ಚಾಮರಾಜನಗರ: ತಾಯಿ ಮತ್ತು ಇಬ್ಬರು ಮಕ್ಕಳು ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಗುಂಡಲ್ ನಲ್ಲಿ ನಡೆದಿದೆ. ಪುದೂರು ಗ್ರಾಮದ ಮೀನಾ(33), ಪವಿತ್ರಾ(13), ಕೀರ್ತಿ(12) ಮೃತ ದುರ್ದೈವಿಗಳಾಗಿದ್ದಾರೆ.
ಜಲಾಶಯದಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ತಾಯಿ ಮೀನಾ ಕಾಲುಜಾರಿ ಜಲಾಶಯಕ್ಕೆ ಬಿದ್ದಿದ್ದಾರೆ. ತಾಯಿ ಬಿದ್ದದ್ದನ್ನು ಕಂಡ ತಾಯಿ ರಕ್ಷಿಸಲು ಹೋಗಿ ಇಬ್ಬರು ಮಕ್ಕಳು ಸಹ ನೀರು ಪಾಲಾಗಿದ್ದಾರೆ. ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296