ಬೆಳಗಾವಿ: ಹಿಂದೂಗಳಾಗಿ ಹುಟ್ಟಿದ ನಾವು ಹಿಂದೂಗಳಾಗಿಯೇ ಸಾಯುತ್ತೇವೆ. ಬಿಜೆಪಿಯವರದ್ದು ನಾಟಕ. ಒಳಗಿಂದ ನಮ್ಮಲ್ಲಿ ಹಿಂದುತ್ವವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಾಂಧಿ ಹಾಗೂ ಅಂಬೇಡ್ಕರ್ ಸೇರಿದಂತೆ ಮಹನೀಯರ ಫೋಟೋ ಹಾಕ್ತೀವಿ ಅಂತ ಸ್ಪೀಕರ್ ಹೇಳಿದರು. ಆದ್ರೆ ಇಲ್ಲಿ ಬಂದ ಬಳಿಕ ಸಾವರ್ಕರ್ ಫೋಟೋ ಹಾಕುವ ವಿಚಾರ ತಿಳಿಯಿತು. ಸಾವರ್ಕರ್ ವಿವಾದಿತ ವ್ಯಕ್ತಿ ಅಂತ ಎಲ್ಲರಿಗೂ ಗೊತ್ತು ಎಂದು ಅವರು ಇದೇ ವೇಳೆ ಹೇಳಿದರು.
ಕಮಿಷನ್, ಹಗರಣ, ಮತದಾರರ ಪಟ್ಟಿ ಹಗರಣ ವಿಚಾರ ಚರ್ಚೆಯಾಗಬಾರದು ಅನ್ನೋ ಕಾರಣಕ್ಕೆ ಈ ವಿವಾದವನ್ನು ಬಿಜೆಪಿಯವರು ತಂದಿಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


