nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
    • ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಳ್ಳಕೆರೆ: ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವ
    ಜಿಲ್ಲಾ ಸುದ್ದಿ March 21, 2022

    ಚಳ್ಳಕೆರೆ: ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವ

    By adminMarch 21, 2022No Comments2 Mins Read
    nayakana hatti

    ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವಕ್ಕೆ ಭಾನುವಾರ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

    ಶಿಷ್ಟ ಹಾಗೂ ಬುಡಕಟ್ಟು ಸಂಸ್ಕೃತಿ ಮೇಳೈಸಿರುವ ನಾಡಿನ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಕರ್ನಾಟಕ ಮಾತ್ರವಲ್ಲ ಆಂಧ್ರ ಪ್ರದೇಶದಿಂದಲೂ ಸಾವಿರಾರು ಭಕ್ತರು ಆಗಮಿಸಿದರು.


    Provided by
    Provided by

    ಚಿತ್ರದುರ್ಗ ಜಿಲ್ಲಾಡಳಿತ ಜಾತ್ರೆಗಾಗಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿತು. ಕಳೆದ ಮಾರ್ಚ್ 16ರಂದು ರಥಕ್ಕೆ ಕಳಸ ಸ್ಥಾಪನೆ ಮತ್ತು ರಾತ್ರಿ ಗಜವಾಹನೋತ್ಸವ ನಡೆಯಿತು.  ಗುರುವಾರ ಸಿಂಹ ವಾಹನೋತ್ಸವ, ಶುಕ್ರವಾರ ಅಶ್ವವಾಹನೋತ್ಸವ ನಡೆಯಿತು.  ಮಾರ್ಚ್ 19ರಂದು ರಥಕ್ಕೆ ತೈಲಾಭಿಷೇಕ  ನಡೆಯಿತು. ಮಾರ್ಚ್ 20ರಂದು ಪ್ರಾತಃ ಕಾಲದಲ್ಲಿ ವೃಷಭ ವಾಹನದೊಂದಿಗೆ ಚಿಕ್ಕ ರಥೋತ್ಸವ ಭಾನುವಾರದಂದು ನಡೆಯಿತು.

    ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ ರವರ ಆದೇಶದ ಪ್ರಕಾರ “ರಥೋತ್ಸವಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ದೇವಾಲಯದ ಇಒ ಹಾಗೂ ಇನ್ನಿತರೆ ಇಲಾಖೆ ಅಧಿಕಾರಿಗಳು ಕೈಗೊಂಡರು.

    ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವಿವಿಧ ಘಟಕಗಳಿಂದ 60 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಗಳನ್ನು ಸಹ ಆಡಳಿತ ಅಧಿಕಾರಿಗಳು ಕಲ್ಪಿಸಿದರು.

    ಪ್ರಯಾಣಿಕರ ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದರು. ಜಾತ್ರೆಗೆ ಆಗಮಿಸುವ ಭಕ್ತರು ವಾಹನಗಳನ್ನು ನಿಲ್ಲಿಸಲು 7 ಕಡೆ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲಾಗಿತ್ತು.

    ಇನ್ನೂ ಸಚಿವ ಬಿ. ಶ್ರೀರಾಮುಲು ಸಹ ಅಧಿಕಾರಿಗಳ ಜೊತೆ ಸಭೆ ನಡೆಸಿ, ಭಕ್ತರಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.

    ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಗ್ರಾಮವು ಅವಧೂತ ಪರಂಪರೆಗೆ ಸೇರಿದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪವಾಡ ಮಾಡಿದ ಸ್ಥಳ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತೆಲಗು ಮತ್ತು ಕನ್ನಡ ಭಾಷಿಕರನ್ನು ಬೆಸೆಯುವ ಧಾರ್ಮಿಕ ಸ್ಥಳವಾಗಿದೆ.

    ಈ‌ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ‌ ಶಾಸಕ, ಮಾಜಿ ಸಚಿವ  ಡಿ.ಸುಧಾಕರ್ , ಚಳ್ಳಕೆರೆ ತಾಲ್ಲೂಕು ತಹಶೀಲ್ದಾರರಾದ ರಘುಮೂರ್ತಿ, ಚಿತ್ರದುರ್ಗ ವರಿಷ್ಠ ಅಧಿಕಾರಿಯಾದ ಎಸ್ ಪಿ ಪರಶುರಾಮ್ ಹಾಗೂ ಎಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

    ವರದಿ:  ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ರಾಜಧಾನಿಯಲ್ಲಿ ವಿಐಪಿ ಸಂಚಾರದ ಹೆಸರಿನಲ್ಲಿ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಗೆ ಸಂಬಂಧಿಸಿದಂತೆ ಮತ್ತೊಂದು ಆಕ್ರೋಶದ ಘಟನೆ ಮುನ್ನೆಲೆಗೆ ಬಂದಿದೆ.…

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.