ತಾಲೂಕಿನ ಉಜ್ಜಿನಿ ಗ್ರಾಮ ಪಂಚಾಯಿತಿಗೆ 2025ರ ನರೇಗಾ ಹಬ್ಬದಲ್ಲಿ ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ ದಕ್ಕಿದೆ. 2023-24ನೇ ಸಾಲಿನಲ್ಲಿ 75,000 ಮಾನವ ದಿನಗಳ ಸೃಜನೆ ಮತ್ತು ಸಮುದಾಯ ಆಸ್ತಿಗಳ ಸೃಜನೆಯಲ್ಲಿ ಮುಂಚೂಣಿಯಲ್ಲಿರುವ ಹಿನ್ನೆಲೆಯಲ್ಲಿ ಉಜ್ಜಿನಿ ಗ್ರಾಮ ಪಂಚಾಯಿತಿಗೆ ಈ ಪ್ರಶಸ್ತಿ ಸಿಕ್ಕಿದೆ.

    ಪಾವಗಡ ಗಂಗಮ್ಮಗೆ ಒಲಿದ ಮೇಟ್ ಪ್ರಶಸ್ತಿ :

    ಪಾವಗಡ ತಾಲೂಕಿನ ಸಿಕೆ ಪುರ ಗ್ರಾಮ ಪಂಚಾಯಿತಿಯ ಗಂಗಮ್ಮ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 329 ಕುಟುಂಬಗಳಿಗೆ ಉದ್ಯೋಗ ಕೊಡಿಸಿದ್ದು, ಇದರಲ್ಲಿ 246 ಕುಟುಂಬಗಳು 100 ದಿನಗಳ ನರೇಗಾ ಕೂಲಿಯನ್ನು ಮುಗಿಸುವಲ್ಲಿ ಯಶಸ್ವಿಯಾಗಿವೆ. ಈ ಕಾರಣದಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಪಡಿಸುವ ನಿಟ್ಟಿನಲ್ಲಿ ಸಾಧನೆ ಮಾಡಿದ ಗಂಗಮ್ಮನವರಿಗೆ ಮೇಟ್(ಕಾಯಕ ಬಂಧು) ಪ್ರಶಸ್ತಿ ಲಭಿಸಿದೆ.

    ಪ್ರಶಸ್ತಿ ಸ್ವೀಕರಿಸುವ ವೇಳೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ., ಉಪ ಕಾರ್ಯದರ್ಶಿ ಅಭಿವೃದ್ಧಿ ಸಂಜೀವಪ್ಪ ಕೆ.ಪಿ. ಸೇರಿದಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ನರೇಗಾ ತಾಂತ್ರಿಕ ಸಿಬ್ಬಂದಿ ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುಮಕೂರು: ಹೆತ್ತ ತಾಯಿಯನ್ನೇ ಮಗಳೊಬ್ಬಳು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿ ಅಂತ್ಯಕ್ರಿಯೆಗೆ ಮುಂದಾಗಿದ್ದ…

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.