nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    May 15, 2026

    ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ

    May 15, 2026
    Facebook Twitter Instagram
    ಟ್ರೆಂಡಿಂಗ್
    • ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
    • ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
    • ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
    • ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
    • ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
    • ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನವಜಾತ ಶಿಶು ಸಾವು: ಕಾಡುಗೊಲ್ಲ ಸಮುದಾಯದ ಜನರ ಸಾಮಾಜಿಕ ವಾಸ್ತವತೆಗೆ ಹಿಡಿದ ಕನ್ನಡಿ
    ಲೇಖನ July 28, 2023

    ನವಜಾತ ಶಿಶು ಸಾವು: ಕಾಡುಗೊಲ್ಲ ಸಮುದಾಯದ ಜನರ ಸಾಮಾಜಿಕ ವಾಸ್ತವತೆಗೆ ಹಿಡಿದ ಕನ್ನಡಿ

    By adminJuly 28, 2023No Comments3 Mins Read
    vaddagere nagarajaiah
    • ಡಾ.ವಡ್ಡಗೆರೆ ನಾಗರಾಜಯ್ಯ

    ಕಾಡುಗೊಲ್ಲ ಸಮುದಾಯದ ಪುರಾತನ ಪದ್ದತಿಯ ಪ್ರಕಾರ ಊರಾಚೆ ಪ್ರತ್ಯೇಕವಾದ ತಾತ್ಕಾಲಿಕ ಗುಡಿಸಲಿನಲ್ಲಿ ಬಾಣಂತಿಯೊಬ್ಬಳು ತನ್ನ ನವಜಾತ ಶಿಶುವಿನೊಂದಿಗೆ ವಾಸವಿದ್ದಾಗ ಮಳೆಗೆ ಸಿಕ್ಕಿ ನವಜಾತ ಶಿಶು ಸತ್ತುಹೋಗಿರುವ ಸುದ್ದಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ತುಮಕೂರು ಜಿಲ್ಲೆಯ ಬೆಳ್ಳಾವಿ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದ ಕಾಡುಗೊಲ್ಲರ ಹಟ್ಟಿಯಲ್ಲಿ ಸಂಭವಿಸಿರುವ ಈ ಘಟನೆ ಕರ್ನಾಟಕ ಮತ್ತು ಕರ್ನಾಟಕದ ಆಚೆಗೂ ನೆಲೆಸಿರುವ ಎಲ್ಲಾ ಕಾಡುಗೊಲ್ಲ ಸಮುದಾಯದ ಜನರ ಸಾಮಾಜಿಕ ವಾಸ್ತವತೆಗೆ ಕನ್ನಡಿ ಹಿಡಿಯುತ್ತದೆ.

    ಕರ್ನಾಟಕದ ರಾಜಧಾನಿಯಾಗಿರುವ ಬೆಂಗಳೂರು ‌ಮೆಟ್ರೋಪಾಲಿಟನ್ ಮಹಾನಗರದ ನಾಗದೇವನಹಳ್ಳಿಯ ಕಾಡುಗೊಲ್ಲರು ಈಗಲೂ ತಮ್ಮ ಹೆಣ್ಣುಮಕ್ಕಳು ಮುಟ್ಟಾದಾಗ‌ ಮತ್ತು ಹೆರಿಗೆಯ ಸಮಯದಲ್ಲಿ ‌ಮೂರು ತಿಂಗಳು ಮನೆಯಾಚೆ ಪ್ರತ್ಯೇಕವಾದ ಗುಡಿಸಲು ಅಥವಾ ಕುಟೀರಗಳಲ್ಲಿರಿಸುವ ಪದ್ದತಿಯನ್ನು ಅನುಸರಿಸುತ್ತಿದ್ದಾರೆ.


    Provided by
    Provided by

    ಕರ್ನಾಟಕದ ಅನೇಕ ಕಡೆಗಳಲ್ಲಿ ಕಾಡುಗೊಲ್ಲ ಸಮುದಾಯದ ಬಹುತೇಕ ಜನ ಇಂದಿಗೂ ಕಳ್ಳೆಬೇಲಿಯೊಳಗಿನ ಹಟ್ಡಿಗಳಲ್ಲಿ ಹುಲ್ಲುಗುಡಿಸಲಿನ ಗುಡಿಗಳಲ್ಲಿ ತಮ್ಮದೇ ಸಾಂಸ್ಕೃತಿಕ ನಾಯಕರನ್ನು ದೇವರುಗಳೆಂದು ಆರಾಧಿಸುತ್ತಾ ಹುಲ್ಲುಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ.

    ಹೆಣ್ಣುಮಕ್ಕಳನ್ನು ಮುಟ್ಟುಚೆಟ್ಟು, ಬಾಣಂತಿ ಸಮಯಗಳಲ್ಲಿ ಮಡಿಮೈಲಿಗೆ ಸೂತಕವೆಂದು ಮನೆಯಾಚೆ ಪ್ರತ್ಯೇಕವಾಗಿ ಗುಡಿಸಲುಗಳಲ್ಲಿರಿಸುವ ಮೂಢ ಪದ್ದತಿಯನ್ನು ಇಂದಿಗೂ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಮಾದಿಗ ಸಮುದಾಯದ ಜನರನ್ನು ತಮ್ಮ ಹಟ್ಟಿಯೊಳಕ್ಕೆ ಸೇರಿಸದಿರುವ, ಮುಟ್ಟಿನ ಸಮಯದಲ್ಲಿ ಹೆಣ್ಣುಮಕ್ಕಳನ್ನು ಮುಟ್ಟಿಸಿಕೊಳ್ಳದಿರುವ ಮತ್ತು ಹಟ್ಟಿಯೊಳಕ್ಕೆ ಪ್ರವೇಶ ನಿರ್ಬಂಧಿಸುವ, ಹೆಣ್ಣುಮಕ್ಕಳಿಗೆ ದೇವರ ಗುಡಿಗಳ ಪ್ರವೇಶ ಮತ್ತು ಪೂಜಿಸುವ ಧಾರ್ಮಿಕ ಅಧಿಕಾರಗಳ ನಿರಾಕರಣೆ ಇನ್ನೂ ಮುಂತಾದ ಮೌಡ್ಯಾಚರಣೆಗಳ ವಿರುದ್ದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಾವು ಕಳೆದೆರಡು ದಶಕಗಳಿಂದಲೂ ನಡೆಸುತ್ತಾ ಬಂದಿದ್ದೇವೆ.

    ಕೇವಲ ಕಾಡುಗೊಲ್ಲರಷ್ಟೇ ಅಲ್ಲದೇ ಭಾರತದಲ್ಲಿರುವ ಬಹುತೇಕ ಬುಡಕಟ್ಟು ಸಮುದಾಯಗಳು ಹೆಣ್ಣುಮಕ್ಕಳ ವಿಷಯದಲ್ಲಿ ಬದಲಾವಣೆಗೆ ಒಪ್ಪದೆ ತೀರಾ ಜಿಗುಟಾಗಿವೆ. ಬಹುಮುಖ್ಯವಾಗಿ ತಾವು ನಂಬಿದ ದೇವರುಗಳಿಗೆ ಅಂಟುಮುಂಟಾಗದಂತೆ ನೋಡಿಕೊಳ್ಳಲು ಮಹಿಳೆಯರನ್ನು ನಿರ್ದಿಷ್ಟ ಸಂದರ್ಭಗಳಲ್ಲಿ ಮುಟ್ಟಿಸಿಕೊಳ್ಳದೇ ದೂರ ಇರಿಸಬೇಕೆಂಬ ನಂಬಿಕೆ ಕಾಡುಗೊಲ್ಲರಲ್ಲಿ ಬಲವಾಗಿ ಬೇರೂರಿದೆ.

    ನಿಜವಾಗಿಯೂ ಇವರು ಆರಾಧಿಸುವ ದೈವಗಳು ಆಯಾ ಸಮುದಾಯಕ್ಕಾಗಿ ದುಡಿದು ಮಡಿದ ಸಾಂಸ್ಕೃತಿಕ ನಾಯಕರೇ ಆಗಿರುತ್ತಾರೆ. ವೈರಿಗಳ ವಿರುದ್ಧ ಕಾದಾಡಿ ತಮ್ಮ ಸಮುದಾಯವನ್ನು, ಪಶು ಸಂಪತ್ತು ಮತ್ತು ಹುಲ್ಲುಗಾವಲು ಪ್ರದೇಶಗಳನ್ನು ಹಾಗೂ ವಾಸದ ನೆಲೆಗಳನ್ನು ಕಾಪಾಡಿ ರಕ್ಷಿಸಿದ ಆ ನಾಯಕರು ತಮ್ಮ ಬದುಕಿನ ಉಪಯೋಗಕ್ಕೆ ಬಂದವರಾದ್ದರಿಂದಲೇ ಸಹಜವಾಗಿ ದೇವರುಗಳ ಸ್ಥಾನದಲ್ಲಿ ಪ್ರತಿಷ್ಠಾಪಿತರಾಗಿ ಪರಿಸರದ ಘಟಕಗಳೇ ಆಗಿರುತ್ತಾರೆ.

    ಎಲ್ಲಾ ಬುಡಕಟ್ಟು, ಅಲೆಮಾರಿ, ಆದಿವಾಸಿಗಳಲ್ಲಿಯೂ ತಮ್ಮದೇ ಆದ ನಂಬಿಕೆ, ಆಚಾರ ವಿಚಾರ ಸಂಪ್ರದಾಯಗಳು ಅಸ್ತಿತ್ವದಲ್ಲಿವೆ. ಇವೆಲ್ಲವುಗಳಿಗೂ ಆಯಾ ಸಮುದಾಯಗಳು ಕಟ್ಟುನಿಟ್ಟಾದ ನಿಯಮಗಳನ್ನು ಅಳವಡಿಸಿ ಜಾರಿಯಲ್ಲಿಟ್ಟುಕೊಂಡಿವೆ. ಕಾಡುಗೊಲ್ಲರ ಆಚರಣೆಗಳಿಗೂ ಮತ್ತು ಮೇಲ್ವರ್ಗದವರು ಅನುಸರಿಸುತ್ತಿರುವ ಶ್ರೇಣೀಕೃತ ಜಾತಿವ್ಯವಸ್ಥೆಗೂ ನೇರವಾಗಿ ಯಾವುದೇ ಸಂಬಂಧವಿದ್ದಂತೆ ಕಾಣಿಸುವುದಿಲ್ಲ. ಯಾಕೆಂದರೆ ಮೇಲ್ವರ್ಗದ ಮುಖ್ಯವಾಹಿನಿ ಸಮಾಜದಿಂದ ದೂರವೇ ಉಳಿದಿರುವ ಕಾಡುಗೊಲ್ಲರು ಇಂದಿಗೂ ಹಟ್ಟಿ ಎಂದು ಕರೆಯಲಾಗುವ ತಮ್ಮದೇ ಪ್ರತ್ಯೇಕ ಬೌಗೋಳಿಕ ನೆಲೆಗಳಲ್ಲಿ ವಾಸಿಸುತ್ತಿದ್ದಾರೆ. ಸಂಪ್ರದಾಯ, ನಂಬಿಕೆ, ಆಚರಣೆಗಳು ತಮ್ಮ ಸಾಮಾಜಿಕ ಆಸ್ಮಿತೆಯ ಮತ್ತು ಸಾಂಸ್ಕೃತಿಕ ಪ್ರತ್ಯೇಕತೆಯನ್ನು ಗುರುತಿಸುವುದರ ಅನನ್ಯ ಲಕ್ಷಣಗಳೆಂದೇ ಪರಿಗಣಿಸಿದ್ದಾರೆ.  ಇಂತಹ ನಡವಳಿಕೆಗಳು ಆದಿಮ ಸ್ಥಿತಿಯಲ್ಲಿರುವ ಸಮುದಾಯಗಳಲ್ಲಿ ಪ್ರಶ್ನಾತೀತ ಸಂಗತಿಗಳೆಂದೇ ಪಾಲನೆಯಲ್ಲಿವೆ.

    “ಅಂಬೇಡ್ಕರ್ ಅವರ ಸಂವಿಧಾನದ ಕಾನೂನುಗಳು ಇಂತಹ ಆಚರಣೆಗಳನ್ನು ಒಪ್ಪಲಾರವು. ಇವೆಲ್ಲವೂ ಕಾನೂನು ಬಾಹಿರ” ಎಂದು ಯಾರಾದರೂ ಕೇಳಿದರೆ, “ನಿಮ್ಮ ಅಂಬೇಡ್ಕರ್ ಬಂದಿದ್ದಾಗಲೀ ಸಂವಿಧಾನ ಬರೆದದ್ದಾಗಲೀ ನಿನ್ನೆಮೊನ್ನೆ. ನಮ್ಮ ಕುಲಾಚಾರ ಸಂಪ್ರದಾಯಗಳು ಸಾವಿರಾರು ವರ್ಷಗಳಿಂದಲೂ ಬಂದಿವೆ. ಆಗೆಲ್ಲಾ ನಿಮ್ಮ ಅಂಬೇಡ್ಕರ್ರೇ ಇದ್ರಾ… ಅವರ ಕಾನೂನೇ ಇತ್ತಾ ? ಹೋಗಯ್ಯ ಕಂಡಿದ್ದೀವಿ” ಎಂದು ಎದುರುಬಿದ್ದು ಪ್ರಶ್ನಿಸುವ ಮಟ್ಟಿಗೆ ಇಂದಿಗೂ ಅಜ್ಞಾನದಲ್ಲಿದ್ದಾರೆ.

    ಮಾದಿಗರನ್ನು ತಮ್ಮ ಹಟ್ಟಿಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿರುವ ಕಾಡುಗೊಲ್ಲರು, ತಮ್ಮದೇ ಸಮುದಾಯದ ಪುರುಷರನ್ನು ಹೊರತುಪಡಿಸಿ ಬೇರೆ ಯಾವುದೇ ಸಮುದಾಯದವರನ್ನೂ ತಮ್ಮ ದೈವಸ್ಥಾನಗಳಿಗೆ ಸೇರಿಸುವುದಿಲ್ಲ. ತಮ್ಮ ‌ಕುಲದಾಚೆಯ ಬ್ರಾಹ್ಮಣನಾದರೂ ಸರಿಯೇ ಗುಡಿಯೊಳಕ್ಕೆ ಬಿಟ್ಟುಕೊಳ್ಳುವುದಿಲ್ಲ. ಇದು ಇನ್ನೊಬ್ಬರನ್ನು ಅವಮಾನಿಸುವ ಬದಲಾಗಿ ತಮ್ಮ‌ ಬುಡಕಟ್ಟುತನ, ಸಾಮಾಜಿಕ ಆಸ್ಮಿತೆ ಮತ್ತು ಸಾಂಸ್ಕೃತಿಕ ಪ್ರತ್ಯೇಕತೆಯನ್ನು ಕಾಯ್ದುಕೊಳ್ಳುವ ಹಕ್ಕು ಎಂದೇ ಕಾಡುಗೊಲ್ಲರು ಭಾವಿಸಿದ್ದಾರೆ.

    ಇಂತಹ ವಿಚಾರಗಳಲ್ಲಿ ಜಾಗೃತಿ ಮೂಡಿಸಲು ಕಾಡುಗೊಲ್ಲರ ಹಟ್ಟಿಗಳಲ್ಲಿ ಸರ್ಕಾರ ಅರಿವಿನ ಶಿಬಿರಗಳನ್ನು ಆಯೋಜಿಸುವ ಅಗತ್ಯವಿದೆ. ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ ಅಭಿವೃದ್ದಿ ಪಡಿಸುವ ಯೋಜನೆಗಳನ್ನು ರೂಪಿಸಬೇಕಿದೆ. ಶಿಕ್ಷಣಕ್ಕೆ ಸುಸಜ್ಜಿತ ಶಾಲೆ, ವೈಜ್ಞಾನಿಕ ಮನೋಧರ್ಮ ರೂಪಿಸುವ ಹೊಸ ಪಠ್ಯಗಳು, ಆರೋಗ್ಯ ಸೌಲಭ್ಯ, ಸಂವಿಧಾನ ಮತ್ತು ಕಾನೂನುಗಳ ಸಾಕ್ಷರತೆ, ಆರ್ಥಿಕ ಸಬಲೀಕರಣದ ಯೋಜನೆಗಳು, ರಾಜಕೀಯ ಪ್ರಾತಿನಿಧ್ಯ, ಸರ್ಕಾರ ಮತ್ತಿತರ ಸಾರ್ವಜನಿಕ ವಲಯಗಳ ನೌಕರಿ ಇನ್ನೂ ಮುಂತಾದ ಸೌಲಭ್ಯಗಳನ್ನು ಒದಗಿಸಿದಾಗ ಮಾತ್ರ ಇಂತಹ ಸಮುದಾಯಗಳ ಸುಧಾರಣೆ ಸಾಧ್ಯವಾಗುತ್ತದೆ. ಇದರ ಹೊರತು ಕಾಡುಗೊಲ್ಲರ ಅಥವಾ ಯಾವುದೇ ಬುಡಕಟ್ಟು ಸಮುದಾಯದ ಆಚಾರ ವಿಚಾರ ಸಂಪ್ರದಾಯಗಳನ್ನು ದುರಂತವೆಂಬಂತೆ ಬಿಂಬಿಸುವುದು ಅವರ ಸಾಂಸ್ಕೃತಿಕ ಬದುಕಿನ ಅಸ್ಮಿತೆಗಳನ್ನು ದಿಕ್ಕು ತಪ್ಪಿಸಿದಂತಾಗುತ್ತದೆ. ಬದಲಾವಣೆ ಎಂಬುದು ನಿಧಾನ ಗತಿಯ ನಿರಂತರ ಪ್ರಕ್ರಿಯೆ ಎಂಬುದನ್ನು ಮನಗಾಣೋಣ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ

    May 10, 2026

    ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ

    May 9, 2026

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ಚಿಕ್ಕನಾಯಕನಹಳ್ಳಿ: ಎಸ್‌ ಎಸ್‌ ಎಲ್‌ ಸಿಯಲ್ಲಿ ವಿದ್ಯಾರ್ಥಿಗಳು ಅಧಿಕ ಅಂಕಗಳನ್ನು ಪಡೆಯುವಂತೆ ಪ್ರೇರೇಪಿಸಿದ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಮೇ 16…

    ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    May 15, 2026

    ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ

    May 15, 2026

    ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.