nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಸವಿ ಕಾಲೇಜಿನಲ್ಲಿ ಜೀವಶಾಸ್ತ್ರ ವಿಷಯದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ
    ತುಮಕೂರು December 4, 2024

    ವಾಸವಿ ಕಾಲೇಜಿನಲ್ಲಿ ಜೀವಶಾಸ್ತ್ರ ವಿಷಯದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

    By adminDecember 4, 2024No Comments2 Mins Read
    vasavi

    ತುಮಕೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಜೀವಶಾಸ್ತ್ರ ಉಪನ್ಯಾಸಕರ ವೇದಿಕೆ ಮತ್ತು ವಾಸವಿ ಪದವಿಪೂರ್ವ ಕಾಲೇಜು ತುಮಕೂರು ವತಿಯಿಂದ  ಜೀವಶಾಸ್ತ್ರ ವಿಷಯದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ  ತುಮಕೂರು ನಗರದ ವಾಸವಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು.

    ಕಾರ್ಯಾಗಾರ ಉದ್ಘಾಟಿಸಿ ಜೀವಶಾಸ್ತ್ರ ವಿಷಯದ ವೇದಿಕೆ ಮೂಲಕ ಸಿದ್ಧಪಡಿಸಿರುವ 2024–25 ನೇ ಸಾಲಿನ ದ್ವಿತೀಯ ಪಿಯುಸಿ ಜೀವಶಾಸ್ತ್ರ ವಿಷಯದ ಪ್ರಾಯೋಗಿಕ ಯೋಜಿತ ಕಾರ್ಯಗಳ  ಕೈಪಿಡಿ ಬಿಡುಗಡೆ ಮಾಡಿದ ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ಮಾತನಾಡಿ, ಜಿಲ್ಲೆಯ ಫಲಿತಾಂಶ ಹೆಚ್ಚಿಸಲೂ ನಿಮ್ಮ ಸಹಕಾರ ಅಗತ್ಯ. ಇಲಾಖೆಯ ನಿಯಮದಂತೆ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ. ಎಲ್ಲಾ  ಕಾಲೇಜಿನ ವಿದ್ಯಾರ್ಥಿಗಳು ನೀವು ಸಿದ್ಧಪಡಿಸಿದ ಮಾದರಿಯ ಪ್ರಶ್ನೆಪತ್ರಿಕೆ ನೋಡಿ ವಾರ್ಷಿಕ ಪರೀಕ್ಷೆಯನ್ನೂ ಯಾವುದೇ ಆತಂಕ ಪಡದೆ ಪರೀಕ್ಷೆಯನ್ನೂ ಬರೆಯಬೇಕು ಎಂದರು.

    ಈ ವರ್ಷ ಪ್ರಾಯೋಗಿಕ ಪರಿಕ್ಷೆಯಲ್ಲಿ ವೆಬ್ ಕ್ಯಾಮರಾ ಎಲ್ಲಾ ಪರೀಕ್ಷಾ ಕೇಂದ್ರಗಳು ಕಡ್ಡಾಯವಾಗಿ ಅಳವಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

    ಎಲ್ಲಾ ಕಾಲೇಜಿನ ಮಕ್ಕಳು ನಮ್ಮ ಮಕ್ಕಳೇ ಎಂದು  ತಿಳಿದು ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕು. ತುಮಕೂರು ಜಿಲ್ಲೆ ಕಳೆದ ವರ್ಷ ದ್ವಿತೀಯ ಪಿಯುಸಿ ಪಲಿತಾಂಶದಲ್ಲಿ 24ನೇ  ಸ್ಥಾನದಲ್ಲಿದ್ದು, ಈ ಶೈಕ್ಷಣಿಕ ಸಾಲಿನಲ್ಲಿ ಅತ್ಯುನ್ನತ ಸ್ಥಾನ ಪಡೆಯಲು ನಾವು ನೀವು ಒಟ್ಟಾಗಿ ಶ್ರಮಿಸೋಣ ಎಂದು ಹೇಳಿ, ಜೀವಶಾಸ್ತ್ರ ವಿಷಯದ ವಿಷಯ ಸಂಪನ್ಮೂಲ ವ್ಯಕಿಗಳಾದ ವೆಂಕಟೇಶ್, ನಾಗವೇಣಿ,  ಡಾ.ದಿವಾಕರ ಹಾಗೂ ದಿನೇಶ್ ಎಂ.ವಿ. ರವರನ್ನು ಅಭಿನಂದಿಸಿದರು.

    ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾದ ಕೃಷ್ಣಮೂರ್ತಿ ಕೆ.ಎಂ. ಮಾತನಾಡಿ, ಉಪನಿರ್ದೇಶಕರ ಸಲಹೆಯ ಮೇರೆಗೆ ನಮ್ಮ ವೇದಿಕೆ ವತಿಯಿಂದ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಎಲ್ಲಾ ಜೀವಶಾಸ್ತ್ರ ವಿಷಯದ ಪ್ರಾಚಾರ್ಯರ ಹಾಗೂ ಉನ್ಯಾಸಕರ ಸಹಕಾರದಿಂದ ವಾಸವಿ ಕಾಲೇಜಿನ ಉಪನ್ಯಾಸಕರು ಸಂಸ್ಥೆಯ ಮುಖ್ಯಸ್ಥರುಗಳಿಂದ ಈ ರೀತಿಯ ಉತ್ತಮ ಕಾರ್ಯಗಾರ ಮಾಡಲು ಸಾಧ್ಯವಾಗಿದೆ ಎಂದು ಹೇಳಿದರು.

    ಪ್ರಾಚಾರ್ಯರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಕಾಲೇಜಿನ ಪ್ರಾಚಾರ್ಯರು ಚಂದ್ರಶೇಖರ ಆರಾಧ್ಯ ಎಚ್.ವಿ. ಮಾತನಾಡಿ, ನಮ್ಮ ಜಿಲ್ಲೆಯ ಉಪನಿರ್ದೇಶಕರಾದ ಡಾ. ಬಾಲಗುರುಮೂರ್ತಿ ರವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ರೀತಿಯ ಶೈಕ್ಷಣಿಕ ಕಾರ್ಯಾಗಾರಗಳು ಉಪನ್ಯಾಸಕರಲ್ಲಿ ಪರಿಣಿತಿಯನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ತುಂಬುಲು ಪ್ರೇರಣೆ ಎಂದರು.

    ನಿರಂತರ ಹೊಸ ವಿಚಾರಗಳಲ್ಲಿ ಉನ್ಯಾಸಕರು ತೊಡಗಿಸಿಕೊಳ್ಳಬೇಕು. ಅದರ ಫಲವೇ ವಿದ್ಯಾರ್ಥಿಯ ಶೈಕ್ಷಣಿಕ  ಕಾರ್ಯಕ್ಷಮತೆ ಸುಧಾರಿಸಲು ಸಾಧ್ಯ ಎಂದು ಹೇಳಿದರು.

    ಕಾರ್ಯಾಗಾರದಲ್ಲಿ ವಿವಿಧ ಕಾಲೇಜಿನ ಪ್ರಾಚಾರ್ಯರು 130ಕ್ಕೂ ಹೆಚ್ಚು ಜೀವಶಾಸ್ತ್ರ ಉನ್ಯಾಸಕರು, ವೇದಿಕೆಯ ಪದಾಧಿಕಾರಿಗಳು, ವಿಷಯ ಸಂಪನ್ಮೂಲ ಉಪನ್ಯಾಸಕರು ಹಾಗೂ ವಾಸವಿ ಕಾಲೇಜಿನ ಉಪನ್ಯಾಸಕರಾದ ಹನುಮಂತಯ್ಯ,   ಬೆಂಕಿ ವಸಂತಕುಮಾರ್, ಶಿವಣ್ಣ, ನರೇಂದ್ರಬಾಬು,  ವಿನೋದ್, ಗೋವಿಂದರಾಜು, ನಟರಾಜು, ಸಂಧ್ಯಾ, ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು.

    ಕಾಲೇಜಿನ ವಿದ್ಯಾರ್ಥಿಗಳಾದ ವಾಸವಿ ಮತ್ತು ಕೃತಿಕಾ ಪ್ರಾರ್ಥಿಸಿದರು. ಮಂಜುನಾಥ್ ಎಸ್. ಸ್ವಾಗತಿಸಿದರು. ಡಾ.ಬಿ.ವಿ.ಪುಟ್ಟಸ್ವಾಮಯ್ಯ ಕಾರ್ಯಕ್ರಮ ನಿರೂಪಿಸಿದರು. ಗಂಗಾಧರ್ ವಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.