nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026

    ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!

    July 8, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
    • ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
    • ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
    • ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
    • ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
    • ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್.ಎಂ ಕೃಷ್ಣ ಅವರ ಜೀವನಗಾಥೆ ಕುರಿತ “ನೆಲದ ಸಿರಿ” ಕೃತಿ ಲೋಕಾರ್ಪಣೆ
    ರಾಜ್ಯ ಸುದ್ದಿ October 1, 2023

    ಎಸ್.ಎಂ ಕೃಷ್ಣ ಅವರ ಜೀವನಗಾಥೆ ಕುರಿತ “ನೆಲದ ಸಿರಿ” ಕೃತಿ ಲೋಕಾರ್ಪಣೆ

    By adminOctober 1, 2023No Comments4 Mins Read
    sm krishna

    ಬೆಂಗಳೂರು: ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಮಾಡುತ್ತೇವೆ ಎಂಬುದು ಬಹಳ ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

    ಇಂದು ಎಸ್.ಎಂ ಕೃಷ್ಣ ಅವರ ಜೀವನಗಾಥೆ ಕುರಿತ ಪುಸ್ತಕ ಬಿಡುಗಡೆ ಮಾಡಲಾಗಿದೆ. ಕೃಷ್ಣ ಅವರ ಸಾಧನೆ, ಮಾರ್ಗದರ್ಶನ ನೆನೆದು, ಮುಂದಿನ ಪೀಳಿಗೆ ಸಮಾಜವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎಂದು ತಿಳಿಸಲು ಈ ಪುಸ್ತಕ ಹೊರ ತಂದಿದ್ದಾರೆ.

    ಕೃಷ್ಣ ಅವರ ಕುಟುಂಬ ಸದಸ್ಯನಾಗಿ, ಸರ್ಕಾರದ ಪ್ರತಿನಿಧಿಯಾಗಿ ಈ ಪುಸ್ತಕ ಬರೆದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.

    “One who wins without problem it is just victory but one who wins with lot of troubles that is history.” ಎಂದು ಹಿಟ್ಲರ್ ಹೇಳಿದ್ದಾನೆ.

    ಅದೇ ರೀತಿ ಕೃಷ್ಣ ಅವರು ತಮ್ಮ ರಾಜಕೀಯ ಜೀವನದಲ್ಲಿ ಅನೇಕ ಸವಾಲು, ಸಮಸ್ಯೆಗಳನ್ನು ಎದುರಿಸಿ ಗೆದ್ದಿದ್ದಾರೆ.

    ನನ್ನ ಅವರ ರಾಜಕೀಯ ಒಡನಾಟ 35 ವರ್ಷಗಳದ್ದು. ಅವರು ಬಹಳ ಕಷ್ಟ ಕಾಲದಲ್ಲಿ ರಾಜ್ಯದಲ್ಲಿ ಆಡಳಿತ ನಡೆಸಿದರು.

    ಬರ, ಕಾವೇರಿ ಸಮಸ್ಯೆ, ರಾಜಕುಮಾರ್ ಅವರ ಅಪಹರಣ, ಆರ್ಥಿಕ ಸಮಸ್ಯೆ ಇದ್ದ ಕಾಲದಲ್ಲಿ ಅವರು ರಾಜ್ಯ ಮುನ್ನಡೆಸಿದರು.

    ಈ ಸವಾಲುಗಳ ಮಧ್ಯೆ ಯಶಸ್ಸು ಕಂಡು, “ಕೃಷ್ಣ ಅವರ ಕಾಲ” ಎಂದೇ ರಾಜ್ಯದ ಜನ ಅವರ ಆಡಳಿತ ಸ್ಮರಿಸುತ್ತಾರೆ.

    ನಾನು ಅವರ ಸಂಪುಟದಲ್ಲಿ ಮಂತ್ರಿಯಾಗಿ ಕೆಲಸ ಮಾಡಿದ್ದು, ಅವರು ಅಧಿಕಾರ ವಹಿಸಿಕೊಂಡಾಗ ರಾಜ್ಯದ ಬಜೆಟ್ 13,000 ಕೋಟಿ ಇತ್ತು. ಅವರ ಆಡಳಿತ ಮುಗಿಯುವ ಹೊತ್ತಿಗೆ ರಾಜ್ಯದ ಬಜೆಟ್ ಗಾತ್ರ 26,000 ಕೋಟಿ ಆಗಿತ್ತು. ಇಂದು ಅದು 3.50 ಲಕ್ಷ ಕೋಟಿ ಆಗಿದೆ. ಆ ಸಂದರ್ಭದಲ್ಲಿ ಅವರು ಅನೇಕ ಸಾಕ್ಷಿ ಗುಡ್ಡೆ ಬಿಟ್ಟು ಹೋಗಿದ್ದಾರೆ.

    ಅಧಿಕಾರ, ಹಣ, ಕುಟುಂಬ, ಸ್ನೇಹಿತರು ಜೀವನದ ಭಾಗ. ಇಲ್ಲಿರುವವರೆಲ್ಲರು ಕೃಷ್ಣ ಅವರ ಕುಟುಂಬದವರೇ ಆಗಿದ್ದೀರಿ. ಇಲ್ಲಿ ರಾಜಕೀಯ ಏನು ಮಾತನಾಡಲಿ. ಇಲ್ಲಿರುವವರಿಗೆ ಕೃಷ್ಣ ಅವರ ಬಾಲ್ಯ, ಬದುಕು, ಸಾಮಾಜಿಕ, ರಾಜಕೀಯ ಬದುಕು ಎಲ್ಲವೂ ಗೊತ್ತಿದೆ.

    ಬೆಂಗಳೂರು ಜನರು ಈ ನಗರ ಕಟ್ಟಿದ ಮೂವರು K ಗಳನ್ನು ನೆನೆಯಬೇಕು. ಅವರು ಯಾರೆಂದರೆ, ಬೆಂಗಳೂರು ಕಟ್ಟಿದ ಕೆಂಪೇಗೌಡ, ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ, ಬೆಂಗಳೂರನ್ನು ಐಟಿ ರಾಜಧಾನಿ ಮಾಡಿದ ಎಸ್. ಎಂ ಕೃಷ್ಣ ಅವರು.

    ವಿಧಾನಸೌಧ ಪಕ್ಕಲ್ಲಿರುವ ವಿಕಾಸಸೌಧ, ಉದ್ಯೋಗಸೌಧ ಕಟ್ಟಿದರು. ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಲು ಜೆ.ಹೆಚ್ ಪಟೇಲರು ಮೊನೊ ರೈಲು ತರಲು ಮುಂದಾಗಿದ್ದರು. ಕೃಷ್ಣ ಅವರ ಸಂಪುಟದಲ್ಲಿ ಮೊನೊ ರೈಲು ಜೊತೆಗೆ ಮೆಟ್ರೋ ರೈಲು ಬಗ್ಗೆ ದೊಡ್ಡ ಚರ್ಚೆ ಆಯಿತು. ಕೃಷ್ಣ ಅವರು ಮೊನೊ ರೈಲು ಮಾಡಲು ಮುಂದಾದಾಗ, ನಾನೂ ಮೊನೊ ರೈಲು ಬೇಡ ಮೆಟ್ರೋ ರೈಲು ಬೇಕು ಎಂದು ಪಟ್ಟು ಹಿಡಿದೆ. ಆಗ ಕೃಷ್ಣ ಅವರು ನನ್ನ ಮೇಲೆ ಬೇಸರ ಆದರು.

    ನಂತರ ತಜ್ಞರ ವರದಿ ತರಿಸಿಕೊಂಡು, ನಾನೂ ಮೆಟ್ರೋ ಪ್ರಸ್ತಾವನೆ ನೀಡಿದೆ. ಆನಂತರ ಕೃಷ್ಣ ಹಾಗೂ ಅನಂತ ಕುಮಾರ್ ಅವರು ಪ್ರಧಾನಿ ಆಗಿದ್ದ ವಾಜಪೇಯಿ ಅವರನ್ನು ಭೇಟಿ ಮಾಡಿ ಬೆಂಗಳೂರಿಗೆ ಮೆಟ್ರೋ ರೈಲು ತಂದರು. ಆಮೂಲಕ ನಮ್ಮ ಮೆಟ್ರೋ ಕೂಡ ಎಸ್.ಎಂ ಕೃಷ್ಣ ಅವರ ಕೊಡುಗೆ.

    ಅವರು ಬಿಟ್ಟುಹೋದ ಜವಾಬ್ದಾರಿ ಮುಂದುವರಿಸುವ ಹೊಣೆ ನನಗೆ ಸಿಕ್ಕಿದೆ. ಇನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವಾಗ ಅದನ್ನು ಬಿಡದಿ ಬಳಿ ಮಾಡಬೇಕು ಎಂದು ಹೇಳಿದರು. ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ, ಅದನ್ನು ದೇವನಹಳ್ಳಿಯಲ್ಲಿ ಮಾಡಿದೆವು.

    ಇನ್ನು ಇಡೀ ದೇಶದಲ್ಲಿ ಮಕ್ಕಳನ್ನು ಶಾಲೆಗಳತ್ತ ಕರೆದು ತರಲು ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆ ಮೊದಲ ಬಾರಿಗೆ ಜಾರಿಗೆ ತಂದಿದ್ದರೆ ಅದು ಕೃಷ್ಣ ಅವರ ಕಾಲದಲ್ಲಿ ಕರ್ನಾಟಕದಲ್ಲಿ. ಈ ಯೋಜನೆಗೆ ಅನೇಕ ವ್ಯಾಖ್ಯಾನ ಮಾಡಿದರು. ಮೊದಲು ಉತ್ತರ ಕರ್ನಾಟಕದ ಭಾಗದಲ್ಲಿ ಆರಂಭಿಸಿ, ನಂತರ ಈ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಯಿತು. ಈ ಯೋಜನೆ ಇಂದಿಗೂ ಜಾರಿಯಲ್ಲಿದೆ ಎಂದರು.

    ನಾನು ಸಹಕಾರ ಮಂತ್ರಿ ಆಗಿದ್ದಾಗ, ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಬೇಕು ಎಂದು ಸ್ತ್ರೀಶಕ್ತಿ ಸಂಘ ಕಾರ್ಯಕ್ರಮ ರೂಪಿಸಿದೆವು. ಹಣ ಹಾಗೂ ರಕ್ತ ಚಲನೆಯಲ್ಲಿ ಇದ್ದರೆ ಆರೋಗ್ಯಕರವಾಗಿ ಇರಲು ಸಾಧ್ಯ ಎಂದು ನಾವು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಈ ಯೋಜನೆ ಜಾರಿ ಮಾಡಿದೆವು.

    ಇನ್ನು ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡಲು ಯಶಸ್ವಿನಿ ಕಾರ್ಯಕ್ರಮ ರೂಪಿಸಿದರು.ಭೂಮಿ ಯೋಜನೆ ಜಾರಿಗೆ ತಂದು, ಪಾಣಿ ವಿಚಾರವಾಗಿ ರೈತರು ಅನುಭವಿಸುತ್ತಿದ್ದ ಸಮಸ್ಯೆಗೆ ಪರಿಹಾರ ತಂದರು. ಅವರ ಈ ಯೋಜನೆಯನ್ನು ಬೆಂಗಳೂರಿನಲ್ಲಿ ಜಾರಿ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ ಎಂದರು.

    ಕೃಷ್ಣ ಅವರ ಕಾಲದಲ್ಲಿ ಜಾರಿಗೆ ಬಂದ ಯೋಜನೆಗಳಲ್ಲಿ ವಿಮಾನ ನಿಲ್ದಾಣ ಹಾಗೂ ಮೆಟ್ರೋ ಹೊರತಾಗಿ ಉಳಿದ ಎಲ್ಲಾ ಯೋಜನೆಗಳು ದೇಶದ ಯಾವುದೇ ರಾಜ್ಯಗಳಲ್ಲಿ ಪರಿಚಯಿಸಿರಲಿಲ್ಲ.

    ಎಂ.ಸಿ ನಾಣಯ್ಯ ಅವರು ಸದನದಲ್ಲಿ ಭಾಷಣ ಮಾಡುತ್ತಾ ಆರ್ಥಿಕ ವಿಚಾರವಾಗಿ ಭಾಷಣ ಮಾಡಿ, ರಾಜ್ಯದಲ್ಲಿ ಸಾರಾಯಿ ಲಾಭಿ ತಡೆಯುವ ಬಗ್ಗೆ ಸವಾಲು ಹಾಕಿದರು. ಅದಾದ ನಂತರ ಎಂದು ರಾಜ್ಯದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದರೆ ಅದಕ್ಕೆ ಕೃಷ್ಣ ಅವರು ತೆಗೆದುಕೊಂಡ ದಿಟ್ಟ ನಿರ್ಧಾರ ಕಾರಣ. ಅದರಿಂದಲೇ ಇಂದು ಸಿದ್ದರಾಮಯ್ಯ, ಯಡಿಯೂರಪ್ಪ, ಬೊಮ್ಮಾಯಿ ಅವರು ತಮ್ಮ ಆಡಳಿತ ಅವಧಿಯಲ್ಲಿ ಎಲ್ಲಾ ವಲಯಕ್ಕೂ ಉತ್ತಮ ಅನುದಾನ ನೀಡಲು ಸಾಧ್ಯವಾಗಿದೆ. ದೇವರು ನಮಗೆ ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ಈ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ. ಅದರಂತೆ ಕೃಷ್ಣ ಅವರು ತಮಗೆ ಸಿಕ್ಕ 4.5 ವರ್ಷಗಳ ಅಧಿಕಾರ ಅವಧಿಯಲ್ಲಿ ರಾಜ್ಯದಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. ನಾವು ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಅವರ ಆದರ್ಶ, ನಾಯಕತ್ವ ಬಿಟ್ಟು ಹೋಗಿದ್ದಾರೆ. ನಾವು ಅದನ್ನು ಮುಂದುವರಿಸಿಕೊಂಡು ಹೋಗಬೇಕು. ಕೃಷ್ಣ ಅವರ ಜೊತೆ ರಾಜಕಾರಣದಲ್ಲಿ ಅನೇಕ ಭಿನ್ನಾಭಿಪ್ರಾಯ ಬಂದವು. ಅನೇಕರು ಚಾಡಿ ಹೇಳಿದ್ದರು. ಕೃಷ್ಣ ಅವರು ಮೊದಲ ದಿನವೇ ನನ್ನನ್ನು ಸಂಪುಟದಿಂದ ಕೈಬಿಟ್ಟಿದ್ದರು. ಆಮೇಲೆ ನಾನು ಅವರ ಜೊತೆ ಜಗಳ ಮಾಡಿದೆ. ಅನಂತರ ಕೃಷ್ಣ ಅವರು ಸೋನಿಯಾ ಗಾಂಧಿ ಅವರ ಜೊತೆ ಮಾತನಾಡಿ ಸಂಪುಟಕ್ಕೆ ಸೇರಿಸಿಕೊಂಡರು ಎಂದರು.

    ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ, ಧರ್ಮರಾಯನ ಧರ್ಮತ್ವ, ಕರ್ಣನ ಧಾನತ್ವ, ಅರ್ಜುನನ ಗುರಿ, ವಿದುರನ ನೀತಿ, ಭೀಮನ ಬಲ, ಕೃಷ್ಣನ ತಂತ್ರ ಇರಬೇಕು. ಈ ಎಲ್ಲಾ ಗುಣಗಳು ಎಸ್.ಎಂ ಕೃಷ್ಣ ಅವರಲ್ಲಿ ಇತ್ತು. ಉಳಿ ಏಟು ಬೀಳದೆ ಯಾವ ಕಲ್ಲು ಶಿಲೆ ಆಗುವುದಿಲ್ಲ. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಕೃಷ್ಣ ಅವರ ಜತೆಗೆ ನನ್ನ ರಾಜಕಾರಣ ಒಡನಾಟದಲ್ಲಿ ಅವರು ಯಾರೊಬ್ಬರಿಗೂ ತೊಂದರೆ ಮಾಡಿಲ್ಲ. ಅವರನ್ನು ದೇವೇಗೌಡರು ಯಾವ ದೃಷ್ಟಿಯಲ್ಲಿ ನೋಡುತ್ತಿದ್ದರು ಎಂದು ಈಗ ಹೇಳುವುದಿಲ್ಲ. ದೇವೇಗೌಡರ ಮಕ್ಕಳು ಕೂಡ ಅವರ ಬಳಿ ಬಂದು ಸಹಾಯ ಪಡೆದಿದ್ದಾರೆ. ಕೃಷ್ಣ ಅವರು ತಮಗೆ ಸಿಕ್ಕ ಅಧಿಕಾರದಲ್ಲಿ ನಾಲ್ಕು ಜನರಿಗೆ ಸಹಾಯ ಮಾಡಿದರೆ ಹೊರತು ಯಾರಿಗೂ ತೊಂದರೆ ಮಾಡಲಿಲ್ಲ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ನಂಬಿಕೆ ಇಲ್ಲದಿದ್ದರೆ ಸಂಬಂಧ ಉಳಿಯುವುದಿಲ್ಲ ಎಂದು ಡಿಕೆಶಿ ಬೇಸರಿಸಿದರು.

