ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದ ಆವರಣದಲ್ಲಿರುವ ಉದ್ಯಾನವನ ನಿರ್ವಹಣೆ ಮಾಡುವಲ್ಲಿ ಯಾರು ಗಮನ ಹರಿಸಿಲ್ಲ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿರ್ಲಕ್ಷ ತೋರಿದ್ದಾರೆ.
ಈ ಪ್ರವಾಸಿ ಮಂದಿರಕ್ಕೆ ಪ್ರತಿನಿತ್ಯ ಹಾಲಿ ಶಾಸಕರು ಮಾಜಿ ಶಾಸಕರು ಸುಮಾರು ಜನ ರಾಜಕೀಯ ದ ವ್ಯಕ್ತಿಗಳು ಸಮಾಜದ ಗಣ್ಯ ವ್ಯಕ್ತಿಗಳು, ಅನೇಕ ಉನ್ನತ ಅಧಿಕಾರಿಗಳು ಬಂದು ಹೋಗುತ್ತಿದ್ದಾರೆ. ಆದರೆ ಇದರ ನಿರ್ವಹಣೆ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಉದ್ಯಾನವನದ ಬಗ್ಗೆ ಕಾಳಜಿಯನ್ನು ತೋರಿಸುತ್ತಿಲ್ಲ.
ಇನ್ನಾದರೂ ಇದರ ಬಗ್ಗೆ ಸಂಬಂಧಪಟ್ಟವರು ಅಧಿಕಾರಿಗಳ ಗಮನ ಸೆಳೆದು ನಿರ್ವಹಣೆ ಬಗ್ಗೆ ಕಾಳಜಿ ವಹಿಸಿ ಪ್ರವಾಸಿ ಮಂದಿರದ ಉದ್ಯಾನವನ ಸುಂದರವಾಗಿ ಕಾಣುವಂತೆ ಹಾಗೂ ಮಾದರಿ ಆಗುವಂತೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ: ಸುರೇಶ್ ಬಾಬು , ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz