nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ
    ಪಾವಗಡ February 5, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    By adminFebruary 5, 2026No Comments2 Mins Read
    pavagada

    ಪಾವಗಡ: ನಿರಂತರವಾಗಿರುವ ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯತೆ ದೇಶಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾರಿ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು. ಅವರು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎಸ್.ಎಸ್.ಕೆ. ರಂಗಮಂದಿರದಲ್ಲಿ ಮಂಗಳವಾರ 8ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

    ಶಿಕ್ಷಣ ದೇಶದಲ್ಲಿ ದೊಡ್ಡಮಟ್ಟದ ಪಲ್ಲಟ ಉಂಟುಮಾಡಿದೆ. ಸೆರೆಮನೆಯಲ್ಲಿದ್ದ ಶಿಕ್ಷಣ ಹಳ್ಳಿಗಳಿಗೆ, ಹಟ್ಟಿಗಳಿಗೆ, ಮಣ್ಣಿನ ಮನೆಗಳಿಗೆ, ಪ್ರತಿಯೊಬ್ಬರಲ್ಲಿ ಹರಿದುಬಂದಾಗ ಅಕ್ಷರಸ್ಥರು ಬೆಳೆದು ವಿದ್ಯಾವಂತರಾದರು. ಸಮುದಾಯಗಳ ಪ್ರಗತಿಯ ಪರ್ವ ಪ್ರಾರಂಭವಾಯಿತು. ಆದರೆ ಇಂದು ಶೇಕಡಾವಾರು ಫಲಿತಾಂಶಕ್ಕೆ ಮನ್ನಣೆ ನೀಡಲಾಗುತ್ತಿದ್ದು, ಪ್ರಗತಿ ಬದಲಾಗಿ ಅಂಕ ಆಧಾರಿತವಾಗಿ ದೊರೆಯುತ್ತಿರುವ ಶಿಕ್ಷಣವನ್ನು ಗುಣಮಟ್ಟದ ಶಿಕ್ಷಣ ಎಂದು ಕರೆಯಲಾಗುವುದಿಲ್ಲ ಎಂದರು.


    Provided by
    Provided by

    ಕನಿಷ್ಠ ಪ್ರಾಥಮಿಕ ಶಿಕ್ಷಣವಾದರೂ ಏಕರೂಪವಾಗಿರಬೇಕು ಮತ್ತು ಉನ್ನತ ಶಿಕ್ಷಣ ಬಹುರೂಪಿಯಾಗಿರಬೇಕು. ಗಡಿಭಾಗಗಳಲ್ಲಿ ಅನಿವಾರ್ಯವಾಗಿ ಕನಿಷ್ಠ ಎರಡು ಭಾಷೆಗಳು ಮತ್ತು ಎರಡು, ಮೂರು ಸಂಸ್ಕೃತಿಗಳಿರುವುದು ಸಹಜ. ಈ ಪ್ರದೇಶ ಕೊನೆಯಲ್ಲಿ ಇರುವುದರಿಂದ ಆಳುವವರ ನಿರ್ಲಕ್ಷ್ಯಕ್ಕೆ ಒಳಗಾಗುವುದು ಉಂಟು. ಗಡಿನಾಡು ಪ್ರಗತಿಗಾಗಿ ಸ್ಥಾಪನೆಗೊಂಡಿರುವ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದಿಂದ ಅಗತ್ಯ ಅನುದಾನಗಳು ದೊರೆಯುತ್ತಿವೆ. ಆದರೆ ಅದನ್ನು ಕೇಳಿ ಪಡೆಯುವಲ್ಲಿ ಜನತೆ ಮತ್ತು ಜನಪ್ರತಿನಿಧಿಗಳು ಹಿಂದುಳಿದಿರುವುದು ಸರಿಯಲ್ಲ ಎಂದರು.

    ಕನ್ನಡ ಭವನ:

