nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಅಯ್ಯೋ ನನ್ನ ಅಪಾರ್ಥ ಮಾಡ್ಕೊಂಡ್ಬಿಟ್ರಲ್ಲ” | ಎಂದೆಂದಿಗೂ ಎಂ.ಎಸ್.ಉಮೇಶ್ ಜೀವಂತ!

    December 1, 2025

    ಡಿ.3: ಶ್ರೀ ಕ್ಷೇತ್ರ ಮಿಂಚುಕಲ್ಲು ಬೆಟ್ಟ: ಮಹಾಕುಂಭಾಭೀಷೇಕ ಮಹೋತ್ಸವ

    November 30, 2025

    ತುಮಕೂರು | ಡಿ.2ರಂದು ಹನುಮ ಜಯಂತಿ

    November 30, 2025
    Facebook Twitter Instagram
    ಟ್ರೆಂಡಿಂಗ್
    • “ಅಯ್ಯೋ ನನ್ನ ಅಪಾರ್ಥ ಮಾಡ್ಕೊಂಡ್ಬಿಟ್ರಲ್ಲ” | ಎಂದೆಂದಿಗೂ ಎಂ.ಎಸ್.ಉಮೇಶ್ ಜೀವಂತ!
    • ಡಿ.3: ಶ್ರೀ ಕ್ಷೇತ್ರ ಮಿಂಚುಕಲ್ಲು ಬೆಟ್ಟ: ಮಹಾಕುಂಭಾಭೀಷೇಕ ಮಹೋತ್ಸವ
    • ತುಮಕೂರು | ಡಿ.2ರಂದು ಹನುಮ ಜಯಂತಿ
    • ಕುಣಿಗಲ್ | 15 ಜಾನುವಾರುಗಳ ರಕ್ಷಣೆ: ಆರೋಪಿ ಬಂಧನ
    • ತಿಪಟೂರು | ಹಿಂದೂ ಸಮಾಜೋತ್ಸವ ಸಮಿತಿಯಿಂದ ಮನೆ ಮನೆ ಸಂಪರ್ಕ ಅಭಿಯಾನ
    • ತುಮಕೂರು | ಡಿಸೆಂಬರ್ 25ರಿಂದ  ‘ಪುನೀತ್ ರಾಜ್ ಕಪ್‌’: ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್‌ ಪಂದ್ಯಾವಳಿ
    • ಡಿ.29—30 ರಂದು ತುಮಕೂರು ಜಿಲ್ಲಾ ಸಾಹಿತ್ಯ ಸಮ್ಮೇಳನ: ಲೇಖಕ ಕರೀಗೌಡ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ
    • ಮಗುವಿಗೆ ಜನ್ಮ ನೀಡಿದ ಬಾಲಕಿ: ಪೋಕ್ಸೋ ಕಾಯ್ದೆಯಡಿ ಆರೋಪಿ ಅರೆಸ್ಟ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಅಯ್ಯೋ ನನ್ನ ಅಪಾರ್ಥ ಮಾಡ್ಕೊಂಡ್ಬಿಟ್ರಲ್ಲ” | ಎಂದೆಂದಿಗೂ ಎಂ.ಎಸ್.ಉಮೇಶ್ ಜೀವಂತ!
    ಲೇಖನ December 1, 2025

    “ಅಯ್ಯೋ ನನ್ನ ಅಪಾರ್ಥ ಮಾಡ್ಕೊಂಡ್ಬಿಟ್ರಲ್ಲ” | ಎಂದೆಂದಿಗೂ ಎಂ.ಎಸ್.ಉಮೇಶ್ ಜೀವಂತ!

    By adminDecember 1, 2025No Comments2 Mins Read
    m s umesh

    ಬೆಂಗಳೂರು: ಕನ್ನಡದ ಹಿರಿಯ ನಟ ಎಂ.ಎಸ್.ಉಮೇಶ್ ತಮ್ಮ 80ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದಲೂ ಅವರು ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಬೆಳಿಗ್ಗೆ 8:30ರ ಸುಮಾರಿಗೆ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಏಪ್ರಿಲ್ 22, 1945ರಲ್ಲಿ ಮೈಸೂರಿನಲ್ಲಿ ಜನಿಸಿದ್ದ ಉಮೇಶ್ ಅವರು ರಂಗಭೂಮಿ ಮತ್ತು ಚಲನಚಿತ್ರ ಕಲಾವಿದರಾಗಿ 1948ರಿಂದಲೂ ಸಕ್ರಿಯರಾಗಿದ್ದರು. 1960ರಲ್ಲಿ ಬಿ.ಆರ್‌ ಪಂಥುಲು ನಿರ್ದೇಶನದ ಮಕ್ಕಳ ರಾಜ್ಯ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು ಭಾಗ್ಯವಂತರು, ಕಿಲಾಡಿ ಜೋಡಿ, ಕಾಮನಬಿಲ್ಲು, ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಹಾಲು ಜೇನು, ಶೃತಿ ಸೇರಿದಾಗ, ನನ್ನಾಸೆಯ ಹೂವೆ, ಜಾಕಿ, ಮುಸ್ಸಂಜೆ ಮಾತು, ಡೇರ್ ಡೆವಿಲ್ ಮುಸ್ತಫಾ, ಹಗಲುವೇಷ ಸೇರಿದಂತೆ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.


    Provided by
    Provided by

    ಇನ್ನೂ, ಗೋಲ್ಮಾಲ್ ರಾಧಾಕೃಷ್ಣ ಚಿತ್ರದಲ್ಲಿ ಉಮೇಶ್ ಅವರು ಮಾಡಿರುವ ಪಾತ್ರ ದೊಡ್ಡ ಹಿಟ್ ಆಗಿತ್ತು. ಆ ಚಿತ್ರದಲ್ಲಿ “ಅಯ್ಯೋ ನನ್ನ ಅಪಾರ್ಥ ಮಾಡ್ಕೊಂಡ್ಬಿಟ್ರಲ್ಲ” ಎನ್ನುವ ಡೈಲಾಗ್ ಇಂದಿಗೂ ಸಿನಿಮಾ ಪ್ರಿಯರು ಮರೆತಿಲ್ಲ.

    ರಂಗಭೂಮಿ ಮತ್ತು ಚಿತ್ರರಂಗಗಳೆರಡರಲ್ಲೂ ತಮ್ಮದೇ ಛಾಪು ಮೂಡಿಸಿರುವ ಪ್ರತಿಭಾವಂತ ಎಂ. ಎಸ್. ಉಮೇಶ್,  ಬಾಲ ಕಲಾವಿದ ಹಾಗೂ ಹಾರೋನಿಯಂ ವಾದಕವಾಗಿ ರಂಗ ಪ್ರವೇಶ ಮಾಡಿದ್ದರು. ಉಮೇಶ್ ಅವರು ಮಾಸ್ಟರ್​ ಹಿರಣ್ಣಯ್ಯ ನಾಟಕ ಮಂಡಳಿ, ಗುಬ್ಬಿ ಕಂಪನಿ, ಕನ್ನಡ ಥಿಯೇಟರ್ ನಾಟಕ ಸಂಸ್ಥೆಗಳಲ್ಲಿ ಪಾತ್ರ ನಿರ್ವಹಿಸಿದರು.

