nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರಮಟ್ಟದ ಯೋಗ: ತೀರ್ಪುಗಾರರಾಗಿ ಸಂದೀಪ ಸಾದುರೆ ಆಯ್ಕೆ

    March 2, 2026

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

    March 2, 2026
    Facebook Twitter Instagram
    ಟ್ರೆಂಡಿಂಗ್
    • ರಾಷ್ಟ್ರಮಟ್ಟದ ಯೋಗ: ತೀರ್ಪುಗಾರರಾಗಿ ಸಂದೀಪ ಸಾದುರೆ ಆಯ್ಕೆ
    • ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ
    • ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    • ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುಷ್ಪರಿಣಾಮ ತಪ್ಪಿಸಲು ನೈಸರ್ಗಿಕ ಕೃಷಿ ಅಗತ್ಯ: ನಿರ್ಮಲ್‍ ಕುಮಾರ್ ಸುರಾಣಾ ಅಭಿಪ್ರಾಯ
    ರಾಜ್ಯ ಸುದ್ದಿ October 29, 2023

    ದುಷ್ಪರಿಣಾಮ ತಪ್ಪಿಸಲು ನೈಸರ್ಗಿಕ ಕೃಷಿ ಅಗತ್ಯ: ನಿರ್ಮಲ್‍ ಕುಮಾರ್ ಸುರಾಣಾ ಅಭಿಪ್ರಾಯ

    By adminOctober 29, 2023No Comments2 Mins Read
    nirmal kumar surana

    ಬೆಂಗಳೂರು: ಕೃಷಿ ಮತ್ತಿತರ ಕ್ಷೇತ್ರದಲ್ಲಿ ಹೊಸ ಪ್ರಯೋಗದ ಕೆಟ್ಟ ಪರಿಣಾಮಗಳು ಕೂಡಲೇ ಗೊತ್ತಾಗುವುದಿಲ್ಲ. ಅಂಥ ದುಷ್ಪರಿಣಾಮಗಳÀನ್ನು ತಪ್ಪಿಸಲು ಸಾವಯವ- ನೈಸರ್ಗಿಕ ಕೃಷಿ ಪದ್ಧತಿ ಅನಿವಾರ್ಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ಅವರು ತಿಳಿಸಿದರು.

    ಬಿಜೆಪಿ ರಾಜ್ಯ ರೈತ ಮೋರ್ಚಾದ ವತಿಯಿಂದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಏರ್ಪಡಿಸಿದ್ದ ‘ನೈಸರ್ಗಿಕ ಕೃಷಿ’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾವಯವ ಕೃಷಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಹೆಚ್ಚಿನ ಪ್ರೋತ್ಸಾಹ ಕೊಡುತ್ತಿದೆ ಎಂದು ವಿವರಿಸಿದರು. ರೈತ ಮೋರ್ಚಾ ಅತ್ಯಂತ ಸಕ್ರಿಯವಾಗಿದೆ ಎಂದು ಮೆಚ್ಚುಗೆ ಸೂಚಿಸಿದರು.


    Provided by
    Provided by

    ಪ್ರಸ್ತುತ 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದ 10 ಜನರಲ್ಲಿ 6 ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಕನಿಷ್ಠ 5-6 ಜನರಿಗೆ ರಕ್ತದೊತ್ತಡ ಇದೆ. ಈ ವಯೋಮಾನದವರಲ್ಲಿ ಯಾವುದಾದರೂ ರೋಗಕ್ಕೆ ಕಾಯಿಲೆಗೆ ಔಷಧಿ ಸೇವಿಸದವರು ಅತ್ಯಂತ ವಿರಳ ಎಂದು ನುಡಿದರು. ಸಾವಯವ- ನೈಸರ್ಗಿಕ ಕೃಷಿ ಮೂಲಕ ಹಲವಾರು ರೋಗಗಳು ಬರದಂತೆ ತಡೆಯಬಹುದೆಂದು ತಿಳಿಸಿದರು.

    ನೈಸರ್ಗಿಕ ಕೃಷಿ ಕ್ಷೇತ್ರದಲ್ಲಿ ನಾವು ಸಾಕಷ್ಟು ಕೆಲಸ ಮಾಡಬೇಕಿದೆ. ಅಭಿವೃದ್ಧಿ ಆದಾಗ ಅದರ ಋಣಾತ್ಮಕ ಪರಿಣಾಮ ನಮ್ಮ ಪರಿಸರದ ಮೇಲೂ ಬೀರುತ್ತದೆ. ಆಹಾರ ಕ್ರಾಂತಿಯಿಂದ ಆಹಾರದ ಸಮಸ್ಯೆ ಪರಿಹಾರವಾಯಿತು. ಆದರೆ, ರೋಗಗಳ ಸಂಖ್ಯೆಯೂ ಹೆಚ್ಚಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

    ಕ್ಯಾನ್ಸರ್ ಇವತ್ತು ಸರ್ವಸಾಮಾನ್ಯವಾಗಿದೆ. 20 ವರ್ಷಗಳ ಕಾಲ ಎಂಡೋ ಸಲ್ಫಾನ್ ಅನ್ನು ಹೆಲಿಕಾಪ್ಟರ್ ಮೂಲಕ ಸಿಂಪಡಿಸುತ್ತಿದ್ದರು. ಇದರಿಂದ ಪುಟ್ಟ ಮಕ್ಕಳು ಬುದ್ಧಿಮಾಂದ್ಯ ಮತ್ತು ಅಂಗವಿಕಲರಾಗಿ ಹುಟ್ಟುವಂತಾಯಿತು ಎಂದು ಮಾಹಿತಿ ನೀಡಿದರು.

