ತುಮಕೂರು: ಮಹಾನಗರಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಅವರು ಬುಧವಾರ ಪಾಲಿಕೆ ವ್ಯಾಪ್ತಿಯಲ್ಲಿರುವ 4 ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಪಾಲಿಕೆಯ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಆರೋಗ್ಯಾಧಿಕಾರಿ ಹಾಗೂ ಮತ್ತಿತರ ಅಧಿಕಾರಿಗಳ ತಂಡದೊಂದಿಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಸ್ವಚ್ಛತೆ, ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.
ಕ್ಯಾಂಟೀನ್ ನಲ್ಲಿ ಸಾರ್ವಜನಿಕರೊಂದಿಗೆ ಆಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಹಾಗೂ ಶುಚಿ–ರುಚಿಯನ್ನು ಪರಿಶೀಲಿಸಿದರು. ಇತರೆ ಹೋಟೆಲ್ ಗಳಿಗಿಂತ ಭಿನ್ನ ರೀತಿಯಲ್ಲಿ ಕಾಣಿಸುವಂತೆ ಇಂದಿರಾ ಕ್ಯಾಂಟೀನ್ ಗಳನ್ನು ಸೌಂದರ್ಯೀಕರಣಗೊಳಿಸಲಾಗಿದೆ. ಪ್ರಸ್ತುತ ಇರುವ 4 ಇಂದಿರಾ ಕ್ಯಾಂಟೀನ್ಗಳೊಂದಿಗೆ ಶಿರಾಗೇಟ್ ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ಗಳನ್ನು 2 ಹೊಸದಾಗಿ ಅನುಷ್ಠಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದೆ.
ಮುಂದಿನ 2 ವಾರಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್ ಗಳಲ್ಲಿ ಉತ್ತಮ ಗುಣಮಟ್ಟದ ಶುಚಿ—ರುಚಿಯಾದ ಆಹಾರ ವಿತರಣೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಇಂದಿರಾ ಕ್ಯಾಂಟೀನ್ ಗಳಲ್ಲಿ ತಿಂಡಿಗೆ 5 ರೂ. ಹಾಗೂ ಊಟಕ್ಕೆ 10 ರೂ.ಗಳ ದರ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————