nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026
    Facebook Twitter Instagram
    ಟ್ರೆಂಡಿಂಗ್
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    • ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ
    • ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು
    • ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ
    • ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ
    • ಗುಬ್ಬಿ: ಬೋನಿಗೆ ಬಿದ್ದ ಚಿರತೆ, ಅಧಿಕಾರಿಗಳು ನಾಪತ್ತೆ! ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    • EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳ ಮಿಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ
    ಜಿಲ್ಲಾ ಸುದ್ದಿ December 14, 2022

    ಒಳ ಮಿಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

    By adminDecember 14, 2022No Comments2 Mins Read
    saraguru protest

    ಸರಗೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಒಳ ಮಿಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಬಾಬು ಜಗಜೀವನ್‌ ರಾಮ್ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಕೆ.ಎನ್.ನಾಗಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

    ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು “ಮಾದಿಗ ಜನಾಂಗವೂ ಸುಮಾರು 30 ವರ್ಷಗಳಿಂದ ನ್ಯಾ.ಸದಾಶಿವ ಆಯೋಗ ಜಾರಿಗೊಳಿಸುವಂತೆ ನಿರಂತರವಾಗಿ ಹೋರಾಟ ಮಾಡುತ್ತಿದೆ. ಆದರೆ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷವಾಗಲೀ ಒಳಮೀಸಲಾತಿ ಜಾರಿಗೊಳಿಸಲು ಮುಂದಾಗದೇ ಮೀನಾಮೇಷ ಎಣಿಸುತ್ತಿವೆ” ಎಂದು ಆರೋಪಿಸಿ ಸರಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿದ ರಾಜಕೀಯ ಪಕ್ಷಗಳು ಒಳಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿ ಮತ ಪಡೆದು ನಂತರ ಅಧಿಕಾರ ಏರಿದ ಮೇಲೆ ಜನಾಂಗವನ್ನು ಸಂಪೂರ್ಣವಾಗಿ ಮರೆತು ಮೋಸ ಮಾಡುತ್ತಿವೆ. ಅಲ್ಲದೆ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಒಳಮೀಸಲಾತಿಗಾಗಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಬಂಧಿಸಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

    ವೇದಿಕೆಯ ತಾಲೂಕು ಅಧ್ಯಕ್ಷ ಕಲ್ಲಂಬಾಳು ನಾಗಣ್ಣ ಮಾತನಾಡಿ, ಮಾದಿಗ ಜನಾಂಗವೂ ಒಳ ಮೀಸಲಾತಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ರಾಜಕೀಯ ಪಕ್ಷಗಳು ಮಾದಿಗ ಜನಾಂಗದ ಮತ ಪಡೆದು ಅಧಿಕಾರಕ್ಕೆ ಬಂದು ಅನ್ಯಾಯ ಮಾಡಿದ್ದಾರೆ. ಕೇವಲ ಆಶ್ವಾಸನೆ ನೀಡಿ ಸಮುದಾಯಕ್ಕೆ ಮೋಸ ಮಾಡಿದ್ದು, ಮುಂಬರುವ ದಿನಗಳಲ್ಲಿ ಇಂಥ ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಚ್ಚರಿಸಿದರು.

    ವೇದಿಕೆಯ ತಾಲೂಕು ಉಪಾಧ್ಯಕ್ಷ ಕುರ್ಣೇಗಾಲ ಬೆಟ್ಟಸ್ವಾಮಿ ಮಾತನಾಡಿ, “ಪರಿಶಿಷ್ಟಜಾತಿಗೆ ಸರಕಾರ ಸಾಮಾಜಿಕ ನ್ಯಾಯದಡಿ ಒಳ ಮೀಸಲಾತಿ ನೀಡಬೇಕು. ಆ ಮೂಲಕ ಜನಾಂಗಕ್ಕೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಮುಂದುವರಿಯಲು ಅನುಕೂಲ ಮಾಡಿಕೊಡಬೇಕು. ಶೀಘ್ರದಲ್ಲೇ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

    ಇದೇ ಸಂದರ್ಭದಲ್ಲಿ ಗ್ರೇಟ್-2 ತಹಶೀಲ್ದಾರ್ ಪರಶಿವಮೂರ್ತಿ ಮಾತನಾಡಿ, ಮೇಲಿನ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಗುವುದು ಎಂದರು. ಅವರ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

    ಬಾಬು ಜಗಜೀವನ್‌ರಾಮ್ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಕಲ್ಲಂಬಾಳು ನಾಗಣ್ಣ, ಉಪಾಧ್ಯಕ್ಷ ಕುರ್ಣೇಗಾಲ ಬೆಟ್ಟಸ್ವಾಮಿ, ಗೌರವಾಧ್ಯಕ್ಷ ವೈ.ಕುಂಠಯ್ಯ, ಗಡಿ ಯಜಮಾನರಾದ ವೆಂಕಟೇಶ್, ಸ್ವಾಮಿ, ಹನು, ಕಾಳಪ್ಪಾಜಿ, ಕುಮಾರ್, ಪ್ರಕಾಶ್ ಕೋಟೆ, ಸುರೇಶ್, ಪಾಟೀಲ್.ಚಿನ್ನಸ್ವಾಮಿ, ಸರಗೂರು ಕೃಷ್ಣ, ಗ್ರಾಮೀಣ ಮಹೇಶ್ ಹಂಚೀಪುರ, ಚಾಮರಾಜು, ವೆಂಕಟಶ್, ಪಾಟೀಲ್, ಮಲ್ಲೇಶ್, ಜವರಪ್ಪ, ಮಧು, ಮಹೇಶ್, ಮಹದೇವಸ್ವಾಮಿ, ಸಣ್ಣಪ್ಪ, ಹೇಜೂರಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ

    January 17, 2026

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026

    ಪಾವಗಡ: ಪಾವಗಡದಿಂದ ಮಧುಗಿರಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವ ವೇಳೆ ಎದುರಿಗೆ ಬಂದ ಟಿಪ್ಪರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ…

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.