    ಬಿಜೆಪಿ ರಾಜ್ಯ ರೈತ ಮೋರ್ಚಾದ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಮಾತನಾಡಿ, ಕೃಷಿಗೆ ಹಲವಾರು ಆಯಾಮಗಳಿವೆ. ನೈಸರ್ಗಿಕ ಕೃಷಿ ಎಂದರೆ ನಿಸರ್ಗದತ್ತ ಕೃಷಿ ಮುಂದುವರಿಸುವಿಕೆ ಎಂದು ತಿಳಿಸಿದರು. ಹಿಂದೆ ಹಸಿರು ಕ್ರಾಂತಿಗೆ ಪೂರಕವಾಗಿ ರಾಸಾಯನಿಕ ಬಳಕೆ ಹೆಚ್ಚಾಯಿತು. ಆರ್ಥಿಕವಾಗಿ ಲಾಭ ಆದರೂ ಆ ಲಾಭದ ಹಣವನ್ನು ಆಸ್ಪತ್ರೆಗೆ ಕೊಡುವಂತಾಯಿತು ಎಂದು ವಿಶ್ಲೇಷಣೆ ಮಾಡಿದರು.

    ಕೃಷಿ ಸುಧಾರಣೆ ವೇಳೆ ವೆಚ್ಚ ಹೆಚ್ಚಾಗಿ ಸಾಲವೂ ಹೆಚ್ಚಾಯಿತು. ಮನುಷ್ಯ ಸತ್ತರೆ ಮಣ್ಣಿಗೆ ಹಾಕಬಹುದು; ಆದರೆ ಮಣ್ಣು ಸತ್ತರೆ ಎಲ್ಲಿ ಹಾಕಬೇಕು ಎಂಬ ರೈತರ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ ಎಂದ ಅವರು, ಮಣ್ಣಿನ ಆರೋಗ್ಯವನ್ನು ಕಾಪಾಡುವುದು ಅನಿವಾರ್ಯ ಎಂದು ತಿಳಿಸಿದರು. ರಸಗೊಬ್ಬರ ಬಳಕೆಯಿಂದ ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ ಎಂದು ವಿವರಿಸಿದರು.
    ಸಗಣಿ, ಗಂಜಲು, ಹಸಿರು ಎಲೆಗಳನ್ನು ಗೊಬ್ಬರವಾಗಿ ಬಳಸಬೇಕು. ನೈಸರ್ಗಿಕ ಕೃಷಿಗೆ ಅದು ಅಗತ್ಯ ಎಂದು ತಿಳಿಸಿದರು. ಶೂನ್ಯ ಬಂಡವಾಳದ ಕೃಷಿಯೂ ಇದೆ ಎಂದ ಅವರು, ಮಣ್ಣಿನ ಗುಣಧರ್ಮ, ನೀರಿನ ಲಭ್ಯತೆ, ಕೃಷಿ ಕೂಲಿಕಾರರ ಲಭ್ಯತೆ, ಹವಾಮಾನದ ಆಧಾರದಲ್ಲಿ ಸೂಕ್ತ ಕೃಷಿ ಬೆಳೆಯ ಕುರಿತು ನಿರ್ಧರಿಸಲು ಸಲಹೆ ನೀಡಿದರು.

    ಕೃಷಿಯ ವಾಣಿಜ್ಯೀಕರಣ ಆಗಿದೆ. ಆದರೆ, ಮತ್ತೊಂದೆಡೆ ಆರೋಗ್ಯ ಕಳಕೊಂಡಿದ್ದೇವೆ ಎಂದು ತಿಳಿಸಿದ ಅವರು, ಸಮಾಜಕ್ಕೆ ಒಳಿತು ಕೊಡುವ ನೈಸರ್ಗಿಕ ಕೃಷಿ ಕುರಿತು ರೈತರಿಗೆ ಮಾಹಿತಿ ಕೊಡಬೇಕು ಎಂದು ತಿಳಿಸಿದರು.

    ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗುರುಲಿಂಗ ಗೌಡ, ರಾಜ್ಯ ಉಪಾಧ್ಯಕ್ಷ ಷಣ್ಮುಖ ಗುರಿಕಾರ, ರಾಜ್ಯ ಕಾರ್ಯದರ್ಶಿ ಡಾ.ನವೀನ್ ಕುಮಾರ್, ರೈತ ಮೋರ್ಚಾ ಮಾಧ್ಯಮ ಸಂಚಾಲಕ ಶರತ್ ಹೆಗಡೆ, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಸಂಚಾಲಕರು ಉಪಸ್ಥಿತರಿದ್ದರು.

    admin
    • Website

    Related Posts

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಷ್ಟ್ರಮಟ್ಟದ ಯೋಗ: ತೀರ್ಪುಗಾರರಾಗಿ ಸಂದೀಪ ಸಾದುರೆ ಆಯ್ಕೆ

    March 2, 2026

    ಔರಾದ: ಯೋಗ ಕ್ಷೇತ್ರದಲ್ಲಿ ಬೀದರ ಜಿಲ್ಲೆಯ ಯುವಕನೊಬ್ಬ ವಿಶಿಷ್ಟ ಸಾಧನೆ ಮಾಡಿದ್ದು, ಜಿಲ್ಲೆಯ ಕ್ರೀಡಾ ವಲಯಕ್ಕೆ ಮತ್ತೊಂದು ಗೌರವ ತಂದಿದ್ದಾನೆ.…

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

    March 2, 2026

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.