nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025
    Facebook Twitter Instagram
    ಟ್ರೆಂಡಿಂಗ್
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    • ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್
    • ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ
    • ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನವೀನ್ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಸಿಎಂ ಭರವಸೆ
    ರಾಜ್ಯ ಸುದ್ದಿ March 3, 2022

    ನವೀನ್ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಸಿಎಂ ಭರವಸೆ

    By adminMarch 3, 2022No Comments2 Mins Read
    naveen

    ಉಕ್ರೇನ್‍ ನ ಕರ್ಕೀವ್ ಪಟ್ಟಣದಲ್ಲಿ ರಕ್ಷಾ ಕ್ಷಿಪಣಿಗೆ ಸಾವನ್ನಪ್ಪಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಖಂಡಿತವಾಗಿಯೂ ಸರ್ಕಾರ ಪರಿಹಾರವನ್ನು ನೀಡಲಿದೆ.

    ಇದರ ಬಗ್ಗೆ ಯಾರಿಗೂ ಕೂಡ ಅನುಮಾನ ಬೇಡ. ಆದರೆ ನಮಗೆ ಮೊದಲು ಆತನ ಮೃತದೇಹವನ್ನು ಸ್ವದೇಶಕ್ಕೆ ತರುವುದು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು. ಪರಿಹಾರ ಕೊಡುವುದು ಸರ್ಕಾರದ ಕೈಯಲ್ಲಿದೆ. ಅದು ಕೂಡ ನನ್ನ ಗಮನದಲ್ಲೇ ಇದೆ. ಕುಟುಂಬಸ್ಥರ ಒತ್ತಾಸೆಯಂತೆ ಮೃತದೇಹವನ್ನು ತರಲು ನಮ್ಮ ಪ್ರಯತ್ನಗಳು ಮುಂದುವರೆದಿದೆ ಎಂದರು.


    Provided by
    Provided by
    Provided by

    ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ವಿದೇಶಾಂಗ ವ್ಯವಹಾಗಳ ಇಲಾಖೆ ಕಾರ್ಯದರ್ಶಿ, ಉಕ್ರೇನ್ ಮತ್ತು ರಷ್ಯಾದಲ್ಲಿರುವ ರಾಯಭಾರ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಮೃತದೇಹವನ್ನು ಭಾರತಕ್ಕೆ ತರಲು ನಾವು ಶಕ್ತಿಮೀರಿ ಪ್ರಯತ್ನವನ್ನು ಮಾಡುತ್ತಿದ್ದೇವೆ. ಉಕ್ರೇನ್‍ನಲ್ಲಿ ಪರಿಸ್ಥಿತಿ ಕೈ ಮೀರುತ್ತಿರುವುದರಿಂದ ವಿಳಂಬವಾಗಿದೆ. ಆದರೂ ನಮ್ಮ ಪ್ರಯತ್ನ ನಿಂತಿಲ್ಲ ಎಂದು ಸ್ಪಷ್ಟಪಡಿಸಿದರು.

    ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲು ಸರ್ಕಾರ ಎಲ್ಲ ಪ್ರಯತ್ನ ಮುಂದುವರೆಸಲಾಗಿದೆ.ಯಾವ ಭಾಗದಲ್ಲಿ ಕನ್ನಡಿಗರು ಹೆಚ್ಚಾಗಿದ್ದಾರೋ ಅಂತಹ ಕಡೆಯಿಂದ ಅವರೆಲ್ಲರನ್ನೂ ಸ್ಥಳಾಂತರ ಮಾಡಲು ಮನವಿ ಮಾಡಿರುವುದಾಗಿ ತಿಳಿಸಿದರು.ಕರ್ಕೀವ್ ಸೇರಿದಂತೆ ಬೇರೆ ಬೇರೆ ಭಾಗಗಳಲಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಎರಡೂ ರಾಷ್ಟ್ರಗಳ ನಡುವಿನ ಸಂಘರ್ಷದ ಕಾರಣ ವಿಳಂಭವಾಗುತ್ತಿದೆ. ರೈಲು, ಬಸ್, ರಸ್ತೆ ಮೂಲಕವೂ ಸುರಕ್ಷಿತ ಸ್ಥಳಗಳಿಗೆ ಅವರೆಲ್ಲರನ್ನೂ ಕರೆತರುವ ಪ್ರಯತ್ನ ನಡೆಯುತ್ತಿದೆ.

    ಕೇಂದ್ರ ಸರ್ಕಾರ ಉಕ್ರೇನ್ ಸರ್ಕಾರದ ಜೊತೆ ಮಾತುಕತೆ ನಡೆಸಿ ಸುರಕ್ಷಿತ ವಲಯಗಳಿಗೆ ಸ್ಥಳಾಂತರ ಮಾಡುತ್ತಿದೆ. ಯುದ್ದ ವಲಯವಾಗಿರುವುದರಿಂದ ಭಾರತೀಯರನ್ನು ಸ್ಥಳಾಂತರ ಮಾಡುವುದು ವಿಳಂಬವಾಗುತ್ತಿದೆ ಎಂದರು.ಇಂದು ನನಗೆ ಅಲ್ಲಿಂದ ಕೆಲವರು ನವೀನ್ ಅವರ ಫೋಟೊವನ್ನು ಕಳುಹಿಸಿಕೊಟ್ಟಿದ್ದರು. ಇದು ಅವನದೇ ಮೃತದೇಹ ಎಂಬುದು ದೃಢಪಟ್ಟಿದೆ. ನವೀನ್ ಜೊತೆಗಿದ್ದ ಸ್ನೇಹಿತರು ಕೂಡ ಇದನ್ನು ಖಚಿತಪಡಿಸಿದ್ದಾರೆ. ಸದ ಮೃತದೇಹವನ್ನು ಸುರಕ್ಷಿತವಾಗಿಡುವ ಕಾರ್ಯ ಮುಂದುವರೆದಿದೆ ಎಂದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!

    September 15, 2025

    ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್

    September 15, 2025

    ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ

    September 15, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025

    ಹಾದನೂರು ಚಂದ್ರ ಸರಗೂರು: ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ನೆರವಾಗುವ ಸಲುವಾಗಿ ತಮ್ಮ ಸ್ವಂತ ಹಣ ಹಾಗೂ ಪ್ರದೇಶವನ್ನು ಬಡಗಿಯೊಬ್ಬರು…

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.