ತುರುವೇಕೆರೆ : ಎಂ.ಗುರುಮೂರ್ತಿ ಸಾರಥ್ಯದ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪ್ರೊಫೆಸರ್ ಬಿ.ಕೃಷ್ಣಪ್ಪನವರಿಂದ ಸ್ಥಾಪನೆಯಾಗಿ ದಲಿತ ಚಳುವಳಿಗಳನ್ನ ಮಾಡಿ 50 ವಸಂತಗಳನ್ನು ತುಂಬಿದ ನೆನಪಿಗಾಗಿ ಸಂಭ್ರಮಾಚರಣೆಯನ್ನು ಆಚರಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತುರುವೇಕೆರೆ ತಾಲೂಕು ಸಂಚಾಲಕ ದಂಡಿನಶಿವರ ಕುಮಾರ್ ರವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ಜುಲೈ 10 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ವಸಂತ ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಐವತ್ತು ವರ್ಷಗಳ ಸಂಭ್ರಮೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಂಪುಟ ದರ್ಜೆಯ ಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯ ಸಂಚಾಲಕರು 10 ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗಳ ಹಾಗೂ ಸಂಪುಟ ದರ್ಜೆಯ ಸಚಿವರಗಳ ಬಳಿ ಮಂಡಿಸಲಿದ್ದಾರೆ. ಕಾರ್ಯಕ್ರಮಕ್ಕೆ ತುರುವೇಕೆರೆ ತಾಲೂಕಿನಿಂದ ಸುಮಾರು ನೂರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘಟನಾ ಸಂಚಾಲಕ ಮಲ್ಲೂರು ತಿಮ್ಮೇಶ್, ಖಜಾಂಚಿ ಆನೆಕೆರೆ ಶಿವನಂಜಪ್ಪ, ಸಂಘಟನಾ ಸಂಚಾಲಕ ರಾಮಚಂದ್ರ, ಲಕ್ಷ್ಮೀಶ್ ಡಿ.ಆರ್., ಮಧು ಸಿದ್ದಾಪುರ, ತಾಲೂಕು ಮಹಿಳಾ ಘಟಕದ ಸಂಘಟನಾ ಸಂಚಾಲಕಿ ಹೇಮಾವತಿ, ಸೈಯದ್ ನೂರುಲ್ಲಾ, ಅಬ್ಜಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA