ಕೊರಟಗೆರೆ : ಎನ್ ಎಸ್ ಎಸ್ ವಿದ್ಯಾರ್ಥಿಗಳು ಸಮಾಜದ ಬಗ್ಗೆ ಜವಾಬ್ದಾರಿಯುತ ಮನೋಭಾವವನ್ನು ಹೊಂದಿ ಶಿಸ್ತು, ಸೇವಾ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಈರಪ್ಪ ನಾಯಕ ತಿಳಿಸಿದರು.
ತಾಲ್ಲೂಕಿನ ಜೆಟ್ಟಿ ಅಗ್ರಹಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿದ್ದ 2025–26ನೇ ಸಾಲಿನ ಎನ್ ಎಸ್ ಎಸ್ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಅಗ್ರಹಾರ ಗ್ರಾ.ಪಂ ಪಿಡಿಓ ರಂಗನರಸಯ್ಯ ಮಾತನಾಡಿ, ಆರು ದಿನಗಳ ಕಾಲ ನಡೆಯಲಿರುವ ಶಿಬಿರಕ್ಕೆ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿ, ಗ್ರಾಮಾಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಐಕ್ಯೂ ಎಸಿ ಸಂಚಾಲಕಿ ಡಾ.ದೀಪಾ ಡಿ.ಎಸ್. ಮಾತನಾಡಿ, ಸಮೃದ್ಧ ಭಾರತ ನಿರ್ಮಾಣಕ್ಕೆ ಆರೋಗ್ಯಕರ ಯುವಕರು ಅವಶ್ಯಕ. ಎನ್ ಎಸ್ ಎಸ್ ಶಿಬಿರಗಳು ಯುವಕರಲ್ಲಿ ಶಾರೀರಿಕ, ಮಾನಸಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಗ್ರಾಮದ ಮಹಿಳೆ ಮಂಜುಳ ಆರಾಧ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸೇವಾ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಕರೆ ನೀಡಿದರು.
ಈ ವೇಳೆ ಮಾಜಿ ತಾ.ಪಂ ಸದಸ್ಯ ಅಂಜಿನಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ನಂದೀಶ್, ಮಾಜಿ ಉಪಾಧ್ಯಕ್ಷೆ ಸರಸ್ವತಿ ಮಂಜುನಾಥ್, ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ಹಿಂದೂಮತಿ, ರಂಗನಾಥ್ ಮೂರ್ತಿ, ಡಾ.ರಮೇಶ್, ಪ್ರಕಾಶ್, ಡಾ.ಅಮಿತಾ, ಡಾ.ಜ್ಯೋತಿ, ನಾಗೇಂದ್ರಪ್ಪ, ಡಾ.ಲೋಕೇಶ್ ನಾಯಕ್, ಮುನಿರಾಜು, ಗೋವಿಂದರಾಜು ಎನ್, ಡಾ.ಅಶ್ವಕ್ ಅಹಮದ್, ರಘುನಾಥ್ ಸೇರಿದಂತೆ ಇತರರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