    ನನ್ನಂತಹ ಹತ್ತಾರು ನಾಯಕರನ್ನು ತಯಾರಿ ಮಾಡಿರುವುದೇ ಅವರ ಆಸ್ತಿ. ಎಲ್ಲಾ ಸಮುದಾಯದವರನ್ನು ಅವರು ನಾಯಕರನ್ನಾಗಿ ಮಾಡಿದ್ದಾರೆ. ಅವರು ಯಾವುದೇ ಒಂದು ಜಾತಿ ಹಾಗೂ ಸಮುದಾಯಕ್ಕೆ ಮಾತ್ರ ನೆರವು ನೀಡಿಲ್ಲ, ಎಲ್ಲಾ ಸಮಾಜದ ಕಲ್ಯಾಣಕ್ಕೆ ಕಾರ್ಯಕ್ರಮ ನೀಡಿದ್ದಾರೆಂದರು.

    ಕೃಷ್ಣ ಅವರ ಆಲೋಚನೆ ಬಹಳ ದೂರದೃಷ್ಟಿಯದ್ದಾಗಿತ್ತು. ಭವಿಷ್ಯದ ದೃಷ್ಟಿಯಿಂದ ಅವರು ಎಲ್ಲಾ ಕಾರ್ಯಕ್ರಮ ರೂಪಿಸಿದ್ದರು.  ಮೈಸೂರಿನಲ್ಲಿ ಅವರು ಇನ್ಫೋಸಿಸ್ ಕ್ಯಾಂಪಸ್ ಗೆ ಸಹಾಯ ಮಾಡಿದರು. ಕೆಲವೇ ವರ್ಷಗಳಲ್ಲಿ ಆ ಸಂಸ್ಥೆಯಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಕೋಟ್ಯಂತರ ಹಣ ಬಂದಿದೆ ಎಂದರು.

    ಅವರು ಅಧಿಕಾರ ಅವಧಿ ಮುಗಿಯುವ ಮುನ್ನ ಚುನಾವಣೆಗೆ ಹೋಗುವ ವಿಚಾರವಾಗಿ ನಾನು ಬಹಳ ಜಗಳ ಆಡಿದ್ದೆ. ಆದರೂ ಅವರು ತೀರ್ಮಾನ ಮಾಡಿ ಆರು ತಿಂಗಳು ಮುಂಚಿತವಾಗಿ ಚುನಾವಣೆ ಮಾಡಿದರು. ನಾವು ಸೋತ ನಂತರ ಅವರ ಮನೆಗೆ ಹೋದಾಗ, ನಾನು ಈ ವಿಚಾರದಲ್ಲಿ ನಿನ್ನ ಮಾತು ಕೇಳಬೇಕಾಗಿತ್ತು ಎಂದು ಹೇಳಿದರು. ಈಗ ಇದೆಲ್ಲವೂ ಇತಿಹಾಸ.

    ಇತ್ತೀಚೆಗೆ ನಾವು ಕಾವೇರಿ ವಿಚಾರವಾಗಿ ಚರ್ಚೆ ಮಾಡುವಾಗ ಕೃಷ್ಣ ಅವರು ರಾಜ್ಯದ ಹಿತಕ್ಕೆ ಅಧಿಕಾರ ತ್ಯಾಗಕ್ಕೆ ಮುಂದಾಗಿದ್ದನ್ನು ಸ್ಮರಿಸಿದೆವೆಂದರು.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ತುಮಕೂರು: ಜೂನ್ 30 ರಿಂದ ಆರಂಭಗೊಂಡಿರುವ ಜಿಲ್ಲೆಯ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ ಭಾಗವಾಗಿ ಮಂಗಳವಾರ ಅಂತ್ಯದ…

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026

    ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!

    July 8, 2026

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.

    July 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.