nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳು ದರ್ಪ ಬಿಟ್ಟು ಜನರಿಗೆ ಸ್ಪಂದಿಸಿ: ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀನಾರಾಯಣ್
    ಮಧುಗಿರಿ March 24, 2025

    ಅಧಿಕಾರಿಗಳು ದರ್ಪ ಬಿಟ್ಟು ಜನರಿಗೆ ಸ್ಪಂದಿಸಿ: ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀನಾರಾಯಣ್

    By adminMarch 24, 2025No Comments3 Mins Read
    lokayuktha

    ಮಧುಗಿರಿ: ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ ಹಾಗೂ ಅಧಿಕಾರದ ದರ್ಪ ಎದ್ದು ಕಾಣುತ್ತಿದ್ದು, ಜನಸೇವೆಯ ಮನೋಭಾವ ಕಾಣುತ್ತಿಲ್ಲ ಹಾಗೂ ಇಂದು ಕರೆದಿರುವ ಸಭೆಗೆ ಸಾರ್ವಜನಿಕರು ಬಾರದಿರುವ ಬಗ್ಗೆ ಪ್ರಚಾರದ ಕೊರತೆಯ ಬಗ್ಗೆಗೂ ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದರು.

    ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ನಡೆದ ಲೋಕಾಯುಕ್ತ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಭೆಗೆ ಕನಿಷ್ಟ 10 ದೂರುಗಳು ಬಂದಿಲ್ಲ. ಯಾಕೆ ಸಾರ್ವ ಜನಿಕರಿಗೆ ಮಾಹಿತಿ ನೀಡಿಲ್ಲವೇ ಎಂದು ತಾ.ಪಂ.ಇಓ ರವರನ್ನು ಪ್ರಶ್ನಿಸಿದರು.

    ಎಲ್ಲ ಇಲಾಖೆಯ ಕಚೇರಿಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲು ಸಮಗ್ರ ಮಾಹಿತಿ ಒಳಗೊಂಡ ನಾಮಫಲಕ ಹಾಕಬೇಕಿದ್ದು, ಶೇ.90 ರಷ್ಟು ಇಲಾಖೆಗಳು ಹಾಕಿಲ್ಲ ಸಾರ್ವಜನಿಕರಿಂದ ಬಂದಂತಹ ಅರ್ಜಿಗಳನ್ನು ಅಂದೇ ವಿಲೇವಾರಿ ಮಾಡಿದರೆ ಅರ್ಧ ಕೆಲಸ ಮುಗಿಯುತ್ತದೆ. ಆದರೆ ನೀವು ಬೇಕಂತಲೇ ತಡ ಮಾಡುವುದಲ್ಲದೆ ಅರ್ಜಿಯನ್ನು ವಜಾ ಮಾಡಲು ಕಾರಣ ಹುಡುಕುತ್ತೀರಾ ಬದಲಾಗಿ ಅರ್ಜಿಗೆ ನ್ಯಾಯ ಕೊಡಲು ಮಾರ್ಗ ಹುಡುಕಲ್ಲ. ಈ ಮನೋಭಾವದಿಂದ ನಿಮಗೆ ಇರುವ ಗೌರವ ಹಾಳಾಗಲಿದ್ದು, ಕರ್ತವ್ಯಕ್ಕೆ ನಿಷ್ಠರಾಗಿರಿ, ಯಾವ ಕಚೇರಿಯಲ್ಲಿ ಲೋಕಾಯುಕ್ತದ ನಾಮಫಲಕ ಇರುವುದಿಲ್ಲವೋ ಮುಂದಿನ ದಿನಗಳಲ್ಲಿ ಅಚ್ಚರಿಯ ಭೇಟಿ ನೀಡಿ ಸ್ಥಳದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕೆ ಕರುಣೆ ತೋರುವ ಜನಸಾಮಾನ್ಯರ ಬಗ್ಗೆಯೂ ಅಧಿಕಾರಿಗಳಿಗೆ ಕೊಂಚ ಕರುಣೆಯಿರಲಿ ಎಂದ ಅವರು, ಈ ಬಾರಿ ಪ್ರಚಾರದ ಕೊರತೆಯಿಂದ ಹೆಚ್ಚು ಸಾರ್ವಜನಿಕರು ಬಂದಿಲ್ಲ. ಮಧುಗಿರಿಗೆ ಮುಂದೆ ಬೇಗ ಇನ್ನೊಂದು ಸಭೆಯ ಕುರಿತು ಮಾಹಿತನ್ನು ನೀಡಲು ತಿಳಿಸಿದರು.

    ಪುರಸಭೆ ಅಂಗಡಿ ಮಳಿಗೆಗಳ ಕೇಡು ಪುರಸಭೆಯಲ್ಲಿ ಹರಾಜಾದ ಅಂಗಡಿ ಮಳಿಗೆಯಲ್ಲಿ ಒಂದು ಮಳಿಗೆಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಹೋಗಿದ್ದು, ಅದನ್ನು ವಿಚಾರಣೆಗೆ ಪಡೆಯುವಂತೆ ಸಲಹೆ ನೀಡಿದರು. ಬೇ ಖಾಕಿ ಉಳಿಸಿಕೊಂಡ ವ್ಯಕ್ತಿಗೆ ಮತ್ತೆ ಮಳೆಗೆ ಒದಗಿಸಿಕೊಟ್ಟು ಟೆಂಡರ್ ನಲ್ಲಿ ಹೆಚ್ಚು ಬೆಲೆಗೆ ಹರಾಜು ಕೂಗಿದವರಿಗೆ ಅನ್ಯಾಯ ಮಾಡಿರುವ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ದಾಖಲೆ ಸಮೇತ ಮಾಹಿತಿ ಒದಗಿಸಲಾಗಿದೆ.

    ವಿಚಾರಣೆಯಲ್ಲಿ ಈ ಬಗ್ಗೆ ವರದಿ ನೀಡಲು ಜಿಲ್ಲಾ ಕಚೇರಿಗೆ ಬರುವಂತೆ ಸಿ.ಓ.ಸುರೇಶ್ ರವರಿಗೆ ಸೂಚಿಸಲಾಯಿತು. ಮತ್ತೊಂದು ಪ್ರಕರಣದಲ್ಲಿ ದೂರು ದಾರ ಮಹೇಶ್ ಆರೋಪಿಸುವಂತೆ ಇ–ಖಾತೆ ನೀಡಲು ಮನವಿ ಮಾಡಿದ್ದು ಚೂಡಾ ನಿಯಮದಡಿ ಸಾಧ್ಯವಿಲ್ಲ ಎಂದು ಅನಧಿಕೃತ ಎಂದು ಹೇಳಿ ವಾಪಸ್ ಮಾಡಿದ್ದಾರೆ. ಆದರೆ ಎಂಎಆರ್ ನಂತ (ಮುನ್ಸಿವಲ್ ಅಸೆಸಿಎಮೆಂಟ್ ರಿಜಿಸ್ಟರ್) ನಲ್ಲಿರುವ ಒಬ್ಬರಿಗೆ ಇ–ಖಾತೆ ನೀಡಿದ್ದಾರೆಂದು ಆರೋಪಿಸಿದ್ದರು. ಇದಕ್ಕೆ ಉತ್ತರಿಸಿದ ಜಿ. ಸುರೇಶ್ ಆಗ ಅದು ಕಾನೂನು ಪರಿಧಿಯಲ್ಲಿ ಇರಲಿಲ್ಲ ಈಗ ಅರ್ಜಿ ನೀಡಿದರೆ ಪರಿಶೀಲಿಸಿ ತಿಂಗಳಲ್ಲೇ ಖಾತೆ ನೀಡುತ್ತೇನೆಂದರು.

    ಪಿಡಿಓಗೆ ತಾಕೀತು:

    5 ಸಾವಿರಕ್ಕೂ ಹೆಚ್ಚು ಲೋಡ್ ಕೆರೆಯ ಮಣ್ಣನ್ನು ಒಳಸಲು ಎನ್ ಜಿಓ ಸಂಸ್ಥೆಯೊಂದಕ್ಕೆ ಅನಧಿಕೃತವಾಗಿ ಅನುಮತಿ ನೀಡಿ, ರಾಜಧನ ಮನ್ನಗೊಳಿಸಿದ ಆರೋಪದ ದೂರು ಕೂಡ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ಪಿಡಿಓ ಕಮಲ ಹೇಳಿಕೆಯನ್ನು ಕೇಳಿದ್ದು, ಸೂಕ್ತ ದಾಖಲಾತಿಯೊಂದಿಗೆ ಜಿಲ್ಲಾ ಕಚೇರಿಗೆ ಬರುವಂತೆ ತಾಕೀತು ಮಾಡಲಾಯಿತು. ಈ ಪ್ರಕರಣದಲ್ಲಿ 5715 ಲೋಡ್ ಕೆರೆಯ ಮಣ್ಣನ್ನು ರೈತರ ಮನವಿ ಮೇಲೆಗೆ ನೀಡಲಾಗಿದೆ ಎಂದು ಸಮಜಾಯಿಷಿ ನೀಡಿದರು. ಆದರೆ ಇದಕ್ಕೆ ತೃಪ್ತರಾಗದ ಎನ್ ಪಿ ರವರು ಈ ಬಗ್ಗೆ ಸಂಪೂರ್ಣ ದಾಖಲೆಗಳು ಸಂಬಂಧಿಸಿದ ಅಧಿಕಾರಿಗಳ ಲಿಖಿತ ದಾಖಲೆಯನ್ನು ಜಿಲ್ಲಾಕೇಂದ್ರದ ಕಚೇರಿಗೆ ತರುವಂತೆ ಸೂಚಿಸಿದರು. ತಹಶೀಲ್ದಾರ್ ಕಚೇರಿ ಆವರಣದ ಮಳಿಗೆಗಳ ಬಗ್ಗೆಯೂ ಚರ್ಚೆ ನಡೆಸಿದ್ದು, ಈ ಬಗ್ಗೆ ಕ್ರಮವಹಿಸುವಂತೆ ತಹಶೀಲ್ದಾರ್ ಗೆ ಸೂಚಿಸಿದಾಗ ಈ ಬಗ್ಗೆ ದೂರು ಬಂದಿದ್ದು, ಮೇಲಾಧಿಕಾರಿಗೆ ಮಾಹಿತಿ ನೀಡಿ ದೂರನ್ನು ವಿಲೇವಾರಿ ಮಾಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.

    ಜೇಬಲ್ಲಿದ್ದ ಹಣದ ಲೆಕ್ಕ ಬರೆದಿಡಿ: ವೆಂಕಟೇಶ್

    ನಿಯಮಾವಳಿಯಂತೆ ಪ್ರತಿ ಸರ್ಕಾರಿ ಅಧಿಕಾರಿ, ನೌಕರ, ಅರೆಕಾಲಿಕ ನೌಕರ ಕೂಡ ಕಚೇರಿಯ ಒಳಗೆ ಹೋಗುವಾಗ ನಗದು ವಹಿ ಪುಸ್ತಕವನ್ನು ಬರೆಯಬೇಕು. ಜೇಬಲ್ಲಿ ಹೋಗುವಾಗ ಹಣ ಎಷ್ಟಿತ್ತು ಎಂದು ಬರೆದಿಡಬೇಕು. ಹಾಗೂ ಒಳಗೆ ಮತ್ತು ಹೊರಗೆ ಬಂದು ಹೋಗುವಾಗ ಮೂವ್ ಮೆಂಟ್ ರಿಜಿಸ್ಟರ್ ಪಾಲಿಸಬೇಕು. ಈ ಬಗ್ಗೆ ಎಲ್ಲೂ ಸಹಿ ಹಾಕಿದ ನಿದರ್ಶನವಿಲ್ಲ. ಕಚೇರಿಗೆ ಬಂದ ಅರ್ಜಿಗಳ ಜವಾಲು ಸ್ವೀಕಾರ ಪುಸ್ತಕವನ್ನು ಸಮರ್ಥವಾಗಿ ನಿಭಾಯಿಸಿರಬೇಕು. ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಕೆಲಸ ಮಾಡುವವರು ಗುರುತಿನ ಚೀಟಿ ಹಾಕಿಕೊಂಡಿರಲ್ಲ. ನಿಮ್ಮ ಟೇಬಲ್ ಮುಂದೆ ನಿಮ್ಮ ಹೆಸರು ಹಾಗೂ ಸ್ಥಾನದ ಬಗ್ಗೆಯೂ ಮಾಹಿತಿಯಿಲ್ಲ ಎಂದು ಲೋಕಾಯುಕ್ತದ ಉಪ ಅಧೀಕ್ಷಕ ವೆಂಕಟೇಶ್ ಅಸಮಾಧಾನ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.