nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025
    Facebook Twitter Instagram
    ಟ್ರೆಂಡಿಂಗ್
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    • ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
    • ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
    • ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
    • ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
    • ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
    • ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಚಾರ ನಿಯಮ ಪಾಲನೆ ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯ: ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ
    ರಾಜ್ಯ ಸುದ್ದಿ May 30, 2024

    ಸಂಚಾರ ನಿಯಮ ಪಾಲನೆ ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯ: ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ

    By adminMay 30, 2024No Comments3 Mins Read
    dharavada

    ಧಾರವಾಡ:  ಪ್ರತಿ ವರ್ಷ ಅನೇಕ ವಾಹನ ಸವಾರರು ಹಾಗೂ ಸಂಚಾರಿಗಳು ಸಂಚಾರಿ ನಿಯಮ ಉಲ್ಲಂಘನೆಯಿಂದ ಜೀವ ಕಳೆದುಕೊಳ್ಳುತ್ತಾರೆ. ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯವಾಗಿದೆ ಎಂದು ಹುಬ್ಬಳ್ಳಿ– ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಹೇಳಿದರು.

    ಅವರು ಮೇ.29 ಸಂಜೆ ಧಾರವಾಡ ನಗರದ ಆಲೂರು ವೆಂಕಟರಾವ್ (ಜುಬ್ಲಿ ಸರ್ಕಲ್) ವೃತ್ತದಲ್ಲಿ ಸಂಚಾರ ನಿಯಮಗಳ ಸಾರ್ವಜನಿಕ ಜಾಗೃತಿ ಹಾಗೂ ದೋಷಪೂರಿತ ಸೈಲೆನ್ಸರ್‍ ಗಳ ನಾಶಪಡಿಸುವ ಕಾರ್ಯಕ್ಕೆ ಚಾಲನೆ ನೀಡಿ, ಮಾತನಾಡಿದರು.


    Provided by
    Provided by

    ಸಂಚಾರ ನಿಯಮಗಳ ಕುರಿತು ಪ್ರತಿ ವರ್ಷ ವಿವಿಧ ಕಾರ್ಯಕ್ರಮಗಳ ಮೂಲಕ ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆದರೂ ವಾಹನ ಸವಾರರು ಸರಿಯಾಗಿ ಹೆಲ್ಮೆಟ್ ಧರಿಸುವುದಿಲ್ಲ, ಸೀಟ್ ಬೆಲ್ಟ್ ಧರಿಸುವುದಿಲ್ಲ, ಸಿಗ್ನಲ್ ಜಂಪ್ ಮಾಡುವುದು, ಸಂಚಾರಿ ಸಾಮಾನ್ಯ ನಿಯಮಗಳನ್ನು ಸಹ ಪಾಲಿಸುವುದಿಲ್ಲ. ಇದರಿಂದಾಗಿ ತಮ್ಮ ಅಮೂಲ್ಯ ಜೀವವನ್ನೇ ಕಳೆದುಕೊಳ್ಳುತ್ತಾರೆ ಎಂದು ಅವರು ತಿಳಿಸಿದರು.

    ಅವಳಿ ನಗರದಲ್ಲಿ ವಾಹನ ದಟ್ಟಣೆ ಮಾರ್ಗಗಳನ್ನು ಗುರುತಿಸಲಾಗಿದೆ. ಅವುಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಪಾಲಕರು 18 ವರ್ಷ ದೊಳಗಿನ ಮಕ್ಕಳಿಗೆ ವಾಹನ ಚಾಲನೆಗೆ ನೀಡಬಾರದು. ಇದು ಅಪರಾಧವಾಗಿದ್ದು, ಅಂತ ಪಾಲಕರಿಗೆ ರೂ. 25 ಸಾವಿರ ದಂಡ ಮತ್ತು ಜೈಲುವಾಸದ ಶಿಕ್ಷೆ ಇದೆ. ಸಾರ್ವಜನಿಕರ ಸಹಕಾರದಿಂದ ಮಾತ್ರ ಸುಗಮ ಮತ್ತು ಸುಸೂತ್ರ ಸಂಚಾರ ಹೊಂದಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

    ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೋಟಾರ್ ಸೈಕಲ್ ಸವಾರರು ತಮ್ಮ ವಾಹನಗಳಿಗೆ ಅನಧಿಕೃತವಾಗಿ ದೋಷಪೂರಿತ ಕರ್ಕಶ ಶಬ್ದವನ್ನು ಉಂಟು ಮಾಡುವ ಸೈಲೆನ್ಸರ್ ಗಳನ್ನು ಹಾಕಿಕೊಂಡು, ಸಂಚರಿಸಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ ಜಾಗೃತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

    ಮಾರ್ಚ್ 1, 2024 ರಿಂದ ಮೇ 29, 2024 ರವರೆಗಿನ ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 240 ಸೈಲೆನ್ಸರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಇವುಗಳ ಮೌಲ್ಯ ಸುಮಾರು ರೂ. 12 ಲಕ್ಷಗಳಾಗಿದೆ. ದೋಷಪೂರಿತ ಕರ್ಕಶ ಸೈಲೇನ್ಸರ್ ಗಳನ್ನು ವಶಪಡಿಸಿಕೊಂಡು ವಾಹನ ಸವಾರರಿಗೆ ತಲಾ 500 ರೂ. ದಂಡ ವಿಧಿಸಿ, ವಾಹನಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

    ಮುಂದಿನ ದಿನಗಳಲ್ಲಿ ಯಾವುದಾದರೂ ದೋಷಪೂರಿತ ಸೈಲೆನ್ಸರ್ ಸೈಕಲ್ ಮೋಟಾರ ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಮೋಟಾರ್ ಸೈಕಲ್ ನಂಬರ್  ಸಮೇತ ಫೋಟೋ, ವಿಡಿಯೋ ಮೂಲಕ ಸಂಚಾರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 9480802037 ಗೆ ವಾಟ್ಸಪ್ ಮೂಲಕ ಕಳುಹಿಸಬಹುದು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಈ ಸಂದರ್ಭದಲ್ಲಿ ತಿಳಿಸಿದರು.

    3 ವರ್ಷಗಳ ರಸ್ತೆ ಅಪಘಾತದ ವಿವರ: 2022 ರ ರಸ್ತೆ ಅಪಘಾತದಲ್ಲಿ 97 ಪುರುಷರು, 14 ಮಹಿಳೆಯರು ಸೇರಿ ಒಟ್ಟು 111 ಜನ ಮರಣ ಹೊಂದಿದ್ದು, 419 ಪುರುಷರು, 87 ಮಹಿಳೆಯರು ಸೇರಿ ಒಟ್ಟು 506 ಜನ ತೀವ್ರ ಗಾಯಗೊಂಡಿದ್ದಾರೆ. 2023 ರ ರಸ್ತೆ ಅಪಘಾತದಲ್ಲಿ 100 ಪುರುಷರು, 17 ಮಹಿಳೆಯರು ಸೇರಿ ಒಟ್ಟು 117 ಜನ ಮರಣ ಹೊಂದಿದ್ದು, 454 ಪುರುಷರು, 105 ಮಹಿಳೆಯರು ಸೇರಿ ಒಟ್ಟು 559 ಜನ ತೀವ್ರ ಗಾಯಗೊಂಡಿದ್ದಾರೆ. 2024 ರ ಜನವರಿಯಿಂದ ಇಂದಿನ ವರೆಗೆ ರಸ್ತೆ ಅಪಘಾತದಲ್ಲಿ 30 ಪುರುಷರು, 4 ಮಹಿಳೆಯರು ಸೇರಿ ಒಟ್ಟು 34 ಜನ ಮರಣ ಹೊಂದಿದ್ದು, 113 ಪುರುಷರು, 15 ಮಹಿಳೆಯರು ಸೇರಿ ಒಟ್ಟು 128 ಜನ ತೀವ್ರ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದರು.

    3 ವರ್ಷದ ಎಂ.ವಿ ಆಯಾಕ್ಟ್ ಮತ್ತು ನ್ಯಾಯಾಲಯದಿಂದ ಸಂಚಾರ ನಿಯಮ ಉಲ್ಲಂಘನೆ ಅಡಿಯಲ್ಲಿ ವಸೂಲಿ ಮಾಡಲಾದ ದಂಡದ ವಿವರ: 2022 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 1,40,416 ಅಪರಾಧಗಳು ದಾಖಲಾಗಿವೆ. 66,167,100 ರೂ.ಗಳ ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಲಾಗಿದ್ದು, 1,28,64,100 ರೂ.ಗಳ ದಂಡವನ್ನು ನ್ಯಾಯಾಲಯದಿಂದ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 7,90,31,200 ರೂ.ಗಳ ದಂಡ ವಸೂಲಿ ಮಾಡಲಾಗಿದೆ. 2023 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 1,91,883 ಅಪರಾಧಗಳು ದಾಖಲಾಗಿವೆ. 7,52,65,125 ರೂ.ಗಳ ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಲಾಗಿದ್ದು, 1,83,61,000 ರೂ.ಗಳ ದಂಡವನ್ನು ನ್ಯಾಯಾಲಯದಿಂದ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 9,36,26,125 ರೂ.ಗಳ ದಂಡ ವಸೂಲಿ ಮಾಡಲಾಗಿದೆ. 2024 ರ ಜನವರಿಯಿಂದ ಇಂದಿನ ವರೆಗೆ ಸಂಚಾರ ನಿಯಮ ಉಲ್ಲಂಘಿಸಿದ 54,468 ಅಪರಾಧಗಳು ದಾಖಲಾಗಿವೆ. 2,60,54,400 ರೂ.ಗಳ ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಲಾಗಿದ್ದು, 69,51,500 ರೂ.ಗಳ ದಂಡವನ್ನು ನ್ಯಾಯಾಲಯದಿಂದ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 3,30,05,900 ರೂ.ಗಳ ದಂಡ ವಸೂಲಿ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

    ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಆಯುಕ್ತರಾದ ಕುಶಲ್ ಚೌಕ್ಸೆ, ರವೀಶ ಸಿ.ಆರ್., ಸಂಚಾರ ಸಹಾಯಕ ಪೊಲೀಸ್ ಆಯುಕ್ತ ವಿನೋದ ಮುಕ್ತೆದಾರ, ಸಂಚಾರಿ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀನಿವಾಸ ಮೇಟಿ, ಪಿಎಸ್‍ ಐ ನಾರಾಯಣ ಪಟವರ್ಧನ, ಶೋಭಾ ಕಂಬಿ, ಸೇರಿದಂತೆ ಇತರ ಪೊಲೀಸ್ ಅಧಿಕಾರಿ, ಸಿಬ್ಬಂದಿ  ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ಯಮಕಿಂಕರ ರೂಪಕದ ಮೂಲಕ ಸಂಚಾರ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸರಗೂರು:  ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್‌ ಬಿಐ ಬ್ಯಾಂಕ್  ಪಕ್ಕದಲ್ಲಿರುವ ಅಂಚೆ ಕಚೇರಿ ಮುಂಭಾಗದಲ್ಲಿ ಖಾತೆದಾರರು ಹಾಗೂ ಪ್ರಗತಿಪರ…

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025

    ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ

    November 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.