nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಪ್ಪಾದ ಜಾಗಗಳಲ್ಲಿ ಪಾರ್ಕ್ ಆದ ವಾಹನಗಳ ಫೋಟೋ ಕಳುಹಿಸುವವರಿಗೆ 500 ರೂ. ಬಹುಮಾನ !
    ರಾಜ್ಯ ಸುದ್ದಿ June 18, 2022

    ತಪ್ಪಾದ ಜಾಗಗಳಲ್ಲಿ ಪಾರ್ಕ್ ಆದ ವಾಹನಗಳ ಫೋಟೋ ಕಳುಹಿಸುವವರಿಗೆ 500 ರೂ. ಬಹುಮಾನ !

    By adminJune 18, 2022No Comments2 Mins Read
    sarege

    ನಿಯಮಬಾಹೀರ ವಾಹನಗಳ ಪಾರ್ಕಿಂಗ್ ತಡೆಗಟ್ಟಲು ಹೊಸ ಕಾನೂನಿನ ಕುರಿತು ತಾವು ಚಿಂತನೆ ನಡೆಸುತ್ತಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೊಸ ಕಾನೂನಿನ ಅಡಿ ಯಾರಾದರು ತಪ್ಪಾದ ರೀತಿಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿದ್ದರೆ ಮತ್ತು ಬೇರೊಬ್ಬರು ಆ ವಾಹನದ ಫೋಟೋ ಕ್ಲಿಕ್ಕಿಸಿ ವರದಿ ಮಾಡಿದರೆ, ವರದಿ ಮಾಡಿದವರಿಗೆ ಬಹುಮಾನ ನೀಡಲಾಗುವುದು ಎನ್ನಲಾಗಿದೆ.

    ಫೋಟೋ ಕಳುಹಿಸುವವರಿಗೆ ಸರ್ಕಾರ 500 ರೂ. ಬಹುಮಾನ ನೀಡಲಿದೆ!

    ತಪ್ಪಾದ ವಾಹನ ಪಾರ್ಕಿಂಗ್‌ನಿಂದಾಗಿ ರಸ್ತೆಗಳಲ್ಲಿ ಜಾಮ್ ಸಂಭವಿಸುವುದನ್ನು ನಾವು ಹಲವು ಬಾರಿ ನೋಡಿದ್ದೇವೆ. ಇದನ್ನು ತಡೆಗಟ್ಟಲು ಸರ್ಕಾರ ಈ ಹೊಸ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ಈ ರೀತಿ ನಿಯಮ ಬಾಹೀರವಾಗಿ ಪಾರ್ಕಿಂಗ್ ಮಾಡಲಾಗಿರುವ ವಾಹನಗಳ ಛಾಯಾಚಿತ್ರ ತೆಗೆದು ಅಧಿಕಾರಿಗಳಿಗೆ ಕಳುಹಿಸಿದರೆ 500 ರೂ.ವರೆಗೆ ಬಹುಮಾನ ಪಡೆಯಬಹುದು ಎನ್ನಲಾಗಿದೆ.

    ಕೇಂದ್ರ ಸಚಿವ ನಿತೀನ್ ಗಡ್ಕರಿ ಹೇಳಿದ್ದೇನು?

    ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಪ್ರಕಟಿಸಿರುವ ವರದಿಯ ಪ್ರಕಾರ, ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿತಿನ್ ಗಡ್ಕರಿ ಈ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತಾಗಿ ತಾವು ಕಾನೂನು ತರಲು ಬಯಸಿದ್ದು, ಈ ಹೊಸ ಕಾನೂನಿನ ಅಡಿಯಲ್ಲಿ ತಪ್ಪಾಗಿ ನಿಲ್ಲಿಸಿದ ವಾಹನದ ಚಿತ್ರವನ್ನು ಕಳುಹಿಸುವ ವ್ಯಕ್ತಿಗೆ ವಿಧಿಸಲಾಗಿರುವ ದಂಡದ ಅರ್ಧದಷ್ಟು ಹಣ ಬಹುಮಾನದ ರೂಪದಲ್ಲಿ ಸಿಗಲಿದೆ. ಒಟ್ಟು ದಂಡ 1,000 ರೂ.ಗೆ ಬಂದರೆ, ವ್ಯಕ್ತಿಯು 500 ರೂ.ವರೆಗೆ ಬಹುಮಾನ ಪಡೆಯುತ್ತಾನೆ ಎಂದು ಅವರು ಹೇಳಿದ್ದಾರೆ. ಇದರಿಂದ ಪಾರ್ಕಿಂಗ್ ಸಮಸ್ಯೆಯೂ ಬಗೆಹರಿಯಲಿದೆ ಎಂದು ಗಡ್ಕರಿ ಹೇಳಿದ್ದಾರೆ.

    ಪಾರ್ಕಿಂಗ್ ಕುರಿತು ಅಸಮಾಧಾನ ಹೊರಹಾಕಿದ ಗಡ್ಕರಿ

    ತಪ್ಪಾದ ಪಾರ್ಕಿಂಗ್ ಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಿತೀನ್ ಗಡ್ಕರಿ, ಜನರು ತಮ್ಮ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡುವುದಿಲ್ಲ. ಇದರಿಂದ ವಾಹನಗಳು ರಸ್ತೆಯ ಜಾಗವನ್ನು ಆಕ್ರಮಿಸುತ್ತಿವೆ ಎಂದು ಅವರು ಹೇಳಿದ್ದಾರೆ. ಇದಕ್ಕಾಗಿ ಉದಾಹರಣೆಯೊಂದನ್ನು ನೀಡಿರುವ ಗಡ್ಕರಿ, ನಾಗಪುರದ ತಮ್ಮ ನಿವಾಸದ ಅಡುಗೆಮನೆಯ ಹತ್ತಿರ ಎರಡು ಹಳೆವಾಹನಗಳಿಗಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ತಮ್ಮ ಮನೆಯಲ್ಲಿ ಒಟ್ಟು 12 ವಾಹನಗಳಿವೆ ನಿಲ್ಲುವ ವ್ಯವಸ್ಥೆ ಮಾಡಿರುವುದಾಗಿ ಹೇಳಿದ್ದಾರೆ. ಇಂದು ನಾಲ್ಕು ಸದಸ್ಯರಿರುವ ಒಂದು ಕುಟುಂಬದ ಬಳಿ 6 ವಾಹನಗಳಿವೆ. ದೆಹಲಿಯ ಜನರು ಭಾಗ್ಯಶಾಲಿಗಳಾಗಿದ್ದಾರೆ, ಏಕೆಂದರೆ ಅವರಿಗಾಗಿ ರಸ್ತೆಗಳಲ್ಲಿಯೇ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ, ಪಾರ್ಕಿಂಗ್ ಗಾಗಿ ಜಾಗ ಇಲ್ಲದ ಕಾರಣ ಹಲವಾರು ವಾಹನಗಳು ರಸ್ತೆಯಲ್ಲಿಯೇ ಪಾರ್ಕ್ ಆಗಿರುತ್ತವೆ.

    ಆದರೆ, ಪ್ರಸ್ತುತ ತಮ್ಮ ಈ ಹೊಸ ಕಾನೂನಿನ ಬಗ್ಗೆ ಕೇಂದ್ರ ಸಚಿವರು ಯಾವುದೇ ರೀತಿಯ ಹೆಚ್ಚಿನ ವಿವರಗಳನ್ನು ಹೇಳಿಕೊಂಡಿಲ್ಲ. ಆದರೆ, ಈ ಕುರಿತು ಚಿಂತನೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ. ಒಂದು ವೇಳೆ ಈ ಕಾನೂನು ಜಾರಿಗೆ ಬಂದರೆ, ಇದರಿಂದ ಭಾರತದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸುಧಾರಣೆಯಾಗಲಿದೆ ಎಂಬುದು ಮಾತ್ರ ನಿಜ .

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.