nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 13, 2026

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
    • ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ
    • ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
    • ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ
    • ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    • ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ… | ಸ್ವಾಮಿ ವಿವೇಕಾನಂದ.
    ಲೇಖನ December 15, 2021

    ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ… | ಸ್ವಾಮಿ ವಿವೇಕಾನಂದ.

    By adminDecember 15, 2021No Comments2 Mins Read
    vivekananda

    ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ…..

                    ಸ್ವಾಮಿ ವಿವೇಕಾನಂದ..


    Provided by
    Provided by

                       

    ಇಲ್ಲದಿದ್ದರೆ…..

    ಒಂದೇ ಕುಟುಂಬಗಳು,

    ಒಂದೇ ಮನೆತನಗಳು,

    ಒಂದೇ ರಕ್ತ ಸಂಬಂಧಗಳು,

    ಒಂದೇ ಹಣ ದಾಹಿಗಳು,

    ಒಂದೇ ಜಾತಿಯವರುಗಳು,

    ಒಂದೇ ಭ್ರಷ್ಟಾಚಾರಿಗಳು,

    ಒಂದೇ ಸುಳ್ಳುಗಾರರು,

    ಒಂದೇ ಮತಾಂಧರು,

    ಒಂದೇ ಮೌಢ್ಯದವರು,

     ಹೀಗೆ ಅವರುಗಳೇ ನಮ್ಮ ಬದುಕನ್ನು ನಿಯಂತ್ರಿಸುತ್ತಾರೆ. ನಾವು ಅವರ ಅಡಿಯಾಳುಗಳಾಗಿ ಇಡೀ ನಮ್ಮ ಜೀವನವನ್ನು ಅವರ ನೆರಳಿನಲ್ಲಿ ಕಳೆಯಬೇಕಾಗುತ್ತದೆ. ನಮ್ಮ ಸ್ವಾತಂತ್ರ್ಯ, ನಮ್ಮ ಚಿಂತನೆ, ನಮ್ಮ ಕ್ರಿಯಾತ್ಮಕತೆಗೆ ಬೆಲೆಯೇ ಇರುವುದಿಲ್ಲ.

     ಕರ್ನಾಟಕದ ವಿಧಾನಸಭೆಯ ಮೇಲ್ಮನೆ ಕೆಳಮನೆಗಳಿಗೆ ಆಯ್ಕೆಯಾಗುವ ಜನ ಪ್ರತಿನಿಧಿಗಳ ಗುಣಮಟ್ಟ ನೋಡಿದರೆ ಮತದಾರರ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ಉಂಟಾಗುತ್ತದೆ.

    ಅದಕ್ಕಾಗಿಯೇ ಸ್ವಾಮಿ ವಿವೇಕಾನಂದರ ಮಾತಿನಂತೆ ನಾವು ಮಾತ್ರವಲ್ಲ ಇತರರನ್ನು ಎಚ್ಚರಗೊಳಿಸುವ ಜವಾಬ್ದಾರಿ ನಮ್ಮದಾಗಬೇಕು.

    ಅದು ಯಾವ ನಿಟ್ಟಿನಲ್ಲಿ ಇರಬೇಕೆಂದರೆ……..

    ಒಬ್ಬ ಅಧಿಕಾರಿಗೆ ಲಂಚದ ಹಣ ಇನ್ನೊಬ್ಬರ ಬೆವರು – ಎಂಜಲು ಎನಿಸಬೇಕು.

    ಶ್ರೀಮಂತರ ಚಿನ್ನ, ಒಡವೆ, ಕಾರುಗಳ ಪ್ರದರ್ಶಕ ಮನೋಭಾವ, ಜನ ಸಾಮಾನ್ಯರಿಗೆ ಅಸಹ್ಯ ತರಿಸಬೇಕು.

    ಕೋಟ್ಯಾಂತರ ರೂಪಾಯಿ ಖರ್ಚಿನ ಮದುವೆಗಳು,

    ಪ್ರಜೆಗಳಿಗೆ ಬಹಳಷ್ಟು ಕೋಪ ಬರಿಸಬೇಕು.

    ಈ ಮದುವೆಗಳ ಟಿವಿ ಚಾನಲ್ ನೇರ ಪ್ರಸಾರ ವೀಕ್ಷಕರಿಗೆ ವಾಕರಿಕೆ ಬರುವಂತಾಗಬೇಕು.

    ಪುಢಾರಿಗಳಿಗೆ ಜೈಕಾರ ಹಾಕುವುದು ಜನರಿಗೆ ಅವಮಾನವೆನಿಸಬೇಕು.

