nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲ ಕಾನೂನುಗಳ ಮೂಲ ಸ್ತ್ರೋತ್ರ ನಮ್ಮ ಸಂವಿಧಾನ: ಬೆಟ್ಟಯ್ಯ ಕೋಟೆ
    ಜಿಲ್ಲಾ ಸುದ್ದಿ April 29, 2025

    ಎಲ್ಲ ಕಾನೂನುಗಳ ಮೂಲ ಸ್ತ್ರೋತ್ರ ನಮ್ಮ ಸಂವಿಧಾನ: ಬೆಟ್ಟಯ್ಯ ಕೋಟೆ

    By adminApril 29, 2025No Comments2 Mins Read
    samvidhan

    ಸರಗೂರು.:  ನಮ್ಮ ಸಂವಿಧಾನದ ಬಗ್ಗೆ ನಮಗೆ ಎಷ್ಟು ಅರಿವು ಇದೆ ಎಂಬುದರ ಮೌಲ್ಯ ಮಾಪನವಾಗಿತ್ತು. ಆದರೆ ಪ್ರಶ್ನೆಗಳಿಗೆ ಉತ್ತರಿಸುವಾಗ ವ್ಯಕ್ತವಾದ ಅವರ ಅಜ್ಞಾನ ಮಾತ್ರ ಬೆಚ್ಚಿ ಬೀಳಿಸುವಂತಿತ್ತು. ಈ ಹಿನ್ನೆಲೆಯಲ್ಲಿ ಇಂಥದೊಂದು ದಿನದ ಆಚರಣೆಯ ಮಹತ್ವ ನಮಗೆ ಮನವರಿಕೆಯಾಗಬೇಕು. ನಮ್ಮ ರಾಷ್ಟ್ರದಲ್ಲಿ ಜಾರಿಯಲ್ಲಿರುವ ಆಡಳಿತ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ ಮತ್ತು ಎಲ್ಲ ಕಾನೂನುಗಳ ಮೂಲ ಸ್ತ್ರೋತ್ರ ನಮ್ಮ ಸಂವಿಧಾನ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಾಗೂ ಬೆಟ್ಟಯ್ಯ ಕೋಟೆ ತಿಳಿಸಿದರು.

    ತಾಲೂಕಿನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸೋಮವಾರದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜನ್ಮದಿನದ ಅಂಗವಾಗಿ ಸ್ವಾತಂತ್ರ್ಯ ನಂತರ ಭಾರತದ 77 ನಡೆಯಲ್ಲಿ ಸಂಕಿರಣಗೊಂಡ ಸಂವಿಧಾನ ಆಶಯಗಳು ಕುರಿತು ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ದಲಿತ ಸಂಘರ್ಷ ಸಮಿತಿ ಸರಗೂರು ತಾಲೂಕು ವತಿಯಿಂದ ಹಮ್ಮಿಕೊಂಡು ಡಾ.ಬಿ.ಆರ್.ಅಂಬೇಡ್ಕರ್ ಅವರ ಪೋಟೋ ದೀಪ ಬೆಳಗಿಸುವ ಮೂಲಕ ಪೋಟೋ ಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು.

    ಸಂವಿಧಾನದಲ್ಲಿ ಇರುವ ಅನೇಕ ಅಂಶಗಳನ್ನು ಮತ್ತು ಸಿದ್ಧಾಂತಗಳನ್ನು ಎರವಲು ಪಡೆದು ನಮ್ಮ ಸಂವಿಧಾನದಲ್ಲಿ ಅಳವಡಿಸಿಕೊಳ್ಳಲಾಗಿದೆ. ಬ್ರಿಟಿಷರ ಆಳ್ವಿಕೆಯಲ್ಲಿ ಭಾರತದ ಜನತೆ ಸಮಾನತೆಯ ಹಕ್ಕುಗಳಿಂದ, ಸ್ವಾತಂತ್ರ್ಯದ ಹಕ್ಕುಗಳಿಂದ ವಂಚಿತರಾಗಿದ್ದರು. ಆದರೆ, ಸ್ವಾತಂತ್ರ್ಯದ ಹೋರಾಟ ಹಾಗೂ ಸಾಮಾಜಿಕ ಹಾಗೂ ಸಿವಿಲ್ ಹಕ್ಕುಗಳಿಗಾಗಿ ನಡೆದ ಹೋರಾಟಗಳಿಂದಾಗಿ ಭಾರತದ ಜನತೆಗೆ ಈ ಹಕ್ಕುಗಳನ್ನು ಪಡೆಯುವುದು ಸಾಧ್ಯವಾಯಿತು ಈ ಹೋರಾಟಗಳೇ ಮುಂದೆ ಸಂವಿಧಾನ ಸಭೆಯ ರಚನೆಗೂ ಕಾರಣವಾಯಿತು ಎಂದರು.

    ಮುಖ್ಯ ಭಾಷಣಕಾರರಾಗಿ ಬಾರ್ ಕೋಲ್ ಪತ್ರಿಕೆ ಸಂಪಾದಕ ಬಾರ್ ಕೋಲ್ ರಂಗಸ್ವಾಮಿ ಮಾತನಾಡಿ,  ಡಾ.ಅಂಬೇಡ್ಕರ್ ಅವರು ಸಂವಿಧಾನ ಪ್ರಾರೂಪಣಾ ಸಮಿತಿಯ ಅಧ್ಯಕ್ಷರಾಗಿದ್ದರು. ಸಂವಿಧಾನ ಸಭೆ ಎರಡು ವರ್ಷ, ಹನ್ನೊಂದು ತಿಂಗಳು, ಹದಿನೆಂಟು ದಿನಗಳು ನಡೆಯಿತು. ಈ ಅವಧಿಯಲ್ಲಿ 166 ದಿನಗಳ ಕಾಲ ಸಭೆ ಸೇರಿತ್ತು. ಅಲ್ಲಿಯ ಚರ್ಚೆಗಳಲ್ಲಿ ಪತ್ರಕರ್ತರಿಗೆ ಹಾಗೂ ಜನತೆಗೆ ಮುಕ್ತ ಪ್ರವೇಶಾವಕಾಶವಿತ್ತು ಎಂದು ತಿಳಿಸಿದರು.

    ಸಂವಿಧಾನ ಸಭೆ ಸಂವಿಧಾನ ರಚನೆಯನ್ನು ಪೂರ್ಣಗೊಳಿಸಿ 1949ರ ನವೆಂಬರ್ ನಲ್ಲಿ ರಾಷ್ಟ್ರಕ್ಕೆ ಸಮರ್ಪಿಸಿಕೊಂಡಿತು, 1950ರ ಜನವರಿ 26 ರಂದು ಭಾರತದ ಸಂವಿಧಾನ ಜಾರಿಗೆ ಬಂತು.  ಸಂವಿಧಾನ ಜನತೆಯ ಹಕ್ಕುಗಳ ಮೂಲವಾಯಿತು. ವಿಶ್ವದಲ್ಲೆ ಅತ್ಯಧಿಕ ಹಕ್ಕುಗಳನ್ನು ಆಧರಿಸಿ ರಚನೆಯಾದಂಥ ಅತಿ ದೀರ್ಘವಾದ ಲಿಖಿತ ಸಂವಿಧಾನ ಎಂಬ ಗರಿಮೆಗೆ ಪಾತ್ರವಾಗಿದೆ ನಮ್ಮ ಸಂವಿಧಾನ ಎಂದರು.

    ವ್ಯವಸ್ಥೆ, ಸ್ವತಂತ್ರ ನ್ಯಾಯಾಂಗ ವ್ಯವಸ್ಥೆ, ಸಂಸದೀಯ ವ್ಯವಸ್ಥೆ, ಜಾತ್ಯತೀತ ನಿಲುವು, ಏಕ ನಾಗರಿಕತ್ವ ವ್ಯವಸ್ಥೆ, ಪ್ರಾಪ್ತ ವಯಸ್ಕರ ಮತದಾನದ ಹಕ್ಕು ಮತ್ತು ಸಂವಿಧಾನವನ್ನು ತಿದ್ದುಪಡಿ ಮಾಡಲು ಇರುವ ಅವಕಾಶ-ಈ ಎಲ್ಲ ಅಂಶಗಳು ನಮ್ಮ ಸಂವಿಧಾನ.

    ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಅಲಗೂಡು ಶಿವಕುಮಾರ್, ದಸಂಸ ಜಿಲ್ಲಾ ಸಮಿತಿ ಸಂಚಾಲಕರು ಶುಂಭುಲಿಂಗಸ್ವಾಮಿ, ಹೆಗ್ಗನೂರು ನಿಂಗರಾಜು,ಬಿ ಡಿ. ಶಿವಬುದ್ದಿ, ಅದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ಟೌನ್ ಗಡಿಯಜಮಾನ ರಂಗಯ್ಯ,ಯಜಮಾನ ಬೋಗಯ್ಯ, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಸಣ್ಣಸ್ವಾಮಿ, ಸರಗೂರು ತಾಲೂಕು ಸಮಿತಿ ಸಂಚಾಲಕರು ಡಿ.ಎಂ. ಶಿವಶಂಕರ್, ಕಾಳಸ್ವಾಮಿ, ಶಿವಚನ್ನ, ಕಾಳಸ್ವಾಮಿ, ರಾಮಲಿಂಗಪ್ಪ, ಕಲ್ಲೇಶ್, ