nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    • ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈನುಗಾರಿಕೆಯಲ್ಲಿ ನಿರಂತರ ಪರಿಶ್ರಮ, ಆಸಕ್ತಿ ಇದ್ದಾಗ ಮಾತ್ರ ಆರ್ಥಿಕ ಯಶಸ್ಸು ಗಳಿಸಲು ಸಾಧ್ಯ:  ಎಸ್.ಆರ್. ಗೌಡ
    ತುಮಕೂರು March 5, 2025

    ಹೈನುಗಾರಿಕೆಯಲ್ಲಿ ನಿರಂತರ ಪರಿಶ್ರಮ, ಆಸಕ್ತಿ ಇದ್ದಾಗ ಮಾತ್ರ ಆರ್ಥಿಕ ಯಶಸ್ಸು ಗಳಿಸಲು ಸಾಧ್ಯ:  ಎಸ್.ಆರ್. ಗೌಡ

    By adminMarch 5, 2025No Comments2 Mins Read
    sira

    ತುಮಕೂರು: ಶಿರಾ ತಾಲೂಕಿನಲ್ಲಿ ಪ್ರತಿನಿತ್ಯ 50  ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಹೈನುಗಾರಿಕೆ ಬಗ್ಗೆ ರೈತರಿಗೆ ಹೆಚ್ಚು ತರಬೇತಿ ನೀಡಿ 1 ಲಕ್ಷ ಲೀಟರ್ ಹಾಲು ಉತ್ಪಾದನೆ ಮಾಡುವುದು ಈ ನಮ್ಮ ಗುರಿ, ಪ್ರತಿದಿನ 25 ಲೀಟರ್ ಹಾಲು ಉತ್ಪಾದನೆ ಮಾಡಿ ಡೈರಿಗೆ ಹಾಕುವ 160 ರೈತರಿಗೆ ತರಬೇತಿ ನೀಡಿ, ಉತ್ಪಾದನೆಯಲ್ಲಿ ಹೆಚ್ಚಳ ಮಾಡಿಕೊಳ್ಳುವಂತೆ ಅರಿವು ಮೂಡಿಸಲಾಗಿದ್ದು,  ಹೆಚ್ಚು ಹಾಲು ಉತ್ಪಾದನೆಯಿಂದ ಬಡ ರೈತ ಕುಟುಂಬಗಳ ಆರ್ಥಿಕ ಸದೃಢತೆಗೆ ಮತ್ತಷ್ಟು ಬಲ ನೀಡಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು.

    ಶಿರಾ ನಗರದ ನಂದಿನಿ ಕ್ಷೀರ ಭವನದಲ್ಲಿರುವ ಡಾ.ವರ್ಗಿಸ್ ಕುರಿಯನ್ ಸಭಾಂಗಣದಲ್ಲಿ ಮಂಗಳವಾರ ಪ್ರಗತಿಪರ ಹಾಲು ಉತ್ಪಾದಕರಿಗೆ ಆಯೋಜಿಸಿದ್ದ  ವೈಜ್ಞಾನಿಕ ಹೈನುಗಾರಿಕೆ ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ವೈಜ್ಞಾನಿಕ ಹೈನುಗಾರಿಕೆ ಬಗ್ಗೆ ಸಂಪನ್ಮೂಲ ವ್ಯಕ್ತಿ ನೀಡುವಂತಹ ಮಾಹಿತಿಯನ್ನು ಪಡೆದು ತಮ್ಮ ಹೈನುಗಾರಿಕೆಯಲ್ಲಿ ಅಳವಡಿಸಿಕೊಂಡರೆ, ಯಶಸ್ವಿ ಹಾಲು ಉತ್ಪಾದಕರಾಗಬಹುದು.  ಹಾಲು ಉತ್ಪಾದಕರು ಮ್ಯಾಟ್ ಸೇರಿದಂತೆ ಇತರೆ ಸಲಕರಣೆಗಳನ್ನು ನೀಡುವಂತೆ ಮನವಿ ಮಾಡಿದ್ದು, ಏಪ್ರಿಲ್ ನಲ್ಲಿ ನಡೆಯುವ ಹಾಲು ಒಕ್ಕೂಟದ ಬಜೆಟ್ ನಲ್ಲಿ ಇಂತಹ ಸೌಲಭ್ಯಗಳಿಗೆ ಹೆಚ್ಚು ಆದ್ಯತೆ ನೀಡಿ ಅತಿ ಶೀಘ್ರದಲ್ಲಿಯೇ ಹಾಲು ಉತ್ಪಾದಕರಿಗೆ ಬೇಕಾಗುವಂತಹ ಸೌಲಭ್ಯಗಳನ್ನು ವಿತರಣೆ ಮಾಡುತ್ತೇವೆ. ಹಾಲು ಒಕ್ಕೂಟ ಉತ್ಪಾದಕರಿಗೆ ಎಲ್ಲಾ ಸೌಲಭ್ಯಗಳನ್ನು ನೀಡಲು ಬದ್ಧವಾಗಿದ್ದು , ಶಿರಾ ತಾಲೂಕಿನಲ್ಲಿ ರೈತರು ಹಾಲು ಉತ್ಪಾದನೆ ಹೆಚ್ಚಳ ಮಾಡಿಕೊಳ್ಳುವುದರ ಜೊತೆಗೆ, ಹಾಲಿನ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಎಂದರು.

    ತುಮಕೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸನ್ ಮಾತನಾಡಿ,  ಶಿರಾ ತಾಲೂಕಿನ ರೈತರು ಡೈರಿಗಳಿಗೆ ಹಾಕುತ್ತಿರುವ ಹಾಲಿನ  ಗುಣಮಟ್ಟ ಉತ್ತಮವಾಗಿರುವ ಕಾರಣ ಶಿರಾ ಹಾಲನ್ನು ಬಾಂಬೆಗೆ ಕಳಿಸುವಂತಹ ಕೆಲಸ ಒಕ್ಕೂಟ ಮಾಡುತ್ತಿದೆ.  ಹಾಲಿನ ಉತ್ಪಾದನೆಯನ್ನು ಹೆಚ್ಚಳದ ಜೊತೆಗೆ ಇದೇ ರೀತಿ ಗುಣಮಟ್ಟದ ಹಾಲನ್ನು ನೀಡಿದರೆ ಇತರ ರಾಜ್ಯಗಳಿಗೂ ಕಳಿಸಲು ಸಹಕಾರಿಯಾಗುತ್ತದೆ.   ಅಲ್ಲದೆ ಇದರಿಂದ ಬಂದಂತಹ ಲಾಭಾಂಶವನ್ನು ಈ ಭಾಗದ ಹಾಲು ಉತ್ಪಾದಕರಿಗೆ ನೀಡಲು ಸಹಕಾರಿಯಾಗುತ್ತದೆ ಎಂದರು.

    ಇದೇ ಸಂದರ್ಭದಲ್ಲಿ 25 ಲೀಟರ್ ಹಾಲು ನಿತ್ಯ ಡೈರಿಗೆ ಹಾಕುವ 160  ಪ್ರಗತಿಪರ ರೈತರಿಗೆ ಖನಿಜ ಮಿಶ್ರಣ, ಕೆಚ್ಚಲು ಬಾವು ಔಷಧಿ, ಹೈನುಗಾರಿಕೆ ಕೈಪಿಡಿಯನ್ನು ವಿತರಣೆ ಮಾಡಲಾಯಿತು.

    ವೈಜ್ಞಾನಿಕ ಹೈನುಗಾರಿಕೆ ಬಗ್ಗೆ ಸಂಪನ್ಮೂಲ ವ್ಯಕ್ತಿ ಡಾ.ರಾಘವನ್ ಉಪನ್ಯಾಸ ನೀಡಿದರು.  ಕೆಎಂಎಫ್ ವ್ಯವಸ್ಥಾಪಕ ರಾದ ಚಂದ್ರಶೇಖರ್, ಶ್ರೀನಿವಾಸ್, ಶಿರಾ ಒಕ್ಕೂಟದ ಉಪ ವ್ಯವಸ್ಥಾಪಕ ಗಿರೀಶ್, ವಿಸ್ತರಣಾಧಿಕಾರಿಗಳಾದ ಚೈತ್ರ, ಕಿರಣ್ ಕುಮಾರ್, ಸಮಾಲೋಚಕ ದಯಾನಂದ್, ಪಶುವೈದ್ಯ ಡಾ. ಶ್ರೀಕಾಂತ್, ಕೆಮಿಸ್ಟರ್ ಪಿ.ಎಂ.ಬಾಬಾ ಫಕೃದೀನ್, ಹನುಮಂತರಾಯ ಸೇರಿದಂತೆ ಶಿರಾ ತಾಲೂಕಿನ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪ್ರಗತಿಪರ ರೈತರು, ಉತ್ಪಾದಕರು ಉಪಸ್ಥಿತರಿದ್ದರು.

    ವರದಿ:  ಇಸ್ಮಾಯಿಲ್ ಜಭಿವುಲ್ಲಾ ಖಾನ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    ಚಿಕ್ಕನಾಯಕನಹಳ್ಳಿ: “ನಮ್ಮ ಕ್ಷೇತ್ರದ ಪ್ರತಿ ಮನೆಯಲ್ಲೂ ಒಬ್ಬೊಬ್ಬರು ಉತ್ತಮ ಉನ್ನತ ಸ್ಥಾನಕ್ಕೇರಬೇಕು ಎಂಬ ಉದಾತ್ತ ಉದ್ದೇಶದಿಂದ, ಸಮಾಜದ ಸಮಾನ ಮನಸ್ಕರೆಲ್ಲರೂ…

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.