ಪಾವಗಡ: ತಾಲ್ಲೂಕಿನ ಕೆಂಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿ ಸಾವಿತ್ರಮ್ಮ ಹಾಗೂ ಕರಿಯಣ್ಣ ಕೆ.ಟಿ. ಅವರ ಪುತ್ರ ನವೀನ್ ಕೆ. ಅವರು ದಾವಣಗೆರೆ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
ಡಾ.ಡಿ.ಜಿ. ಪ್ರಕಾಶ್ ಅವರ ಮಾರ್ಗದರ್ಶನದಲ್ಲಿ “ಭಿನ್ನ ಕ್ರಮದ ಅವಕಲ ಸಮೀಕರಣಗಳ ಪರಿಹಾರಕ್ಕಾಗಿ ಪರಿಣಾಮಕಾರಿ ಸಂಖ್ಯಾತ್ಮಕ ವಿಧಾನಗಳ ಅಭಿವೃದ್ಧಿ ಮತ್ತು ಅವುಗಳ ಪ್ರಾಯೋಗಿಕ ಅನ್ವಯಗಳು” ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ.
ಒಂದು ಸಾಮಾನ್ಯ ಕುಟುಂಬದಿಂದ ಬಂದು ಉನ್ನತ ಶಿಕ್ಷಣದ ಶಿಖರ ತಲುಪಿದ ನವೀನ್ ಅವರ ಸಾಧನೆಗೆ ವಿಶ್ವವಿದ್ಯಾಲಯದ ಬೋಧಕವರ್ಗ, ಸಂಶೋಧಕ ವಿದ್ಯಾರ್ಥಿಗಳು ಹಾಗೂ ಊರಿನ ಹಿತೈಷಿಗಳು ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ವರದಿ : ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


