ಔರಾದ್: ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಔರಾದ್ ಪಟ್ಟಣದ ಈದ್ಗಾ ಮೈದಾನಕ್ಕೆ ಭೇಟಿ ನೀಡಿ, ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮುಖಂಡ ಡಾ. ಭೀಮಸೇನರಾವ ಶಿಂಧೆ, ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು.
ರಂಜಾನ್ ಮಾಸ ಹಾಗೂ ಅದೇ ಅವಧಿಯಲ್ಲಿ ಬರುವ ರಂಜಾನ್ ಹಬ್ಬ ಮುಸಲ್ಮಾನ ಸಮುದಾಯದ ಸಹೋದರರ ಅತ್ಯಂತ ಪವಿತ್ರ ಹಬ್ಬ, ಈ ಹಬ್ಬ ಶಾಂತಿ, ಸಾಮರಸ್ಯದ ಸಂದೇಶಗಳನ್ನು ವಿಶ್ವದಲ್ಲಿ ಸಾರಿದೆ. ಈ ಹಬ್ಬದ ಸಂದೇಶ ನಾವೆಲ್ಲರೂ ಪಾಲಿಸುವುದು ಇಂದಿನ ದಿನದಲ್ಲಿ ಅಗತ್ಯವಾಗಿದೆ. ನಾವು ಎಲ್ಲರು ಸಹೋದರತೆ, ಶಾಂತಿಯೊಂದಿಗೆ ಸಹಬಾಳ್ವೆ ನಡೆಸಬೇಕಿದೆ ಎಂದರು.
ರಂಜಾನ್ ಅಂಗವಾಗಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಡಾ. ಭೀಮಸೇನರಾವ ಶಿಂಧೆ ಅವರು ಎಲ್ಲ ಮುಸ್ಲಿಂ ಬಾಂಧವರೊಂದಿಗೆ ಭಾಗವಹಿಸಿ ಸಾಮರಸ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಯೂಬ್ ಮಾನುರಕರ್, ಡಾ ಫಯಾಜ್ ಅಲೀ, ಅಬ್ದುಲ್ ರಹೀಮ್, ಶೇಖ್ ಫರೀದ್, ಘುಡುಸಾಬ, ಅಮಿರೋದ್ದಿನ್, ಗಂಗಾಧರ ಮಜಿಗೆ, ಮಲ್ಲಿಕಾರ್ಜುನ ಪಾಟೀಲ್, ಚನ್ನಪ್ಪ ಉಪ್ಪೆ, ರಾಮಣ್ಣ ವಡಿಯಾರ,ಶಿವರಾಜ ದೇಶಮುಖ, ಸುಧಾಕರ ಕೊಳ್ಳುರ್, ಅಂಜಾರೆಡ್ಡಿ, ಅನಿಲ್ ವಡಿಯಾರ ಸೇರಿದಂತೆ ಮುಸ್ಲಿಂ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296