nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025
    Facebook Twitter Instagram
    ಟ್ರೆಂಡಿಂಗ್
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    • ನಗರೋತ್ಥಾನ ಯೋಜನೆ ಅನುಷ್ಠಾನ: ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ
    • ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳ ಆರೋಪ
    • ತುಮಕೂರಿನಲ್ಲಿ ಬೃಹತ್ ತಿರಂಗ ಯಾತ್ರೆ
    • ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿರಾಕಾರ ಚೈತನ್ಯದಲ್ಲಿ ನಂಬಿಕೆ ಇರಿಸಿದರೆ ಜ್ಞಾನ, ಮುಕ್ತಿ ಪ್ರಾಪ್ತಿ
    ತಿಪಟೂರು February 7, 2022

    ನಿರಾಕಾರ ಚೈತನ್ಯದಲ್ಲಿ ನಂಬಿಕೆ ಇರಿಸಿದರೆ ಜ್ಞಾನ, ಮುಕ್ತಿ ಪ್ರಾಪ್ತಿ

    By adminFebruary 7, 2022No Comments2 Mins Read
    dasarighatta

    ತಿಪಟೂರು : ನಿರಾಕಾರವಾಗಿರುವ ಚೈತನ್ಯ ಶಕ್ತಿಯಲ್ಲಿ ನಂಬಿಕೆ ಇರಿಸಿ ಶ್ರದ್ಧಾ ಭಕ್ತಿಯಿಂದ ನಡೆದಾಗ ಮಾತ್ರವೇ ಜ್ಞಾನ ಮತ್ತು ಮುಕ್ತಿಯ ಪ್ರಾಪ್ತಿ ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಶಾಖಾಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ಧಾರ್ಮಿಕ ಕ್ಷೇತ್ರವಾದ ಆದಿಚುಂಚನಗಿರಿ ಶಾಖಾಮಠದ ದಸರೀಘಟ್ಟದ ಚೌಡೇಶ್ವರಿ ದೇವಾಲಯದಲ್ಲಿ ಭಾನುವಾರ ಚೌಡೇಶ್ವರಿ ದೇವಿಯ ನೂತನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ‘ನವಚಂಡಿಯಾಗ’ದಲ್ಲಿ ಭಾಗವಹಿಸಿ ಪೂರ್ಣಾಹುತಿ ನೀಡಿ ಮಾತನಾಡಿದರು.


    Provided by

    ಅಗೋಚರ ಹಾಗೂ ಅವ್ಯಕ್ತವಾದ ಶಕ್ತಿಯಲ್ಲಿ ವಿಜೃಂಭಿಸುವ ದೇವಿಯೂ ಜಗತ್ತನ್ನು ಕಾಪಾಡುತ್ತಿದ್ದಾಳೆ. ಇಂತಹ ದೇವಿಯ ಮಹಿಮೆಯನ್ನು ಅರಿಯಬೇಕಾದರೆ ಪಂಚೇಂದ್ರಿಯಗಳ ನಿಗ್ರಹ ಅತ್ಯವಶ್ಯಕ. ಪಂಚಭೂತಗಳಲ್ಲಿ ಅಪಾರ ನಂಬಿಕೆಯನ್ನು ಇರಿಸಿಕೊಂಡು ಬಹುನಿಷ್ಠೆಯಿಂದ ಶಕ್ತಿಯ ಆರಾಧನೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಕಳೆದ 63 ವರ್ಷಗಳಿಂದ ಭಕ್ತರನ್ನು ಪೋಷಿಸಿಕೊಂಡು ಬರುತ್ತಿದ್ದ ಈ ದೇವಿಗೆ 353 ದಿನಗಳ ನಂತರ ಮತ್ತೇ ಪುನರ್ ಶಕ್ತಿಯನ್ನು ತುಂಬಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

    ಪ್ರತಿಯೊಬ್ಬ ಮನುಷ್ಯನು ತಾಯಿಯ ಮೂಲಕವೇ ಇನ್ನುಳಿದ ದೇವಾನುದೇವತೆಗಳ ದರ್ಶನವನ್ನು ಮಾಡಬೇಕು. ಅವ್ಯಕ್ತವಾದ ಹಾಗೂ ಅಗೋಚರವಾದ ಶಕ್ತಿಯನ್ನು ತನ್ನಲ್ಲಿ ಗರ್ಭೀಕರಿಸಿಕೊಂಡಿರುವ ದೇವತೆಯನ್ನು ಪೂಜ್ಯ ಭಾವನೆಯಿಂದ ಪೂಜಿಸುತ್ತಾ ತಮ್ಮ ಅಂತರಂಗದಲ್ಲಿನ ಅಳಲುಗಳನ್ನು ತೋಡಿಕೊಳ್ಳಬೇಕು. ದಿವ್ಯಾನುಭವವನ್ನು ಪಡೆದುಕೊಳ್ಳಲು ನಿರ್ಮಲವಾದ ಮನಸ್ಸಿನಿಂದ ಹಾಗೂ ಪರಿಶುದ್ಧ ಹೃದಯದಿಂದ ಸದಾಕಾಲ ದೇವಿಯನ್ನು ಆರಾಧಿಸುವ ಮೂಲಕ ಮನಃಶಾಂತಿಯನ್ನು ಪಡೆದುಕೊಳ್ಳಬೇಕು. ಧರ್ಮ, ದಯೆಯಿಂದ ಕೂಡಿದ ಬದುಕನ್ನು ನಡೆಸುತ್ತಾ ದೇವರು ಮತ್ತು ಭಕ್ತನ ನಡುವೆ ಮಧುರ ಬಾಂಧವ್ಯಗಳನ್ನು ಬೆಸೆದುಕೊಂಡು ನೆಮ್ಮದಿಯನ್ನು ಕಾಣಬೇಕಾಗಿದೆ. ಯಾವುದೇ ಕಾರಣಕ್ಕೂ ದೈವದ ಬಗ್ಗೆ ಹಗುರವಾದ ಭಾವನೆಗಳನ್ನು ತಾಳದೇ ಭಕ್ತಿಯಿಂದ ಭಜಿಸಿದರೆ ಶಕ್ತಿಯ ಸಂಚಲನವಾಗಿ ಮನಸ್ಸು ಹಸನಾಗುತ್ತದೆ ಎಂದರು.

    ಮುಕ್ತ ಮನಸ್ಸಿನಿಂದ ಅಂದು ಕೃಷ್ಣ ಕೊಟ್ಟಂತಹ ಸಂದೇಶವನ್ನು ಪಾಲಿಸಿದರೆ ನಮ್ಮ ಬದುಕಿಗೆ ಬೇಕಾದ ಜ್ಞಾನ ಪ್ರಾಪ್ತಿಯಾಗುತ್ತದೆ. ಆಧುನಿಕ ಕಾಲಕ್ಕೆ ಶ್ರೀಕೃಷ್ಣ ಎಷ್ಟು ಪ್ರಸ್ತುತವೋ, ಅಪ್ರಸ್ತುತವೋ ಎಂಬ ಸರಿಯಾದ ಚರ್ಚೆ ಯಾದಲ್ಲಿ, ಅಂದಿನ ಇಂದಿನ ಸಮಾಜಕ್ಕೆ ಕೃಷ್ಣ ಹೆಚ್ಚು ಪ್ರಸ್ತುತ. ಆದರೆ,ನಾವು ಕೃಷ್ಣನನ್ನು ಅರ್ಥ ಮಾಡಿಕೊಳ್ಳುವಲ್ಲಿ ಎಡವಿದ್ದೇವೆ.

    ಈ ಸಂದರ್ಭದಲ್ಲಿ ದಸರೀಘಟ್ಟ ಶಾಖಾಮಠದ ಕಾರ್ಯದರ್ಶಿ ಚಂದ್ರಶೇಖರನಾಥ ಸ್ವಾಮೀಜಿ, ಮೈಸೂರು ಶಾಖಾಮಠದ ಸೋಮೇಶ್ವರನಾಥ ಸ್ವಾಮೀಜಿ, ಮಂಗಳೂರು ಶಾಖಾಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಹಾಸನ ಶಾಖಾಮಠದ ಶಂಭುನಾಥ ಸ್ವಾಮೀಜಿ, ಶೃಂಗೇರಿ ಶಾಖಾಮಠದ ಗುಣನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಶಾಖಾಮಠದ ಮಂಗಳನಾಥ ಸ್ವಾಮೀಜಿ, ಕಬ್ಬಳಿ ಶಾಖಾಮಠದ ಶಿವಪುತ್ರ ಸ್ವಾಮೀಜಿ, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಮಾಜಿ ಶಾಸಕ ಕೆ.ಷಡಕ್ಷರಿ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಲ್.ಜಗದೀಶ್, ಶ್ರೀರಂಗ ಆಸ್ಪತ್ರೆಯ ವೈದ್ಯ ಡಾ.ವಿವೇಚನ, ಕುಮಾರ ಆಸ್ಪತ್ರೆಯ ವೈದ್ಯ ಡಾ.ಶ್ರೀಧರ್, ಬೆಂಗಳೂರಿನ ರಾಮಕೃಷ್ಣಪ್ಪ, ಭಕ್ತಾಧಿಗಳಾದ ಡಾ.ಜಿತೇಂದ್ರ, ರವಿಸಿದ್ಧಪ್ಪ, ಲಲಿತಾದೇವಿ ಗೋಪಾಲ್, ಹಾಸನ ರವಿಕುಮಾರ್, ಗುಡಿಗೌಡ ಹುಚ್ಚೇಗೌಡ ಇದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ

    May 18, 2025

    ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೋರಾಟಗಾರರ ಬಂಧನಕ್ಕೆ ಖಂಡನೆ: ಡಿಸಿ ವಿರುದ್ಧ ಆಕ್ರೋಶ

    May 16, 2025

    ತಿಪಟೂರು: ಭಾರೀ ಮಳೆಗೆ ಮರ ಮುರಿದು ಬಿದ್ದು ಕಾರು ಜಖಂ

    May 16, 2025
    Our Picks

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025

    ಸಿಂಧೂ ಜಲ ಒಪ್ಪಂದ ಸ್ಥಗಿತ ಬೆನ್ನಲ್ಲೇ ಹೆಚ್ಚುವರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಕೆಗೆ ಭಾರತ ಚಿಂತನೆ!

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ತುಮಕೂರು:  ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (TG) ಮೀಸಲಾತಿಯಡಿ 1:3…

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.