nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    • ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮ್ಮ ಮನೆಯೊಳಗೇ ಇದೆ ಗ್ಯಾಸ್ಟ್ರಿಕ್‌ ಗೆ ಪರಿಹಾರ
    ರಾಜ್ಯ ಸುದ್ದಿ November 14, 2022

    ನಿಮ್ಮ ಮನೆಯೊಳಗೇ ಇದೆ ಗ್ಯಾಸ್ಟ್ರಿಕ್‌ ಗೆ ಪರಿಹಾರ

    By adminNovember 14, 2022No Comments2 Mins Read
    gastrick

    ಬದಲಾದ ಆಹಾರ ಪದ್ಧತಿ, ಜೀವನ ಶೈಲಿಗಳಿಂದ ಇಂದು ಪ್ರತಿಯೊಬ್ಬರಿಗೂ ಬಿಪಿ, ಶುಗರ್‌, ಗ್ಯಾಸ್ಟ್ರಿಕ್‌, ಅಲರ್ಜಿ ಸೇರಿದಂತೆ ಕೆಲವೊಂದು ಆರೋಗ್ಯ ಸಮಸ್ಯೆಗಳು ಸಾಮಾನ್ಯ ಎಂಬಂತಾಗಿದೆ. ಸಂಸ್ಕರಿಸಿದ ಹಾಗೂ ಟೇಸ್ಟ್‌ ಪೌಡರ್‌ ಬಳಸಿದ, ಮತ್ತೆ ಮತ್ತೆ ದುದಿದ ಎಣ್ಣೆ ಬಳಸಿದ ಆಹಾರಗಳ ಸೇವನೆಗೆ ಕಡಿವಾಣ ಹಾಕುವ ಜೊತೆಗೆ ಕೆಲವೊಂದು ಮನೆಯಲ್ಲೇ ಸಿಗುವ ಅಡುಗೆ ಸಾಮಗ್ರಿಗಳಿಂದಲೇ ಗ್ಯಾಸ್ಟ್ರಿಕ್‌ ಸಮಸ್ಯೆ ದೂರಗೊಳಿಸಬಹುದು. ಒಬ್ಬೊಬ್ಬರಿಗೆ ಒಂದೊಂದು ಆಹಾರದಿಂದ ಅಲಜಿ, ಗ್ಯಾಸ್ಟ್ರಿಕ್‌ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಯಾರಿಗೆ ಯಾವುದರಿಂದಲಾದ್ರೂ ಗ್ಯಾಸ್ಟ್ರಿಕ್‌ ಸಮಸ್ಯೆ ಉಂಟಾಗಬಹುದು. ಸಾಮಾನ್ಯವಾಗಿ ಆಲೂ,ಬದನೆ,ಕಡ್ಲೆಕಾಳು ತೊಗರಿಬೇಳೆ ಗ್ಯಾಸ್ಟ್ರಿಕ್ ಉಂಟು ಮಾಡುತ್ತವೆ ಎನ್ನಲಾಗುತ್ತದೆ. ಗ್ಯಾಸ್ಟ್ರಿಕ್‌ ಹೊಟ್ಟೆಯ ಸೆಡೆತ, ಹೊಟ್ಟೆಯುಬ್ಬರಿಕೆ, ತಲೆ ಸುತ್ತುವಿಕೆ ಮತ್ತು ಎದೆಯುರಿಗೆ ಕಾರಣವಾಗುತ್ತದೆ. ಜೀರ್ಣಾಂಗಗಳಲ್ಲಿ ವಾಯು ಉತ್ಪತ್ತಿಯಾಗಿ ಹೊರಬರಲು ನೀಡುವ ಒತ್ತಡವೇ ಗ್ಯಾಸ್ಟ್ರಿಕ್‌. ತಜ್ಞರು ಈ ಸಮಸ್ಯೆಗೆ ನಾನಾ ಕಾರಣಗಳನ್ನು ಪಟ್ಟಿ ಮಾಡುತ್ತಾರೆ.

    ಊಟದ ಸಮಯದಲ್ಲಿ ಪ್ರತಿ ತುತ್ತನ್ನೂ ನುಂಗುವಾಗ ಇದರೊಂದಿಗೆ ಕೊಂಚ ಪ್ರಮಾಣದಲ್ಲಿ ಹೊಟ್ಟೆ ಸೇರುವ ವಾತಾವರಣದ ಗಾಳಿ. ಅಹಾರ ಜೀರ್ಣಗೊಳ್ಳುವಾಗ ಉತ್ಪತ್ತಿಯಾಗುವ ಅನಿಲಗಳು ಈ ಸಮಸ್ಯೆಗೆ ಕಾರಣವಾಗುತ್ತವೆ ಎನ್ನುತ್ತಾರೆ.ದೊಡ್ಡ ಕರುಳಿನಲ್ಲಿ ಹೆಚ್ಚಿನ ಪ್ರಮಾಣದ ಆರೋಗ್ಯ ಸ್ನೇಹಿ ಬ್ಯಾಕ್ಟೀರಿಯಾಗಳಿವೆ. ಇವು ಜೀರ್ಣಕ್ರಿಯೆಗೆ ಅಗತ್ಯವಾಗಿವೆ. ಅನಿಲದ ಪ್ರಮಾಣ ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಸಂಗ್ರಹವಾಗುವವರೆಗೂ ಇದು ತೊಂದರೆ ಎಂದು ಅನ್ನಿಸುವುದಿಲ್ಲ. ಆದರೆ ಯಾವಾಗ ಇದು ಅತಿಯಾಗಿ ಸಂಗ್ರಹಗೊಂಡು ಬಿಡುಗಡೆಗೆ ಪ್ರಚೋದನೆ ನೀಡುತ್ತದೆಯೋ ಆಗ ಸಮಸ್ಯೆ. ಇದಕ್ಕೆ ಮನೆಯಲ್ಲಿ ಲಭ್ಯವಿರುವ ಸಾಮಾಗ್ರಿಗಳೇ ಪರಿಹಾರ ನೀಡುತ್ತವೆ.


    Provided by
    Provided by

    ಓಮ ಕಾಳಿನಲ್ಲಿ ಥೈಮಾಲ್ ಎಂಬ ಪೋಷಕಾಂಶವಿದ್ದು ಜೀರ್ಣಾಂಗಗಳಲ್ಲಿ ಉತ್ಪತ್ತಿಯಾಗಿದ್ದ ವಾಯುಗಳನ್ನು ಕರಗಿಸಿಕೊಳ್ಳುವಂತೆ ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ. ಒಂದು ಲೋಟ ನೀರಿನಲ್ಲಿ ಅರ್ಧ ಚಿಕ್ಕ ಚಮಚ ಓಮ ಕಾಳುಗಳನ್ನು ಹಾಕಿ ಕುದಿಸಿ ಈ ನೀರನ್ನು ತಣಿಸಿ ಕುಡಿದರೆ ಈ ತೊಂದರೆಯನ್ನು ಸಾಕಷ್ಟು ಮಟ್ಟಿಗೆ ತಗ್ಗಿಸಬಹುದು.ದಿನಕ್ಕೊಂದು ಲೋಟ ಈ ನೀರು ಕುಡಿದರೆ ಸಾಕು.

    ಜೀರಿಗೆ ಕುದಿಸಿದ ನೀರಿನ ಸೇವನೆ ಅತ್ಯುತ್ತಮ ಮನೆಮದ್ದುಗಳಲ್ಲಿ ಒಂದಾಗಿದೆ. ಜೀರಿಗೆಯಲ್ಲಿರುವ ಅವಶ್ಯಕ ತೈಲಗಳು ಲಾಲಾರಸವನ್ನು ಹೆಚ್ಚು ಹೆಚ್ಚಾಗಿ ಸ್ರವಿಸುವಂತೆ ಪ್ರಚೋದಿಸುತ್ತವೆ ಹಾಗೂ ಇದು ಆಹಾರವನ್ನು ಇನ್ನಷ್ಟು ಸುಲಭವಾಗಿ ಜೀರ್ಣಗೊಳಿಸಲು ನೆರವಾಗುತ್ತದೆ ಮತ್ತು ಅತಿಯಾಗಿ ಅನಿಲಗಳು ಉತ್ಪತ್ತಿಯಾಗದಂತೆ ತಡೆಯುತ್ತದೆ ಎಂಬುದು ವೈದ್ಯರು ಹಾಗೂ ಮನೆಯಲ್ಲಿ ಹಿರಿಯರು ಹೇಳುತ್ತಲೇ ಬಂದಿರುವ ಪರಿಹಾರ. ಒಂದು ದೊಡ್ಡ ಚಮಚದಷ್ಟು ಜೀರಿಗೆಯನ್ನು ಎರಡು ಕಪ್ ನೀರಿನಲ್ಲಿ ಚೆನ್ನಾಗಿ ಕುದಿಸಬೇಕು. ಹತ್ತರಿಂದ ಹದಿನೈದು ನಿಮಿಷ ಚಿಕ್ಕ ಉರಿಯಲ್ಲಿ ಕುದಿಸಿದ ಬಳಿಕ ಉರಿ ಆರಿಸಿ ತಣಿಯಲು ಬಿಡಬೇಕು. ಈ ನೀರನ್ನು ಸೋಸಿ ಊಟವಾದ ಕೊಂಚ ಹೊತ್ತಿನ ಬಳಿಕ ಸೇವಿಸಬೇಕು.

    ಗ್ಯಾಸ್ಟ್ರಿಕ್‌ನಿಂದ ಹೊಟ್ಟೆಯುಬ್ಬರಿಸಿದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿಗೆ ಅರ್ಧ ಚಿಕ್ಕ ಚಮಚ ಇಂಗು ಹಾಕಿ ಕುಡಿದು ಬಿಡಬೇಕು. ಇಂಗಿನಲ್ಲಿ ಬ್ಯಾಕ್ಟೀರಿಯಾಗಳು ಅಹಾರವನ್ನು ಅತಿಯಾಗಿ ಜೀರ್ಣಿಸಿಕೊಂಡು ಉತ್ಪತ್ತಿ ಮಾಡಿದ ಅನಿಲಗಳನ್ನು ಇಲ್ಲವಾಗಿಸುವ ಗುಣವಿದೆ. ದೇಹದಲ್ಲಿ ವಾತ ದೋಷವನ್ನು ಸರಿಪಡಿಸಲು ನೆರವಾಗುತ್ತದೆ. ವಾತ ದೋಷಕ್ಕೆ ದೊಡ್ಡ ಕರುಳು ಪ್ರಮುಖ ಕಾರಣ.ಕರುಳಿನಲ್ಲಿ ವಾತ ಹೆಚ್ಚಾಗುತ್ತಿದ್ದಂತೆಯೇ ವಾಯುವೂ ಹೆಚ್ಚುತ್ತದೆ ಎಂಬುದು ನಮಗೆ ತಿಳಿದಿದ್ದರೆ ಪರಿಹಾರ ಸುಲಭ. ಒಂದು ಚಿಕ್ಕ ತುಂಡು ಹಸಿಶುಂಠಿಯ ರಸವನ್ನು ಒಂದು ಚಿಕ್ಕ ಚಮಚ ಲಿಂಬೆರಸದೊಂದಿಗೆ ಊಟದ ಬಳಿಕ ಸೇವಿಸಬಹುದು. ಹಸಿ ಶುಂಠಿಯಿಂದ ತಯಾರಿಸಿದ ಟೀ ವಾಯುಪ್ರಕೋಪ ಶಮನಕಾರಕ.

    ಚಿಕ್ಕ ಚಮಚ ಲಿಂಬೆರಸದಲ್ಲಿ ಅರ್ಧ ಚಿಕ್ಕ ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಕದಡಿ ಊಟದ ಬಳಿಕ ಕುಡಿಯುವುದು. ಈ ವಿಧಾನದಿಂದ ಜೀರ್ಣಾಂಗಗಳಲ್ಲಿ ಕಾರ್ಬನ್ ಡೈ ಆಕ್ಸೈಡ್ ಉತ್ಪತ್ತಿಯಾಗುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಒಂದು ಲೋಟ ಕುದಿಯುವ ನೀರಿಗೆ ಅರ್ಧ ಚಿಕ್ಕ ಚಮಚ ತ್ರಿಫಲ ಚೂರ್ಣವನ್ನು ಹಾಕಿ ಐದರಿಂದ ಹತ್ತು ನಿಮಿಷ ಚಿಕ್ಕ ಉರಿಯಲ್ಲಿ ಕುದಿಸಿ. ಈ ನೀರನ್ನು ತಣಿಸಿ ಉಗುರು ಬೆಚ್ಚನಿದ್ದಂತೆ ರಾತ್ರಿ ಮಲಗುವ ಮುನ್ನ ಕುಡಿಯಿರಿ. ಹೆಚ್ಚಿನ ಪ್ರಮಾಣ ಸೇವಿಸಬಾರದು ಹಾಗೂ ಹೆಚ್ಚು ದಿನ ಸೇವಿಸಬಾರದು.

    ಹೀಗೆಲ್ಲ ತಕ್ಷಣದ ಪರಿಹಾರ ತಕ್ಷಣದ ಪರಿಹಾರಕ್ಕೆ ಸಮಸ್ಯೆ ತಗ್ಗದೆ ಮುಂದುವರಿದರೆ ಖಂಡಿತವಾಗಿಯೂ ವೈದ್ಯರಲ್ಲಿ ಸಲಹೆ ಪಡೆದು ಅದರಂತೆ ನಡೆದುಕೊಳ್ಳುವುದು ಅಗತ್ಯ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ಕೊರಟಗೆರೆ: ಎರಡು ಚಿರತೆಗಳ ಕಾದಾಟದಲ್ಲಿ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ…

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.