ತುಮಕೂರು: ಸಿರಾ ತಾಲೂಕಿನ ಮಿನಿವಿಧಾನ ಸೌಧದಲ್ಲಿ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ಹಾಗೂ ಬಗರ್ಹುಕುಂ ಸಾಗುವಳಿ ಚೀಟಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಿರಾ ತಾಲೂಕಿನ ಶಾಸಕರಾದ ಸಿ.ಎಂ. ರಾಜೇಶ್ ಗೌಡ ಹಕ್ಕುಪತ್ರ ಹಾಗೂ ಸಾಗುವಳಿ ಪತ್ರ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಹಿಂದೆ ಇದ್ದ ಸರ್ಕಾರಗಳು ಗೋಮಾಳ ಪ್ರದೇಶಗಳು ಕಡಿಮೆಯಾಗುತ್ತಿವೆ, ಆದ್ದರಿಂದ ಸಾಗುವಳಿ ಚೀಟಿ ವಿತರಣೆ ಮಾಡಬಾರದು ಎಂದು ನಿರ್ಧಾರ ಮಾಡಿದ್ದರು. ಈಗ ನಮ್ಮ ಸರ್ಕಾರ ಗೋಮಾಳದಲ್ಲಿ ಸಾಗುವಳಿ ಕೊಡಬೇಕು ಎಂದು ನಿರ್ಧಾರ ಮಾಡಿತ್ತು. ನಮ್ಮ ಕಂದಾಯ ಸಚಿವರಾದ ಆರ್.ಅಶೋಕ್ ರವರ ನೇತೃತ್ವದಲ್ಲಿ, ಸಚಿವ ಮಾಧುಸ್ವಾಮಿ ಅವರ ಸದಸ್ಯತ್ವದಲ್ಲಿ ಸಮಿತಿ ರಚನೆ ಮಾಡಿದೆ. ರೈತರು ಸಾಗುವಳಿ ಮಾಡುತ್ತಿದ್ದಾರೆ ಅಲ್ಲಿ ಇರುವಂತಹ ಹಸುಕರುಗಳು ಸಂಖ್ಯೆಯ ಅನುಗುಣವಾಗಿ ಗೋಮಾಳ ಜಮೀನನ್ನು ರೈತರಿಗೆ ಸಾಗುವಳಿ ಮಾಡುವುದಕ್ಕೆ ಕೊಡಬೇಕು ಎಂದು ಶೀಘ್ರದಲ್ಲಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದರು.
ತಮ್ಮ ಮನೆ ಬಾಗಿಲಿಗೆ ಪಿಂಚಣಿ, ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ನಿಮ್ಮ ಮನೆ ಬಾಗಿಲಿಗೆ ತಲುಪಿಸಬೇಕೆಂದು ಅನೇಕ ಪಿಂಚಣಿ ಅದಾಲತ್ ಗಳಲ್ಲಿ ಸುಮಾರು ಒಂದು ವರ್ಷದಿಂದ ಮಾಡುತ್ತಾ ಬಂದಿದ್ದೇವೆ. ಇದರಲ್ಲಿ ಏನಾದರೂ ಸಮಸ್ಯೆ ಇದ್ದರೆ ನೇರವಾಗಿ ತಹಶೀಲ್ದಾರ್ ಕಚೇರಿ ಅಥವಾ ನಮ್ಮನಾದರೂ ಸಂಪರ್ಕಿಸಿದರೆ ಅದರ ನಿವಾರಣೆ ಮಾಡುತ್ತೇವೆ . ಸದಾ ನಿಮ್ಮ ಜೊತೆಗಿರುತ್ತೇವೆ ಎಂದು ಹೇಳಿದರು
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB