nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025
    Facebook Twitter Instagram
    ಟ್ರೆಂಡಿಂಗ್
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನ್ಮಿಸಿದ ನಂತರ ಒಂದು ಗುರಿಯನ್ನು ಸಾಧಿಸಲೇಬೇಕು: ಪ್ರೊಫೆಸರ್ ಚಿತ್ತಯ್ಯ ಪೂಜಾರ್
    ಪಾವಗಡ January 12, 2025

    ಜನ್ಮಿಸಿದ ನಂತರ ಒಂದು ಗುರಿಯನ್ನು ಸಾಧಿಸಲೇಬೇಕು: ಪ್ರೊಫೆಸರ್ ಚಿತ್ತಯ್ಯ ಪೂಜಾರ್

    By adminJanuary 12, 2025No Comments3 Mins Read
    kilarlahally

    ಪಾವಗಡ:  ಭೂಮಿಯ ಮೇಲೆ ಜನಿಸಿದ ಮೇಲೆ ಒಂದು ಸಾಧನೆಯನ್ನು ಮಾಡಿ ತಾನು ಏನೆಂದು ಸಮಾಜಕ್ಕೆ ತೋರಿಸಬೇಕು ಮತ್ತು ಪ್ರತಿಯೊಬ್ಬರು ಜಾಗೃತವಾಗುವುದರ ಜೊತೆಗೆ ಜಾಗೃತರನ್ನಾಗಿ ಮಾಡಬೇಕೆಂದು ಬೆಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಹಾಗೂ ಹಿರಿಯ ಲೇಖಕರಾದ ಪ್ರೊಫೆಸರ್ ಚಿತ್ತಯ್ಯ ಪೂಜಾರ್  ತಿಳಿಸಿದ್ದಾರೆ.

    ಪಾವಗಡ ತಾಲೂಕಿನ ಕಿಲಾರ್ಲಹಳ್ಳಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ  2 ಗಂಟೆಯಲ್ಲಿ ಪತ್ರಕರ್ತ, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ನವೀನ್ ಕಿಲಾರ್ಲಹಳ್ಳಿ ಅವರು ಬರೆದಿರುವಂತಹ “ಮೌಲ್ಯಗಳು ಮರೆಯಾಗದಿರಲಿ ಇದು ಹೆತ್ತವರ ಹೊಡಲಿನ ಕೂಗು” ಎನ್ನುವ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.


    Provided by
    Provided by
    Provided by

    ಸಮಾಜದ ಸೂತ್ರಗಳನ್ನು ನಿಗಾದಿಂದ ಗಮನಿಸಿದವರು ಮಾತ್ರ ಸಮಾಜವನ್ನು ತಿದ್ದಿ ತೀಡಲು ಮುಂದಾಗುತ್ತಾರೆ, ಸದ್ಯದ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಸೋಂಬೇರಿಗಳ ಸಂಖ್ಯೆ ಹೆಚ್ಚುತ್ತಿದೆ ಇಂತಹವರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ ಹದಿನೈದು ಸಾವಿರಕ್ಕೆ ಬೆಂಗಳೂರಿನ ತೆರಳಿ ಕೆಲಸ ಮಾಡುವುದರ ಜೊತೆಗೆ ಅನೇಕ ದುಶ್ಚಟಗಳಿಗೆ  ಬಲಿಯಾಗುತ್ತಿರುವುದು ದುಃಖಕರ ಸಂಗತಿ, ಕಲಾವಿದ ನವೀನ್ ಕಿಲಾರ್ಲಹಳ್ಳಿ ಯುವ ಸಮೂಹಕ್ಕೆ ಸಂದೇಶವೊಂದನ್ನು ನೀಡುತ್ತಾ ಗುರು ಹಿರಿಯರು ಹೆತ್ತ ತಂದೆ ತಾಯಿಯನ್ನು ನೋಡಿಕೊಳ್ಳಿ ಎಂದು ವಿನೂತನವಾಗಿ ರಾಜ್ಯಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಾ ಮಾದರಿಯಾಗುತ್ತಿರುವುದು ಹೆಮ್ಮೆ, ಎಲ್ಲರಲ್ಲಿ ಎಲ್ಲರಂತಿದ್ದು ಎಲ್ಲಾ ವಿಷಯಗಳನ್ನು ಎಳೆ ಎಳೆಯಾಗಿ ಬಲ್ಲವರಿಗೆ ಈಗ ಉನ್ನತ ಸ್ಥಾನ ಮತ್ತು ಮನುಷ್ಯನಿಗೆ ಕಲೆ, ಶಿಕ್ಷಣದ ಕೊರತೆ ಹೆಚ್ಚಾಗಿರುವುದರಿಂದ ದ್ವೇಷವನ್ನು ಹರಡುಲು ಮುಂದಾಗುತ್ತಿದ್ದಾನೆ, ಮಾನವನ ಆಲೋಚನೆ ಬದಲಾಗಬೇಕಾಗಿದ್ದು ಪ್ರತಿಯೊಬ್ಬರೂ ಕಲುಷಿತಗೊಂಡಿರುವಂತಹ ವಾತಾವರಣವನ್ನು ಶುದ್ಧೀಕರಿಸುವ ಅಗತ್ಯವಿದ್ದು ನವೀನ್ ಕಿಲಾರ್ಲಹಳ್ಳಿ ಅವರು ಬರೆದಿರುವಂತಹ ಪುಸ್ತಕ ಉತ್ತಮವಾಗಿದ್ದು ಇದಕ್ಕೆ ಬೆನ್ನುನುಡಿಯನ್ನು ನಾನೇ ಬರೆದಿದ್ದೇನೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಕ್ಕೆ ಏರುವುದರ ಜೊತೆಗೆ ಅನೇಕ ಪುಸ್ತಕಗಳನ್ನ ಬರೆದು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

    ಪುಸ್ತಕದ ಲೇಖಕರಾದ ನವೀನ್ ಕಿಲರ್ಲಾಹಳ್ಳಿ ಮಾತನಾಡಿ, ಇಂದಿನ ಸಮಾಜ ಎತ್ತ ಸಾಗುತ್ತಿದೆ ಎನ್ನುವುದರ ಆತಂಕದಿಂದ ಮೌಲ್ಯಗಳು ಮರೆಯಾಗದಿರಲಿ ಎನ್ನುವ ಪುಸ್ತಕ ರಚಿಸಿದ್ದು ಇದರ ಹಿನ್ನೆಲೆಯಲ್ಲಿ ನನ್ನ ತಂದೆ ತಾಯಿ ಸಣ್ಣ ವಯಸ್ಸಿನಿಂದ ಅನೇಕ ಕಷ್ಟಗಳನ್ನು ಅನುಭವಿಸುತ್ತಾ ನನ್ನನ್ನು ಬೆಳೆಸಿದ್ದು ಅವರಿಗೆ ಈ ಪುಸ್ತಕವನ್ನು ಅರ್ಪಿಸುತ್ತಾ ಸಮಾಜಕ್ಕೆ ನನ್ನಿಂದಾದೆ ಕೊಡುಗೆ ನೀಡಿರುವೆ ಎಂದು ಭಾವಿಸುತ್ತೇನೆ ಎಂದು ಭಾವುಕರಾದರು.

    ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ.ಗೋವಿಂದರಾಯ ಎಂ. ಅವರು ಮಾತನಾಡುತ್ತಾ,  ಇಂದಿನ ಸಮಾಜ ಹೆತ್ತವರನ್ನು ಮರೆಯುತ್ತಿರುವುದು ದೊಡ್ಡ ದುರಂತವಾಗಿದೆ ನೈತಿಕತೆಯನ್ನು ಅಳವಡಿಸಿಕೊಳ್ಳಬೇಕಾದಂತಹ ಸ್ಥಾನದಲ್ಲಿ ಅನೈತಿಕತೆ ಎದ್ದು ತಾಂಡವಡುತ್ತಿದೆ, ಪೋಷಕರಾದಂತವರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದರೆ ಮಕ್ಕಳು ಸರಿದಾರಿಗೆ ಬರುತ್ತಾರೆ. ಈ ನಿಟ್ಟಿನಲ್ಲಿ ನವೀನ್ ಕಿಲಾರ್ಲಹಳ್ಳಿ ಉತ್ತಮ ಬರಹಗಾರರಾಗುವ ಕಡೆ ಹೆಜ್ಜೆ ಇಡುತ್ತಿದ್ದು, ಇಂದಿನ ಸಮಾಜಕ್ಕೆ ಅಗತ್ಯವಾದಂತಹ ಮೌಲ್ಯಗಳ ಕುರಿತು ಸಾರಿ ಹೇಳಿದಂತಹ ಪುಸ್ತಕವನ್ನು ರಚಿಸಿದ್ದು ಪ್ರತಿಯೊಬ್ಬರು ಇದನ್ನು ಓದಿ ಅರ್ಥೈಸಿಕೊಂಡು ಹತ್ತಾರು ಜನಕ್ಕೆ ತಿಳಿಸಬೇಕೆಂದರು.

    ರೈತ ಕವಿ ಶಂಕರಪ್ಪ ಬಳ್ಳೆಕಟ್ಟೆ ಮಾತನಾಡಿ, ರಾಜ್ಯಾದ್ಯಂತ ಸಂಚರಿಸಿ ಸುಮಾರು 5 ಲಕ್ಷಕ್ಕೂ ಅಧಿಕ ಜನ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳು ಮತ್ತು ನೈತಿಕ ಗುಣಗಳ ಬಗ್ಗೆ  ಜಾಗೃತಿ ಮೂಡಿ ಸುತ್ತ ಇಂದು ಒಂದು ಪುಸ್ತಕವನ್ನೇ ಬಿಡುಗಡೆ ಮಾಡಿರುವಂಥದ್ದು ನಿಜಕ್ಕೂ ಅಭಿನಂದನೀಯ ವಿಚಾರವಾಗಿದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಹೆತ್ತವರ ಬಗ್ಗೆ ಜಾಗೃತಿ ವಹಿಸಬೇಕೆಂದರು.

    ಹಿರಿಯ ಸಾಹಿತಿ ಸಣ್ಣನಾಗಪ್ಪ ಮಾತನಾಡಿ, ಕಿಲಾರ್ಲಹಳ್ಳಿಯಲ್ಲಿ ಅಂದು ರಾಸುಗಳಿಗೆ ಔಷಧಿಯನ್ನು ಕೊಟ್ಟಿದ್ದು  ಇದೇ ಕಾರಣಕ್ಕೆ ಈ ಗ್ರಾಮಕ್ಕೆ ಕಿಲಾರಲಹಳ್ಳಿ ಎಂದು ಹೆಸರು ಬಂದಿದೆ, ಅದೇ ರೀತಿ ಇಂದು ಯುವ ಜನಾಂಗಕ್ಕೆ ಜಾಗೃತಿಯ ಔಷಧಿಯನ್ನು ನೀಡುತ್ತಿರುವುದು ಹೆಮ್ಮೆಯಾಗಿದೆ ಎಂದು ಲೇಖಕ ನವೀನ್ ಕಾರ್ಯವನ್ನು ಮೆಚ್ಚಿದರು.

    ಕಾರ್ಯಕ್ರಮದಲ್ಲಿ ಲಂಡನ್ ಡಾ. ಪ್ರಭಾಕರ್ ರೆಡ್ಡಿ, ಸಿಪಿಐ ಸುರೇಶ್, ಸಾಹಿತಿ ಡಾ. ಕರಿಯಣ್ಣ. ಮಾತನಾಡಿದರು.  ಇದಕ್ಕೂ ಮೊದಲು ಗ್ರಾಮದಲ್ಲಿ ಮೌಲ್ಯಗಳು ಮರೆಯಾಗದಿರಲಿ ಪುಸ್ತಕವನ್ನು ಅನೇಕ ಕನ್ನಡ ಕಲಾಭಿಮಾನಿಗಳೊಂದಿಗೆ ವಿವಿಧ ವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು.

    ನವೀನ್ ಕಿಲಾರ್ಲಹಳ್ಳಿ ಅವರನ್ನು ವಿವಿಧ ಸಂಘ ಸಂಸ್ಥೆ ಹಾಗೂ ಕವಿಗಳಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ, ಪಬ್ಲಿಕ್ ಟಿವಿಯ ಹಿರಿಯ ಪತ್ರಕರ್ತ ಶ್ರೀನಿವಾಸ್ ಪೊನ್ನಸಮುದ್ರ, ಮಧುಗಿರಿ ಬಿಇಓ ಹನುಮಂತರಾಯಪ್ಪ, ಕಾರ್ಮಿಕ ನಿರೀಕ್ಷಕ ಹರೀಶ್ ಕುಮಾರ್ ಎಸ್, ಲೇಖಕರ ತಂದೆ ಬಸಪ್ಪ, ತಾಯಿ ಜಯಮ್ಮ, ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025

    ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ

    September 27, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು: ತಾಲ್ಲೂಕಿನ ಸಾರ್ಥವಳ್ಳಿ ವಲಯದ ಹಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾರತಾಂಬೆ ಸಂಘದ 5ನೇ ವರ್ಷದ…

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.