ಕೊರಟಗೆರೆ: ತಾಲ್ಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ನಾಹೀದ ಜಮ್ ಜಮ್ ಮೊದಲ ಬಾರಿಗೆ ಮತ ಚಲಾಯಿಸುವ 18 ವರ್ಷ ತುಂಬಿದ ಮತದಾರರಿಗೆ ಗುರುತಿನ ಚೀಟಿ ವಿತರಿಸಿದರು.
ಬಳಿಕ ಮಾತನಾಡಿದ ಅವರು, ನಾಡಿನ ಭವಿಷ್ಯವೇ ವಿದ್ಯಾರ್ಥಿಗಳು, ನೀವು ಹಾಕುವ ಮತಕ್ಕೆ ಅಮೂಲ್ಯವಾದ ಭವಿಷ್ಯವಿದೆ. ಆದ್ದರಿಂದ ಯಾವ ಅಭ್ಯರ್ಥಿ ನಿಮಗೆ ಸೂಕ್ತ ಎಂಬುದನ್ನು ಯೋಚಿಸಿ ಮತ ನೀಡಿ, ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವುದು ನಮ್ಮೆಲ್ಲರ ಗುರಿಯಾಗಿರಬೇಕು ಎಂದು ಅರಿವು ಮೂಡಿಸಿದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy