ತುಮಕೂರು: ಜಿಲ್ಲೆಯ, ತುರುವೇಕೆರೆ ಪಟ್ಟಣದಲ್ಲಿ,ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ , ಆಟೋ ನಿಲ್ದಾಣದಲ್ಲಿ, ವೀರವನಿತೆ ಒನಕೆ ಓಬವ್ವ, ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮವನ್ನುದ್ದೇಶಿಸಿ ತುರುವೇಕೆರೆ ತಾಲ್ಲೂಕು ಕಾರ್ಮಿಕ ಸಂಘಟನೆಯ ಕಾರ್ಯದರ್ಶಿ, ಓಬವ್ವ ದಲಿತ ಕುಟುಂಬದಲ್ಲಿ ಹುಟ್ಟಿದರು. ರಾಜ ಪರಂಪರೆ , ವೀರತ್ವ ಹೊಂದಿದ್ದ ಮಹಿಳೆ ದಿಟ್ಟ ತನದಿಂದ ಹೋರಾಡಿ, ತನ್ನ ಪ್ರಾಣವನ್ನು ಅರ್ಪಿಸಿದ ಮಹಿಳೆ. ಇವರ ಜಯಂತಿಯನ್ನು ರಾಜಕಾರಣಿಗಳು ಆಚರಣೆಗೆ ತರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಒಬ್ಬ ದಲಿತ ಮಹಿಳೆ ಎಂಬ ಮನೋಭಾವದಿಂದ ಓಬವ್ವ ಅವರು ಜಯಂತಿ ಆಚರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕೇವಲ ದಲಿತರು ಮಾತ್ರವೇ ಓಬವ್ವಳ ಜನ್ಮ ದಿನಾಚರಣೆ ಆಚರಿಸುವಂತಾಗಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ಈ ಸಮಾರಂಭದಲ್ಲಿ ಅಟೋ ಚಾಲಕರ ಸಂಘದ ಅಧ್ಯಕ್ಷ,ಗಂಗಾಧರಗೌಡ, ಜಯ ಕರ್ನಾಟಕ ಜನಪರ ವೇದಿಕೆಯ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಮಾರುತಿ, ತಾಲ್ಲೂಕು ಸವಿತಾ ಸಮಾಜದ ಸದಸ್ಯರುಗಳು ಮತ್ತಿತರರು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ.ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB