ನವದೆಹಲಿ: ನೋಟುಗಳ ಮೇಲೆ ಗಾಂಧೀಜಿ ಭಾವಚಿತ್ರದೊಂದಿಗೆ ಲಕ್ಷ್ಮಿ ಮತ್ತು ಗಣೇಶ ದೇವರುಗಳ ಚಿತ್ರಗಳನ್ನೂ ಮುದ್ರಿಸಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಎರಡು ದಿನಗಳ ಹಿಂದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪೂಜೆ ಮಾಡುವಾಗ ತಮಗೆ ಈ ವಿಚಾರ ಹೊಳೆಯಿತು ಎಂದು ಹೇಳಿದ್ದಾರೆ.
ಇಂಡೋನೇಷ್ಯಾದಲ್ಲಿ ಹಿಂದೂಗಳ ಜನಸಂಖ್ಯೆ ಕೇವಲ ಶೇ. 2 ರಷ್ಟಿದೆ. ಆದರೂ ಅಲ್ಲಿನ ಕರೆನ್ಸಿ ನೋಟುಗಳ ಮೇಲೆ ಗಣೇಶ ದೇವರ ಭಾವಚಿತ್ರವಿರುತ್ತದೆ. ಹೀಗಿರುವಾಗ ಭಾರತದಲ್ಲಿ ಇದು ಏಕೆ ಸಾಧ್ಯವಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮಿ ಮತ್ತು ಗಣೇಶ ದೇವರ ಭಾವಚಿತ್ರ ಮುದ್ರಿಸುವ ಕುರಿತಂತೆ ತಾವು ಶೀಘ್ರದಲ್ಲೇ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯವುದಾಗಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz