nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    • ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳು ದರ್ಪ ಬಿಟ್ಟು ಜನರಿಗೆ ಸ್ಪಂದಿಸಿ: ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀನಾರಾಯಣ್
    ಮಧುಗಿರಿ March 24, 2025

    ಅಧಿಕಾರಿಗಳು ದರ್ಪ ಬಿಟ್ಟು ಜನರಿಗೆ ಸ್ಪಂದಿಸಿ: ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀನಾರಾಯಣ್

    By adminMarch 24, 2025No Comments3 Mins Read
    lokayuktha

    ಮಧುಗಿರಿ: ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ ಹಾಗೂ ಅಧಿಕಾರದ ದರ್ಪ ಎದ್ದು ಕಾಣುತ್ತಿದ್ದು, ಜನಸೇವೆಯ ಮನೋಭಾವ ಕಾಣುತ್ತಿಲ್ಲ ಹಾಗೂ ಇಂದು ಕರೆದಿರುವ ಸಭೆಗೆ ಸಾರ್ವಜನಿಕರು ಬಾರದಿರುವ ಬಗ್ಗೆ ಪ್ರಚಾರದ ಕೊರತೆಯ ಬಗ್ಗೆಗೂ ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದರು.

    ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ನಡೆದ ಲೋಕಾಯುಕ್ತ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಭೆಗೆ ಕನಿಷ್ಟ 10 ದೂರುಗಳು ಬಂದಿಲ್ಲ. ಯಾಕೆ ಸಾರ್ವ ಜನಿಕರಿಗೆ ಮಾಹಿತಿ ನೀಡಿಲ್ಲವೇ ಎಂದು ತಾ.ಪಂ.ಇಓ ರವರನ್ನು ಪ್ರಶ್ನಿಸಿದರು.


    Provided by

    ಎಲ್ಲ ಇಲಾಖೆಯ ಕಚೇರಿಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲು ಸಮಗ್ರ ಮಾಹಿತಿ ಒಳಗೊಂಡ ನಾಮಫಲಕ ಹಾಕಬೇಕಿದ್ದು, ಶೇ.90 ರಷ್ಟು ಇಲಾಖೆಗಳು ಹಾಕಿಲ್ಲ ಸಾರ್ವಜನಿಕರಿಂದ ಬಂದಂತಹ ಅರ್ಜಿಗಳನ್ನು ಅಂದೇ ವಿಲೇವಾರಿ ಮಾಡಿದರೆ ಅರ್ಧ ಕೆಲಸ ಮುಗಿಯುತ್ತದೆ. ಆದರೆ ನೀವು ಬೇಕಂತಲೇ ತಡ ಮಾಡುವುದಲ್ಲದೆ ಅರ್ಜಿಯನ್ನು ವಜಾ ಮಾಡಲು ಕಾರಣ ಹುಡುಕುತ್ತೀರಾ ಬದಲಾಗಿ ಅರ್ಜಿಗೆ ನ್ಯಾಯ ಕೊಡಲು ಮಾರ್ಗ ಹುಡುಕಲ್ಲ. ಈ ಮನೋಭಾವದಿಂದ ನಿಮಗೆ ಇರುವ ಗೌರವ ಹಾಳಾಗಲಿದ್ದು, ಕರ್ತವ್ಯಕ್ಕೆ ನಿಷ್ಠರಾಗಿರಿ, ಯಾವ ಕಚೇರಿಯಲ್ಲಿ ಲೋಕಾಯುಕ್ತದ ನಾಮಫಲಕ ಇರುವುದಿಲ್ಲವೋ ಮುಂದಿನ ದಿನಗಳಲ್ಲಿ ಅಚ್ಚರಿಯ ಭೇಟಿ ನೀಡಿ ಸ್ಥಳದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕೆ ಕರುಣೆ ತೋರುವ ಜನಸಾಮಾನ್ಯರ ಬಗ್ಗೆಯೂ ಅಧಿಕಾರಿಗಳಿಗೆ ಕೊಂಚ ಕರುಣೆಯಿರಲಿ ಎಂದ ಅವರು, ಈ ಬಾರಿ ಪ್ರಚಾರದ ಕೊರತೆಯಿಂದ ಹೆಚ್ಚು ಸಾರ್ವಜನಿಕರು ಬಂದಿಲ್ಲ. ಮಧುಗಿರಿಗೆ ಮುಂದೆ ಬೇಗ ಇನ್ನೊಂದು ಸಭೆಯ ಕುರಿತು ಮಾಹಿತನ್ನು ನೀಡಲು ತಿಳಿಸಿದರು.

    ಪುರಸಭೆ ಅಂಗಡಿ ಮಳಿಗೆಗಳ ಕೇಡು ಪುರಸಭೆಯಲ್ಲಿ ಹರಾಜಾದ ಅಂಗಡಿ ಮಳಿಗೆಯಲ್ಲಿ ಒಂದು ಮಳಿಗೆಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಹೋಗಿದ್ದು, ಅದನ್ನು ವಿಚಾರಣೆಗೆ ಪಡೆಯುವಂತೆ ಸಲಹೆ ನೀಡಿದರು. ಬೇ ಖಾಕಿ ಉಳಿಸಿಕೊಂಡ ವ್ಯಕ್ತಿಗೆ ಮತ್ತೆ ಮಳೆಗೆ ಒದಗಿಸಿಕೊಟ್ಟು ಟೆಂಡರ್ ನಲ್ಲಿ ಹೆಚ್ಚು ಬೆಲೆಗೆ ಹರಾಜು ಕೂಗಿದವರಿಗೆ ಅನ್ಯಾಯ ಮಾಡಿರುವ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ದಾಖಲೆ ಸಮೇತ ಮಾಹಿತಿ ಒದಗಿಸಲಾಗಿದೆ.

    ವಿಚಾರಣೆಯಲ್ಲಿ ಈ ಬಗ್ಗೆ ವರದಿ ನೀಡಲು ಜಿಲ್ಲಾ ಕಚೇರಿಗೆ ಬರುವಂತೆ ಸಿ.ಓ.ಸುರೇಶ್ ರವರಿಗೆ ಸೂಚಿಸಲಾಯಿತು. ಮತ್ತೊಂದು ಪ್ರಕರಣದಲ್ಲಿ ದೂರು ದಾರ ಮಹೇಶ್ ಆರೋಪಿಸುವಂತೆ ಇ–ಖಾತೆ ನೀಡಲು ಮನವಿ ಮಾಡಿದ್ದು ಚೂಡಾ ನಿಯಮದಡಿ ಸಾಧ್ಯವಿಲ್ಲ ಎಂದು ಅನಧಿಕೃತ ಎಂದು ಹೇಳಿ ವಾಪಸ್ ಮಾಡಿದ್ದಾರೆ. ಆದರೆ ಎಂಎಆರ್ ನಂತ (ಮುನ್ಸಿವಲ್ ಅಸೆಸಿಎಮೆಂಟ್ ರಿಜಿಸ್ಟರ್) ನಲ್ಲಿರುವ ಒಬ್ಬರಿಗೆ ಇ–ಖಾತೆ ನೀಡಿದ್ದಾರೆಂದು ಆರೋಪಿಸಿದ್ದರು. ಇದಕ್ಕೆ ಉತ್ತರಿಸಿದ ಜಿ. ಸುರೇಶ್ ಆಗ ಅದು ಕಾನೂನು ಪರಿಧಿಯಲ್ಲಿ ಇರಲಿಲ್ಲ ಈಗ ಅರ್ಜಿ ನೀಡಿದರೆ ಪರಿಶೀಲಿಸಿ ತಿಂಗಳಲ್ಲೇ ಖಾತೆ ನೀಡುತ್ತೇನೆಂದರು.

    ಪಿಡಿಓಗೆ ತಾಕೀತು:

    5 ಸಾವಿರಕ್ಕೂ ಹೆಚ್ಚು ಲೋಡ್ ಕೆರೆಯ ಮಣ್ಣನ್ನು ಒಳಸಲು ಎನ್ ಜಿಓ ಸಂಸ್ಥೆಯೊಂದಕ್ಕೆ ಅನಧಿಕೃತವಾಗಿ ಅನುಮತಿ ನೀಡಿ, ರಾಜಧನ ಮನ್ನಗೊಳಿಸಿದ ಆರೋಪದ ದೂರು ಕೂಡ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ಪಿಡಿಓ ಕಮಲ ಹೇಳಿಕೆಯನ್ನು ಕೇಳಿದ್ದು, ಸೂಕ್ತ ದಾಖಲಾತಿಯೊಂದಿಗೆ ಜಿಲ್ಲಾ ಕಚೇರಿಗೆ ಬರುವಂತೆ ತಾಕೀತು ಮಾಡಲಾಯಿತು. ಈ ಪ್ರಕರಣದಲ್ಲಿ 5715 ಲೋಡ್ ಕೆರೆಯ ಮಣ್ಣನ್ನು ರೈತರ ಮನವಿ ಮೇಲೆಗೆ ನೀಡಲಾಗಿದೆ ಎಂದು ಸಮಜಾಯಿಷಿ ನೀಡಿದರು. ಆದರೆ ಇದಕ್ಕೆ ತೃಪ್ತರಾಗದ ಎನ್ ಪಿ ರವರು ಈ ಬಗ್ಗೆ ಸಂಪೂರ್ಣ ದಾಖಲೆಗಳು ಸಂಬಂಧಿಸಿದ ಅಧಿಕಾರಿಗಳ ಲಿಖಿತ ದಾಖಲೆಯನ್ನು ಜಿಲ್ಲಾಕೇಂದ್ರದ ಕಚೇರಿಗೆ ತರುವಂತೆ ಸೂಚಿಸಿದರು. ತಹಶೀಲ್ದಾರ್ ಕಚೇರಿ ಆವರಣದ ಮಳಿಗೆಗಳ ಬಗ್ಗೆಯೂ ಚರ್ಚೆ ನಡೆಸಿದ್ದು, ಈ ಬಗ್ಗೆ ಕ್ರಮವಹಿಸುವಂತೆ ತಹಶೀಲ್ದಾರ್ ಗೆ ಸೂಚಿಸಿದಾಗ ಈ ಬಗ್ಗೆ ದೂರು ಬಂದಿದ್ದು, ಮೇಲಾಧಿಕಾರಿಗೆ ಮಾಹಿತಿ ನೀಡಿ ದೂರನ್ನು ವಿಲೇವಾರಿ ಮಾಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.

    ಜೇಬಲ್ಲಿದ್ದ ಹಣದ ಲೆಕ್ಕ ಬರೆದಿಡಿ: ವೆಂಕಟೇಶ್

    ನಿಯಮಾವಳಿಯಂತೆ ಪ್ರತಿ ಸರ್ಕಾರಿ ಅಧಿಕಾರಿ, ನೌಕರ, ಅರೆಕಾಲಿಕ ನೌಕರ ಕೂಡ ಕಚೇರಿಯ ಒಳಗೆ ಹೋಗುವಾಗ ನಗದು ವಹಿ ಪುಸ್ತಕವನ್ನು ಬರೆಯಬೇಕು. ಜೇಬಲ್ಲಿ ಹೋಗುವಾಗ ಹಣ ಎಷ್ಟಿತ್ತು ಎಂದು ಬರೆದಿಡಬೇಕು. ಹಾಗೂ ಒಳಗೆ ಮತ್ತು ಹೊರಗೆ ಬಂದು ಹೋಗುವಾಗ ಮೂವ್ ಮೆಂಟ್ ರಿಜಿಸ್ಟರ್ ಪಾಲಿಸಬೇಕು. ಈ ಬಗ್ಗೆ ಎಲ್ಲೂ ಸಹಿ ಹಾಕಿದ ನಿದರ್ಶನವಿಲ್ಲ. ಕಚೇರಿಗೆ ಬಂದ ಅರ್ಜಿಗಳ ಜವಾಲು ಸ್ವೀಕಾರ ಪುಸ್ತಕವನ್ನು ಸಮರ್ಥವಾಗಿ ನಿಭಾಯಿಸಿರಬೇಕು. ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಕೆಲಸ ಮಾಡುವವರು ಗುರುತಿನ ಚೀಟಿ ಹಾಕಿಕೊಂಡಿರಲ್ಲ. ನಿಮ್ಮ ಟೇಬಲ್ ಮುಂದೆ ನಿಮ್ಮ ಹೆಸರು ಹಾಗೂ ಸ್ಥಾನದ ಬಗ್ಗೆಯೂ ಮಾಹಿತಿಯಿಲ್ಲ ಎಂದು ಲೋಕಾಯುಕ್ತದ ಉಪ ಅಧೀಕ್ಷಕ ವೆಂಕಟೇಶ್ ಅಸಮಾಧಾನ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ…

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.