nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು

    January 21, 2026

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026
    Facebook Twitter Instagram
    ಟ್ರೆಂಡಿಂಗ್
    • ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ
    • ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು
    • ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್
    • ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ
    • ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
    • ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!
    • ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್
    • ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಚಾರ ನಿಯಮ ಪಾಲನೆ ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯ: ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ
    ರಾಜ್ಯ ಸುದ್ದಿ May 30, 2024

    ಸಂಚಾರ ನಿಯಮ ಪಾಲನೆ ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯ: ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ

    By adminMay 30, 2024No Comments3 Mins Read
    dharavada

    ಧಾರವಾಡ:  ಪ್ರತಿ ವರ್ಷ ಅನೇಕ ವಾಹನ ಸವಾರರು ಹಾಗೂ ಸಂಚಾರಿಗಳು ಸಂಚಾರಿ ನಿಯಮ ಉಲ್ಲಂಘನೆಯಿಂದ ಜೀವ ಕಳೆದುಕೊಳ್ಳುತ್ತಾರೆ. ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯವಾಗಿದೆ ಎಂದು ಹುಬ್ಬಳ್ಳಿ– ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಹೇಳಿದರು.

    ಅವರು ಮೇ.29 ಸಂಜೆ ಧಾರವಾಡ ನಗರದ ಆಲೂರು ವೆಂಕಟರಾವ್ (ಜುಬ್ಲಿ ಸರ್ಕಲ್) ವೃತ್ತದಲ್ಲಿ ಸಂಚಾರ ನಿಯಮಗಳ ಸಾರ್ವಜನಿಕ ಜಾಗೃತಿ ಹಾಗೂ ದೋಷಪೂರಿತ ಸೈಲೆನ್ಸರ್‍ ಗಳ ನಾಶಪಡಿಸುವ ಕಾರ್ಯಕ್ಕೆ ಚಾಲನೆ ನೀಡಿ, ಮಾತನಾಡಿದರು.


    Provided by
    Provided by

    ಸಂಚಾರ ನಿಯಮಗಳ ಕುರಿತು ಪ್ರತಿ ವರ್ಷ ವಿವಿಧ ಕಾರ್ಯಕ್ರಮಗಳ ಮೂಲಕ ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆದರೂ ವಾಹನ ಸವಾರರು ಸರಿಯಾಗಿ ಹೆಲ್ಮೆಟ್ ಧರಿಸುವುದಿಲ್ಲ, ಸೀಟ್ ಬೆಲ್ಟ್ ಧರಿಸುವುದಿಲ್ಲ, ಸಿಗ್ನಲ್ ಜಂಪ್ ಮಾಡುವುದು, ಸಂಚಾರಿ ಸಾಮಾನ್ಯ ನಿಯಮಗಳನ್ನು ಸಹ ಪಾಲಿಸುವುದಿಲ್ಲ. ಇದರಿಂದಾಗಿ ತಮ್ಮ ಅಮೂಲ್ಯ ಜೀವವನ್ನೇ ಕಳೆದುಕೊಳ್ಳುತ್ತಾರೆ ಎಂದು ಅವರು ತಿಳಿಸಿದರು.

    ಅವಳಿ ನಗರದಲ್ಲಿ ವಾಹನ ದಟ್ಟಣೆ ಮಾರ್ಗಗಳನ್ನು ಗುರುತಿಸಲಾಗಿದೆ. ಅವುಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಪಾಲಕರು 18 ವರ್ಷ ದೊಳಗಿನ ಮಕ್ಕಳಿಗೆ ವಾಹನ ಚಾಲನೆಗೆ ನೀಡಬಾರದು. ಇದು ಅಪರಾಧವಾಗಿದ್ದು, ಅಂತ ಪಾಲಕರಿಗೆ ರೂ. 25 ಸಾವಿರ ದಂಡ ಮತ್ತು ಜೈಲುವಾಸದ ಶಿಕ್ಷೆ ಇದೆ. ಸಾರ್ವಜನಿಕರ ಸಹಕಾರದಿಂದ ಮಾತ್ರ ಸುಗಮ ಮತ್ತು ಸುಸೂತ್ರ ಸಂಚಾರ ಹೊಂದಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

    ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೋಟಾರ್ ಸೈಕಲ್ ಸವಾರರು ತಮ್ಮ ವಾಹನಗಳಿಗೆ ಅನಧಿಕೃತವಾಗಿ ದೋಷಪೂರಿತ ಕರ್ಕಶ ಶಬ್ದವನ್ನು ಉಂಟು ಮಾಡುವ ಸೈಲೆನ್ಸರ್ ಗಳನ್ನು ಹಾಕಿಕೊಂಡು, ಸಂಚರಿಸಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ ಜಾಗೃತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

    ಮಾರ್ಚ್ 1, 2024 ರಿಂದ ಮೇ 29, 2024 ರವರೆಗಿನ ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 240 ಸೈಲೆನ್ಸರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಇವುಗಳ ಮೌಲ್ಯ ಸುಮಾರು ರೂ. 12 ಲಕ್ಷಗಳಾಗಿದೆ. ದೋಷಪೂರಿತ ಕರ್ಕಶ ಸೈಲೇನ್ಸರ್ ಗಳನ್ನು ವಶಪಡಿಸಿಕೊಂಡು ವಾಹನ ಸವಾರರಿಗೆ ತಲಾ 500 ರೂ. ದಂಡ ವಿಧಿಸಿ, ವಾಹನಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

    ಮುಂದಿನ ದಿನಗಳಲ್ಲಿ ಯಾವುದಾದರೂ ದೋಷಪೂರಿತ ಸೈಲೆನ್ಸರ್ ಸೈಕಲ್ ಮೋಟಾರ ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಮೋಟಾರ್ ಸೈಕಲ್ ನಂಬರ್  ಸಮೇತ ಫೋಟೋ, ವಿಡಿಯೋ ಮೂಲಕ ಸಂಚಾರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 9480802037 ಗೆ ವಾಟ್ಸಪ್ ಮೂಲಕ ಕಳುಹಿಸಬಹುದು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಈ ಸಂದರ್ಭದಲ್ಲಿ ತಿಳಿಸಿದರು.

    3 ವರ್ಷಗಳ ರಸ್ತೆ ಅಪಘಾತದ ವಿವರ: 2022 ರ ರಸ್ತೆ ಅಪಘಾತದಲ್ಲಿ 97 ಪುರುಷರು, 14 ಮಹಿಳೆಯರು ಸೇರಿ ಒಟ್ಟು 111 ಜನ ಮರಣ ಹೊಂದಿದ್ದು, 419 ಪುರುಷರು, 87 ಮಹಿಳೆಯರು ಸೇರಿ ಒಟ್ಟು 506 ಜನ ತೀವ್ರ ಗಾಯಗೊಂಡಿದ್ದಾರೆ. 2023 ರ ರಸ್ತೆ ಅಪಘಾತದಲ್ಲಿ 100 ಪುರುಷರು, 17 ಮಹಿಳೆಯರು ಸೇರಿ ಒಟ್ಟು 117 ಜನ ಮರಣ ಹೊಂದಿದ್ದು, 454 ಪುರುಷರು, 105 ಮಹಿಳೆಯರು ಸೇರಿ ಒಟ್ಟು 559 ಜನ ತೀವ್ರ ಗಾಯಗೊಂಡಿದ್ದಾರೆ. 2024 ರ ಜನವರಿಯಿಂದ ಇಂದಿನ ವರೆಗೆ ರಸ್ತೆ ಅಪಘಾತದಲ್ಲಿ 30 ಪುರುಷರು, 4 ಮಹಿಳೆಯರು ಸೇರಿ ಒಟ್ಟು 34 ಜನ ಮರಣ ಹೊಂದಿದ್ದು, 113 ಪುರುಷರು, 15 ಮಹಿಳೆಯರು ಸೇರಿ ಒಟ್ಟು 128 ಜನ ತೀವ್ರ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದರು.

    3 ವರ್ಷದ ಎಂ.ವಿ ಆಯಾಕ್ಟ್ ಮತ್ತು ನ್ಯಾಯಾಲಯದಿಂದ ಸಂಚಾರ ನಿಯಮ ಉಲ್ಲಂಘನೆ ಅಡಿಯಲ್ಲಿ ವಸೂಲಿ ಮಾಡಲಾದ ದಂಡದ ವಿವರ: 2022 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 1,40,416 ಅಪರಾಧಗಳು ದಾಖಲಾಗಿವೆ. 66,167,100 ರೂ.ಗಳ ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಲಾಗಿದ್ದು, 1,28,64,100 ರೂ.ಗಳ ದಂಡವನ್ನು ನ್ಯಾಯಾಲಯದಿಂದ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 7,90,31,200 ರೂ.ಗಳ ದಂಡ ವಸೂಲಿ ಮಾಡಲಾಗಿದೆ. 2023 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 1,91,883 ಅಪರಾಧಗಳು ದಾಖಲಾಗಿವೆ. 7,52,65,125 ರೂ.ಗಳ ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಲಾಗಿದ್ದು, 1,83,61,000 ರೂ.ಗಳ ದಂಡವನ್ನು ನ್ಯಾಯಾಲಯದಿಂದ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 9,36,26,125 ರೂ.ಗಳ ದಂಡ ವಸೂಲಿ ಮಾಡಲಾಗಿದೆ. 2024 ರ ಜನವರಿಯಿಂದ ಇಂದಿನ ವರೆಗೆ ಸಂಚಾರ ನಿಯಮ ಉಲ್ಲಂಘಿಸಿದ 54,468 ಅಪರಾಧಗಳು ದಾಖಲಾಗಿವೆ. 2,60,54,400 ರೂ.ಗಳ ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಲಾಗಿದ್ದು, 69,51,500 ರೂ.ಗಳ ದಂಡವನ್ನು ನ್ಯಾಯಾಲಯದಿಂದ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 3,30,05,900 ರೂ.ಗಳ ದಂಡ ವಸೂಲಿ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

    ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಆಯುಕ್ತರಾದ ಕುಶಲ್ ಚೌಕ್ಸೆ, ರವೀಶ ಸಿ.ಆರ್., ಸಂಚಾರ ಸಹಾಯಕ ಪೊಲೀಸ್ ಆಯುಕ್ತ ವಿನೋದ ಮುಕ್ತೆದಾರ, ಸಂಚಾರಿ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀನಿವಾಸ ಮೇಟಿ, ಪಿಎಸ್‍ ಐ ನಾರಾಯಣ ಪಟವರ್ಧನ, ಶೋಭಾ ಕಂಬಿ, ಸೇರಿದಂತೆ ಇತರ ಪೊಲೀಸ್ ಅಧಿಕಾರಿ, ಸಿಬ್ಬಂದಿ  ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ಯಮಕಿಂಕರ ರೂಪಕದ ಮೂಲಕ ಸಂಚಾರ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026

    ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ

    January 20, 2026

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    ಸರಗೂರು:  ಹಾಲಿಗೆ ಕಲಬೆರಕೆ ಮಾಡದೆ ಗುಣಮಟ್ಟವನ್ನು ಕಾಯ್ದುಕೊಂಡು ಹಾಲಿನ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಶಾಸಕರು, ಅರಣ್ಯ ವಸತಿ…

    ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು

    January 21, 2026

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026

    ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

    January 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.