ತುಮಕೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಸತತ 8ನೇ ಕೇಂದ್ರ ಬಜೆಟ್ ಮಂಡಿಸಿದ ಮಹಿಳಾ ಸಚಿವೆ ಎಂಬ ಖ್ಯಾತಿಗೆ ಪಾತ್ರವಾಗಿರುವುದಕ್ಕೆ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಪಿ. ಆರ್. ಕುರಂದವಾಡ ಶ್ಲಾಘಿಸಿದ್ದಾರೆ.
2025ನೇ ಸಾಲಿನ ಬಜೆಟ್ ನಲ್ಲಿ ಪ್ರಮುಖವಾಗಿ ರಫ್ತು ಮಾಡುವ ಎಂಎಸ್’ಎಂಇ ಗಳಿಗೆ 20 ಕೋಟಿಯವರೆಗೆ ಸಾಲ ಸೌಲಭ್ಯ ಲಭಿಸಿದೆ ಎಂದಿದ್ದಾರೆ.
27 ವಲಯಗಳಲ್ಲಿ ಸಾಲ ಯೋಜನೆ, ಕುಲಕರ್ಮಿಗಳ ಆಧಾರಿತ ಎಂಎಸ್ ಎಂಇ ಗಳಿಗೆ ವಿಶೇಷ ಯೋಜನೆ, ಒಂದು ಕೋಟಿ ಕೆಲಸಗಾರರಿಗೆ ಹೆಲ್ತ್ ಇನ್ಶೂರೆನ್ಸ್, ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಯೋಜನೆ, ಹೊಸ ಉದ್ಯೋಗ ಸೃಷ್ಟಿಗೆ ಪ್ರವಾಸಿ ಕೇಂದ್ರಗಳಲ್ಲಿ ಒತ್ತು ನೀಡಿರುವುದು ಸ್ವಾಗತ ಎಂದಿದ್ದಾರೆ.
120 ಹೊಸ ಕೇಂದ್ರಗಳಿಗೆ ವಿಮಾನ ಸಂಪಕಕ್ಕೆ ಆದ್ಯತೆ, ಸ್ಥಳೀಯ ಮಟ್ಟದ ಉತ್ಪಾದನೆಗಳ ರಫ್ತಿಗೆ ಆದ್ಯತೆ, ಎಲೆಕ್ಟ್ರಾನಿಕ್ ವಸ್ತುಗಳ ಉತ್ಪಾದನೆಗೆ ಆದ್ಯತೆ, ವಿಮಾಕ್ಷೇತ್ರದಲ್ಲಿ 100% ವಿದೇಶಿ ಹೂಡಿಕೆ, ರಫ್ತು ಉತ್ತೇಜನಕ್ಕೆ ಮಂಡಳಿ ಸ್ಥಾಪನೆ, ಡಿಜಿಟಲ್ ವ್ಯಾಪಾರವೃದ್ಧಿಗಾಗಿ ಉತ್ತೇಜನ, ಇನ್ಶೂರೆನ್ಸ್ ವಲಯದಲ್ಲಿ ಶೇಕಡ 100ರಷ್ಟು ಎಫ್ ಡಿಐಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ.
ನಗರ ಅಭಿವೃದ್ಧಿಗಾಗಿ ಒಂದು ಲಕ್ಷ ಕೋಟಿ ಅನುದಾನ, ಹಿರಿಯ ನಾಗರಿಕರಿಗೆ ಒಂದು ಲಕ್ಷದವರೆಗೂ ಟಿಡಿಎಸ್ ನಿಂದ ವಿನಾಯಿತಿ, ಹಾಗೂ 12 ಲಕ್ಷದ ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ, 12 ಲಕ್ಷದಿಂದ 16 ಲಕ್ಷ ಆದಾಯಕ್ಕೆ 15%, 16 ಲಕ್ಷದಿಂದ 20 ಲಕ್ಷ ಆದಾಯಕ್ಕೆ 20%, 20 ಲಕ್ಷದಿಂದ 24 ಲಕ್ಷದವರೆಗೆ 25%, 24 ಲಕ್ಷಕ್ಕಿಂತ ಹೆಚ್ಚಿನ ಆದಾಯಕ್ಕೆ 30% ತೆರಿಗೆಯನ್ನು ವಿಧಿಸಲಾಗಿದೆ ಎಂದಿದ್ದಾರೆ.
ಈ ಬಜೆಟ್ ಕೈಗಾರಿಕೋದ್ಯಮಿಗಳ, ವಾಣಿಜ್ಯೋದ್ಯಮಿಗಳ, ಜನಸಾಮಾನ್ಯರ, ಮಧ್ಯಮ ವರ್ಗದವರ, ವ್ಯಾಪಾರಸ್ಥರ ಬಜೆಟ್ ಆಗಿದೆ ಎಂದಿದ್ದಾರೆ.
ಆದರೆ ಈ ಬಜೆಟ್ ನಲ್ಲಿ ಅಂದುಕೊಂಡಂತೆ ತುಮಕೂರು ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯತೆಯನ್ನು ನೀಡದಿರುವುದು ಕಂಡುಬರುತ್ತದೆ ಹಾಗೂ ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಲಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4