nammatumakuru

    Subscribe to Updates

    Get the latest creative news from FooBar about art, design and business.

    What's Hot

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025
    Facebook Twitter Instagram
    ಟ್ರೆಂಡಿಂಗ್
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    • ಬೀದರ್ | 1. 34 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ನಾಶ
    • ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ… | ಸ್ವಾಮಿ ವಿವೇಕಾನಂದ.
    ಲೇಖನ December 15, 2021

    ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ… | ಸ್ವಾಮಿ ವಿವೇಕಾನಂದ.

    By adminDecember 15, 2021No Comments2 Mins Read
    vivekananda

    ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ…..

                    ಸ್ವಾಮಿ ವಿವೇಕಾನಂದ..


    Provided by
    Provided by
    Provided by

                       

    ಇಲ್ಲದಿದ್ದರೆ…..

    ಒಂದೇ ಕುಟುಂಬಗಳು,

    ಒಂದೇ ಮನೆತನಗಳು,

    ಒಂದೇ ರಕ್ತ ಸಂಬಂಧಗಳು,

    ಒಂದೇ ಹಣ ದಾಹಿಗಳು,

    ಒಂದೇ ಜಾತಿಯವರುಗಳು,

    ಒಂದೇ ಭ್ರಷ್ಟಾಚಾರಿಗಳು,

    ಒಂದೇ ಸುಳ್ಳುಗಾರರು,

    ಒಂದೇ ಮತಾಂಧರು,

    ಒಂದೇ ಮೌಢ್ಯದವರು,

     ಹೀಗೆ ಅವರುಗಳೇ ನಮ್ಮ ಬದುಕನ್ನು ನಿಯಂತ್ರಿಸುತ್ತಾರೆ. ನಾವು ಅವರ ಅಡಿಯಾಳುಗಳಾಗಿ ಇಡೀ ನಮ್ಮ ಜೀವನವನ್ನು ಅವರ ನೆರಳಿನಲ್ಲಿ ಕಳೆಯಬೇಕಾಗುತ್ತದೆ. ನಮ್ಮ ಸ್ವಾತಂತ್ರ್ಯ, ನಮ್ಮ ಚಿಂತನೆ, ನಮ್ಮ ಕ್ರಿಯಾತ್ಮಕತೆಗೆ ಬೆಲೆಯೇ ಇರುವುದಿಲ್ಲ.

     ಕರ್ನಾಟಕದ ವಿಧಾನಸಭೆಯ ಮೇಲ್ಮನೆ ಕೆಳಮನೆಗಳಿಗೆ ಆಯ್ಕೆಯಾಗುವ ಜನ ಪ್ರತಿನಿಧಿಗಳ ಗುಣಮಟ್ಟ ನೋಡಿದರೆ ಮತದಾರರ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ಉಂಟಾಗುತ್ತದೆ.

    ಅದಕ್ಕಾಗಿಯೇ ಸ್ವಾಮಿ ವಿವೇಕಾನಂದರ ಮಾತಿನಂತೆ ನಾವು ಮಾತ್ರವಲ್ಲ ಇತರರನ್ನು ಎಚ್ಚರಗೊಳಿಸುವ ಜವಾಬ್ದಾರಿ ನಮ್ಮದಾಗಬೇಕು.

    ಅದು ಯಾವ ನಿಟ್ಟಿನಲ್ಲಿ ಇರಬೇಕೆಂದರೆ……..

    ಒಬ್ಬ ಅಧಿಕಾರಿಗೆ ಲಂಚದ ಹಣ ಇನ್ನೊಬ್ಬರ ಬೆವರು – ಎಂಜಲು ಎನಿಸಬೇಕು.

    ಶ್ರೀಮಂತರ ಚಿನ್ನ, ಒಡವೆ, ಕಾರುಗಳ ಪ್ರದರ್ಶಕ ಮನೋಭಾವ, ಜನ ಸಾಮಾನ್ಯರಿಗೆ ಅಸಹ್ಯ ತರಿಸಬೇಕು.

    ಕೋಟ್ಯಾಂತರ ರೂಪಾಯಿ ಖರ್ಚಿನ ಮದುವೆಗಳು,

    ಪ್ರಜೆಗಳಿಗೆ ಬಹಳಷ್ಟು ಕೋಪ ಬರಿಸಬೇಕು.

    ಈ ಮದುವೆಗಳ ಟಿವಿ ಚಾನಲ್ ನೇರ ಪ್ರಸಾರ ವೀಕ್ಷಕರಿಗೆ ವಾಕರಿಕೆ ಬರುವಂತಾಗಬೇಕು.

    ಪುಢಾರಿಗಳಿಗೆ ಜೈಕಾರ ಹಾಕುವುದು ಜನರಿಗೆ ಅವಮಾನವೆನಿಸಬೇಕು.

    ಅಯೋಗ್ಯ ಸ್ವಾಮಿ ಪಾದ್ರಿ ಮೌಲ್ವಿಗಳ  ಕಾಲು ಮುಗಿಯಲು ಭಕ್ತರಿಗೆ ನಾಚಿಕೆಯಾಗಬೇಕು.

    ಜ್ಯೋತಿಷಿಗಳ ಬಳಿ ಕೈ ತೋರಿಸಿ ಭವಿಷ್ಯವನ್ನು  ಕೇಳುವವರಿಗೆ ತಮ್ಮ ಬಗ್ಗೆ ಕೀಳರಿಮೆ ಬರಬೇಕು.

    ಜಾತಿಯ ಸಮಾವೇಶಗಳಲ್ಲಿ ಭಾಗವಹಿಸಲು ಜನರ ಮನಸ್ಸಿಗೆ ಕಹಿ ಎನಿಸಬೇಕು.

    ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಸಾಹಿತಿಗಳ ಮನಸ್ಸಿಗೆ ನೋವಾಗಬೇಕು.

    ಸನ್ಮಾನಿಸಿಕೊಳ್ಳುವ ನಕಲಿ ಸಮಾಜ ಸೇವಕರಿಗೆ ಆತ್ಮಸಾಕ್ಷಿ  ಚುಚ್ಚಬೇಕು.

    ಬಡವರ ನರಳಾಟ ರಾಜಕಾರಣಿಗಳಿಗೆ ಕಣ್ಣೀರು ಬರಿಸಬೇಕು.

    ಇಲ್ಲದವರ ಮುಂದೆ ಸೂಟು ಬೂಟುಗಳು ಅಸಹ್ಯ ಹುಟ್ಟಿಸಬೇಕು.

    ಗುಡಿಸಲ ಮುಂದೆ ಭವ್ಯ ಬಂಗಲೆಗಳಲ್ಲಿರುವವರಿಗೆ ಪಶ್ಚಾತ್ತಾಪವಾಗಬೇಕು.

    ವರದಕ್ಷಿಣೆಯ ಹಣ ತೆಗೆದುಕೊಳ್ಳುವವರಿಗೆ ಪ್ರಾಣಸಂಕಟವಾಗಬೇಕು.

    ಹೀಗೆ ನಿಮಗನಿಸಿದಲ್ಲಿ ನೀವು ಮಾನವೀಯವಾಗಿರುವಿರೆಂದು ಭಾವಿಸಬಹುದು.

    ಹೀಗೆ ನಿಮಗೆ ಆತ್ಮಾವಲೋಕನವಾದಲ್ಲಿ ನೀವು ನಾಗರಿಕರೆಂದು ಹೇಳಬಹುದು.

    ಈ ಅರಿವು ನಿಮಗಾದಲ್ಲಿ ನಿಮ್ಮ ವ್ಯಕ್ತಿತ್ವ ಉತ್ತಮ ಮಟ್ಟದಲ್ಲಿ ರೂಪಗೊಂಡಿದೆಯೆಂದು ತಿಳಿಯಬಹುದು.

    ಈ ಅರಿವು ಮೂಡುವವರೆಗೂ ನಾವಿನ್ನು ಅನಾಗರಿಕರು ಎಂದೇ ಪರಿಗಣಿಸಬೇಕು………

     

    ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.

    ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,

    ಮನಸ್ಸುಗಳ ಅಂತರಂಗದ ಚಳವಳಿ

    ವಿವೇಕಾನಂದ. ಹೆಚ್.ಕೆ.

    9844013068

     

     

    admin
    • Website

    Related Posts

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಮಹಾಲಯ ಅಮಾವಾಸ್ಯೆ  | ಪಿತೃ ಪಕ್ಷ – ಎಡೆ ಹಬ್ಬ

    September 22, 2025

    ಬೆಳಕಿನ ವೇಗದ ಬಗ್ಗೆ ಒಂದು ಸಣ್ಣ ಆತ್ಮಾವಲೋಕನ

    August 13, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ನಾನು ಈ ಲೇಖನವನ್ನು ಬರೆಯುತ್ತಿರುವ ಸಂದರ್ಭದಲ್ಲಿ ಈ ಹಿಂದೆ ಆತ್ಮಗಳಿಗೆ ಸಂಬಂಧಿಸಿದಂತೆ ಯಾವ ಲೇಖನವನ್ನೂ ಓದಿರುವುದಿಲ್ಲ ಎಂದು ಸ್ಪಷ್ಟೀಕರಣ ಮಾಡುತ್ತಾ…

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.