    ಅಯೋಗ್ಯ ಸ್ವಾಮಿ ಪಾದ್ರಿ ಮೌಲ್ವಿಗಳ  ಕಾಲು ಮುಗಿಯಲು ಭಕ್ತರಿಗೆ ನಾಚಿಕೆಯಾಗಬೇಕು.

    ಜ್ಯೋತಿಷಿಗಳ ಬಳಿ ಕೈ ತೋರಿಸಿ ಭವಿಷ್ಯವನ್ನು  ಕೇಳುವವರಿಗೆ ತಮ್ಮ ಬಗ್ಗೆ ಕೀಳರಿಮೆ ಬರಬೇಕು.

    ಜಾತಿಯ ಸಮಾವೇಶಗಳಲ್ಲಿ ಭಾಗವಹಿಸಲು ಜನರ ಮನಸ್ಸಿಗೆ ಕಹಿ ಎನಿಸಬೇಕು.

    ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಸಾಹಿತಿಗಳ ಮನಸ್ಸಿಗೆ ನೋವಾಗಬೇಕು.

    ಸನ್ಮಾನಿಸಿಕೊಳ್ಳುವ ನಕಲಿ ಸಮಾಜ ಸೇವಕರಿಗೆ ಆತ್ಮಸಾಕ್ಷಿ  ಚುಚ್ಚಬೇಕು.

    ಬಡವರ ನರಳಾಟ ರಾಜಕಾರಣಿಗಳಿಗೆ ಕಣ್ಣೀರು ಬರಿಸಬೇಕು.

    ಇಲ್ಲದವರ ಮುಂದೆ ಸೂಟು ಬೂಟುಗಳು ಅಸಹ್ಯ ಹುಟ್ಟಿಸಬೇಕು.

    ಗುಡಿಸಲ ಮುಂದೆ ಭವ್ಯ ಬಂಗಲೆಗಳಲ್ಲಿರುವವರಿಗೆ ಪಶ್ಚಾತ್ತಾಪವಾಗಬೇಕು.

    ವರದಕ್ಷಿಣೆಯ ಹಣ ತೆಗೆದುಕೊಳ್ಳುವವರಿಗೆ ಪ್ರಾಣಸಂಕಟವಾಗಬೇಕು.

    ಹೀಗೆ ನಿಮಗನಿಸಿದಲ್ಲಿ ನೀವು ಮಾನವೀಯವಾಗಿರುವಿರೆಂದು ಭಾವಿಸಬಹುದು.

    ಹೀಗೆ ನಿಮಗೆ ಆತ್ಮಾವಲೋಕನವಾದಲ್ಲಿ ನೀವು ನಾಗರಿಕರೆಂದು ಹೇಳಬಹುದು.

    ಈ ಅರಿವು ನಿಮಗಾದಲ್ಲಿ ನಿಮ್ಮ ವ್ಯಕ್ತಿತ್ವ ಉತ್ತಮ ಮಟ್ಟದಲ್ಲಿ ರೂಪಗೊಂಡಿದೆಯೆಂದು ತಿಳಿಯಬಹುದು.

    ಈ ಅರಿವು ಮೂಡುವವರೆಗೂ ನಾವಿನ್ನು ಅನಾಗರಿಕರು ಎಂದೇ ಪರಿಗಣಿಸಬೇಕು………

     

    ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.

    ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,

    ಮನಸ್ಸುಗಳ ಅಂತರಂಗದ ಚಳವಳಿ

    ವಿವೇಕಾನಂದ. ಹೆಚ್.ಕೆ.

    9844013068

     

     

    admin
    • Website

    Related Posts

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!

    January 9, 2026

    ಉದ್ಧಟತನ ಕಲಿಸಿದ ಪಾಠ

    January 7, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತಿಪಟೂರು: ಟ್ಯೂಷನ್ ಗೆ ಹೋಗಿದ್ದ ಬಾಲಕ ನಾಪತ್ತೆಯಾಗಿದ್ದ  ಪ್ರಕರಣ ಸುಖಾಂತ್ಯವಾಗಿದ್ದು, ಕೊನೆಗೂ ನಾಪತ್ತೆಯಾಗಿದ್ದ ಬಾಲಕ ತಾಯಿ ಮಡಿಲು ಸೇರಿದ್ದಾನೆ. ಮಾಹಿತಿಗಳ…

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 13, 2026

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.