ಹೃದಯಘಾತ ಒಳಗಾಗಿದ್ದ ನೀರುವಿತರಕರೊಬ್ಬರು ಚಿಕಿತ್ಸೆ ಪಡೆದು ಮರಳಿ ಕೆಲಸಕ್ಕೆ ಆಗಮಿಸುವ ವೇಳೆ ಕೆಲಸ ನೀಡಲು ನಿರಾಕರಿಸಿದ ಘಟನೆ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಪಂಚಾಯತ್ ನ ಕ್ರಮವನ್ನು ಖಂಡಿಸಿ ಸಂತ್ರಸ್ತ ಹಾಗೂ ಕುಟುಂಬದ ಸದಸ್ಯರು ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಧರಣಿ ನಡೆಸಿದ್ದು, ತಕ್ಷಣವೇ ಕೆಲಸಕ್ಕೆ ಮರುನೇಮಕ ಮಾಡುವಂತೆ ಒತ್ತಾಯಿಸಿದರು.
ಹೃದಯಘಾತ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಕಛೇರಿಗೆ ಕೆಲಸಕ್ಕೆ ಹಾಜರಾಗಲು ಹೋದರೆ, ಗ್ರಾಮ ಪಂಚಾಯಿತಿ ಆಡಳಿತ ನೀರುವಿತರಕ ಹುದ್ದೆಯಿಂದ ನಿನ್ನನ್ನು ವಜಾಕರಿಸಲಾಗಿದೆ ಎಂದು ಹೇಳಿದೆ. ಇದರಿಂದಾಗಿ ನನ್ನ ಕುಟುಂಬವೇ ಇಂದು ಬೀದಿಗೆ ಬರುವ ಪರಿಸ್ಥಿತಿ ಎದುರಾಗಿದೆ ಎಂದು ನೊಂದ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ನೌಕರ ಕೃಷ್ಣಚಾರಿ ಅಳಲು ತೋಡಿಕೊಂಡಿದ್ದಾರೆ.
ನಾನು 2014 ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಗೆ ನೀರು ವಿತರಕನಾಗಿ ಕೆಲಸಕ್ಕೆ ಸೇರಿದ್ದು, ಪ್ರಾಮಾಣಿಕವಾಗಿ ಕೆಲಸ ನಿರ್ವಹಣೆ ಮಾಡುತ್ತಿದ್ದೆ. ಇತ್ತೀಚೆಗೆ ನಾನು ಹೃದಯಘಾತಕ್ಕೆ ಒಳಗಾಗಿ ಆಸ್ಪತ್ರೆ ಸೇರಿ ಸುಮಾರು 8 ಇಂಚಿನಷ್ಟು ಬೈಪಾಸ್ ಸರ್ಜರಿ ಮಾಡಿದ್ದಾರೆ. ಈ ಸಮಯದಲ್ಲಿ ನಾನು ಕೆಲಸಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ಇದೇ ನೆಪವೊಡ್ಡಿ ನನ್ನನ್ನು ಕೆಲಸದಿಂದ ವಜಾಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ.
ನಮ್ಮ ಕುಟುಂಬ ಇದೇ ನನ್ನ ವೃತ್ತಿಯಿಂದ ಜೀವನ ನಡೆಸುತ್ತಿದ್ದು, ನಾನು ಈಗಾಗಲೇ ಸಂಬಂಧ ಪಟ್ಟ ಕಾರ್ಯನಿರ್ವಾಹಕ ಅಧಿಕಾರಿಗಳು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಆದರೆ ನನ್ನನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳುವ ಬಗ್ಗೆ ಪಂಚಾಯಿತಿ ಆಡಳಿಕ್ಕೆ.ಅಧಿಕಾರಿಗಳಿಗೆ ಮನವಿ ಮಾಡಿದರು ಕ್ರಮವಹಿಸುತ್ತಿಲ್ಲ ನನಗೆ ಕೆಲಸಕ್ಕೆ ನೇಮಕ ಮಾಡಿಕೊಳ್ಳದಿದ್ದರೆ ,ನನ್ನ ಕುಟುಂಬ ಪಂಚಾಯಿತಿ ಮುಂಭಾಗ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬೇಕಾಗುತ್ತದೆ ಎಂದು ಕುಟುಂಬ ಸದಸ್ಯರು ಅಳಲನ್ನು ತೋಡಿಕೊಂಡರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5