    1960ರಲ್ಲಿ ‘ಮಕ್ಕಳ ರಾಜ್ಯ’ ಚಿತ್ರದ ಪ್ರಮುಖ ಪಾತ್ರ ನಿರ್ವಹಿಸುವ ಮೂಲಕ ಬೆಳ್ಳಿ ತೆರೆಗೆ ಬಂದರು. ಮತ್ತೆ ರಂಗಭೂಮಿಗೆ ಹಿಂತಿರುಗಿದ ಅವರಿಗೆ ಬೆಳ್ಳಿತೆರೆ ಅವಕಾಶ ಸಿಕ್ಕಿದ್ದು ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಕಥಾಸಂಗಮ’ ಚಿತ್ರದ ‘ಮುನಿ ತಾಯಿ’ ಭಾಗದ ತಿಮ್ಮರಾಯಿ ಪಾತ್ರದ ಮೂಲಕ. ಆ ಚಿತ್ರ ಅವರಿಗೆ ರಾಜ್ಯ ಪ್ರಶಸ್ತಿಯನ್ನು ತಂದು ಕೊಟ್ಟಿತು. ಅಲ್ಲಿಂದ ಇಲ್ಲಿವರೆಗೆ 350 ಚಿತ್ರಗಳಲ್ಲಿ ಅಭಿನಯಿಸಿರುವ ಉಮೇಶ್ ಹಾಸ್ಯ ಪಾತ್ರಕ್ಕೆ ಹೊಸ ಸಂಚಲನ ತಂದರು. ‘ಬೆಂಕಿ’ ಚಿತ್ರದಲ್ಲಿ ನಾಯಕರಾಗಿದ್ದ ಅವರು ‘ವೆಂಕಟ್ ಇನ್ ಸಂಕಟ’ದಲ್ಲಿ ಅಡುಗೂಲಜ್ಜಿಯಾಗಿ ರೂಪಾಂತರಗೊಂಡಿದ್ದರು. ಇದಲ್ಲದೇ  ಚಿತ್ರಕತೆ–ಸಂಭಾಷಣೆ ಗೀತ ರಚನೆ ಕೂಡ ಮಾಡಿರುವ ಉಮೇಶ್ ಪ್ರತಿಷ್ಠಿತ ಪತ್ರಿಕೆಗಳಿಗೆ ಅಂಕಣಗಳನ್ನು ಬರೆದಿದ್ದಾರೆ. ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿರುವ ಉಮೇಶ್, ಗಟ್ಟಿ ಕೃತಿಗಳನ್ನು ರಚಿಸಿರುವ ಬರಹಗಾರರೂ ಕೂಡ ಹೌದು.

    ಕನ್ನಡದ ದಿಗ್ಗಜ ನಟರಾದ ಡಾ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಪುನೀತ್ ರಾಜ್‍ಕುಮಾರ್, ಶಿವರಾಜ್​ಕುಮಾರ್ ಹೀಗೆ ಸಾಕಷ್ಟು ನಟರ ಸಿನಿಮಾಗಳಲ್ಲಿ ಉಮೇಶ್ ಅಭಿನಯಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025

    ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !

    November 2, 2025

    ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ

    November 1, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    “ಅಯ್ಯೋ ನನ್ನ ಅಪಾರ್ಥ ಮಾಡ್ಕೊಂಡ್ಬಿಟ್ರಲ್ಲ” | ಎಂದೆಂದಿಗೂ ಎಂ.ಎಸ್.ಉಮೇಶ್ ಜೀವಂತ!

    December 1, 2025

    ಬೆಂಗಳೂರು: ಕನ್ನಡದ ಹಿರಿಯ ನಟ ಎಂ.ಎಸ್.ಉಮೇಶ್ ತಮ್ಮ 80ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದಲೂ ಅವರು ಚಿಕಿತ್ಸೆ…

    ಡಿ.3: ಶ್ರೀ ಕ್ಷೇತ್ರ ಮಿಂಚುಕಲ್ಲು ಬೆಟ್ಟ: ಮಹಾಕುಂಭಾಭೀಷೇಕ ಮಹೋತ್ಸವ

    November 30, 2025

    ತುಮಕೂರು | ಡಿ.2ರಂದು ಹನುಮ ಜಯಂತಿ

    November 30, 2025

    ಕುಣಿಗಲ್ | 15 ಜಾನುವಾರುಗಳ ರಕ್ಷಣೆ: ಆರೋಪಿ ಬಂಧನ

    November 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.