    ಭವಿಷ್ಯದ ಪ್ರಜೆಯನ್ನು, ಪ್ರತಿಭೆಯನ್ನು ರೂಪಿಸುವ ಅಂಗನವಾಡಿ, ಸರ್ಕಾರಿ ಪ್ರಾಥಮಿಕ ಶಾಲೆಗಳು ಸೇರಿದಂತೆ ಪದವಿಪೂರ್ವ ಶಿಕ್ಷಣದವರೆಗೆ ಸರಿಯಾದ ಶಿಕ್ಷಣ ದೊರೆಯದಿದ್ದರೆ ಭವಿಷ್ಯ ಬರಡಾಗುತ್ತದೆ. ಅಂಗನವಾಡಿ, ಎಲ್.ಕೆ.ಜಿ, ಯು.ಕೆ.ಜಿ ಎಂಬಂತೆ ಪ್ರಾರಂಭಿಕ ಹಂತದಲ್ಲಿ ಹಸುಗೂಸುಗಳಿಗೆ ಶೈಕ್ಷಣಿಕ ಅಸಮಾನತೆ ಬಿತ್ತುವ ನಿಲುವಿಗೆ ಧಿಕ್ಕಾರ ಕೂಗಬೇಕಾಗಿದೆ. ಗಡಿನಾಡಿನಲ್ಲಿ ಕನ್ನಡ ಭವನ ಇಲ್ಲವೆಂದರೆ ಅದರಿಂದ ಸರ್ಕಾರ ಅವಮಾನ ಪಡಬೇಕು. ಇಲಾಖೆಗೆ ಅರ್ಜಿ ಸಲ್ಲಿಸದರೆ ಕನ್ನಡ ಭವನ ನಿರ್ಮಾಣಕ್ಕೆ ಒತ್ತಾಯ ಮಾಡುತ್ತೇನೆ ಎಂದರು.

    ಸಮ್ಮೇಳನದ ಸರ್ವಾಧ್ಯಕ್ಷ ಜಾನಪದ ಸಾಹಿತಿ ಸಣ್ಣನಾಗಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಜಾನಪದ ಸಾಹಿತ್ಯ ಅಪಾರವಾಗಿದೆ, ಅದನ್ನು ಹೊರತರುವ ಜವಾಬ್ದಾರಿ ಯುವಜನತೆಯ ಮೇಲಿದೆ. ತಾಲ್ಲೂಕು ಮತ್ತು ಬೆಳೆಯಬೇಕಾದರೆ ಸಾಂಸ್ಕೃತಿಕ ಜೊತೆಗೆ ಆಧುನಿಕ ಸೌಲಭ್ಯಗಳ ಅವಶ್ಯಕತೆ ಇದೆ. ತಾಂತ್ರಿಕ ಮತ್ತು ಉನ್ನತ ಮಟ್ಟದ ಶಿಕ್ಷಣಗಳು ಸ್ಥಳೀಯವಾಗಿ ದೊರೆಯಬೇಕು. ಸ್ಥಳೀಯ ಪ್ರತಿಭೆಗಳಿಗೆ ತಕ್ಕ ಜೀವನೋಪಾಯಕ್ಕಾಗಿ ಸ್ಥಳೀಯವಾಗಿಯೇ ದೊರೆಯುವ ವ್ಯವಸ್ಥೆ ಆಗಬೇಕಿದೆ ಎಂದರು.

    ಬೆಂಗಳೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ.ಚಿತ್ತಯ್ಯ ಪೂಜಾರ್ ಮಾತನಾಡಿ, ವಂತಿಗೆ ರೂಪದಲ್ಲಿ ತಾಲ್ಲೂಕಿನ ಅಧಿಕಾರ ಪಡೆಯುತ್ತಿರುವ ಜನಪ್ರತಿನಿಧಿಗಳು ತಾಲ್ಲೂಕಿನ ಪ್ರಗತಿಗೆ ಹೆಚ್ಚು ಶ್ರಮ ವಹಿಸುತ್ತಿಲ್ಲ. ವಲಸೆ ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ. ತಾಂತ್ರಿಕ ಉನ್ನತ ಶಿಕ್ಷಣ ಇಂದಿಗೂ ಮರೀಚಿಕೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಪಟ್ಟಣದ ಗುರುಭವನದಿಂದ ಸಮ್ಮೇಳನಾಧ್ಯಕ್ಷರ ಪುರ ಮೆರವಣಿಗೆ ಪ್ರಾರಭವಾಗಿ ಕಲಾತಂಡಗಳೊಂದಿಗೆ ಅಂಬೇಡ್ಕರ್ ವೃತ್ತ ಮತ್ತು ಮುಖ್ಯ ರಸ್ತೆಯ ಮೂಲಕ ಸಾಗಿ ವೇದಿಕೆಯಲ್ಲಿ ಕೊನೆಗೊಂಡಿತು. ಸಮ್ಮೇಳನದ ಭಾಗವಾಗಿ ಧ್ವಜಾರೋಹಣ, ವಿಚಾರಗೋಷ್ಠಿ, ವಿಶೇಷ ಗೋಷ್ಠಿ ಕವಿಗೋಷ್ಠಿ, ಸಮಾರೋಪ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಗಳು ನೆರವೇರಿದವು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.