ಕೊರಟಗೆರೆ: ಹೊಳವನಹಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿಗಾಗಿ ತುಮಕೂರು ಕೃಷಿ ಉತ್ಪನ್ನ ಉಪ ಮಾರುಕಟ್ಟೆ ನಿರ್ಮಾಣ ಮಾಡಿಕೊಟ್ಟ ಅಂಗಡಿ ಮಳಿಗೆಗಳಿಗೆ ಮೂಲ ಸೌಕರ್ಯ ಇಲ್ಲದೆ ಸೊರಗುತ್ತಿದೆ.
2016 ರಲ್ಲಿ ಎಪಿಎಂಸಿ ಮಾರುಕಟ್ಟೆ ಸಮಿತಿ ವತಿಯಿಂದ 2ಕೋಟಿ 15 ಲಕ್ಷದಲ್ಲಿ 70ಕ್ಕೂ ಅಧಿಕ ಅಂಗಡಿ ಮಳಿಗೆಗಳನ್ನ ನಿರ್ಮಾಣ ಮಾಡಿಕೊಟ್ಟರೂ ಗ್ರಾ.ಪಂ.ನಿಂದ ಮೂಲ ಸೌಕರ್ಯ ನೀಡುವಲ್ಲಿ ವಿಫಲರಾಗಿದ್ದಾರೆ.
ಅಂಗಡಿ ಮಳಿಗೆಗಳನ್ನ ಮರು ಟೆಂಡರ್ ಮಾಡದ ಪರಿಣಾಮ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕೊವಿಡ್ ಸಂದರ್ಭದಲ್ಲಿ ನಿಂತ ಶುಕ್ರವಾರ ವಾರದ ಸಂತೆ ಇಲ್ಲಿಯವರೆಗೂ ಹಾರಜು ಪ್ರಕ್ರಿಯೆ ಮಾಡದೆ ಮೀನಾಮೇಷ ಎಣಿಸುತ್ತಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಪಿಎಂಸಿ ಮಾರುಕಟ್ಟೆಯಲ್ಲಿರುವ ಅಂಗಡಿ ಮಳಿಗೆಗಳು ಹಾಗೂ ವಾರದ ಸಂತೆಯನ್ನ ಪ್ರಾರಂಭಿಸುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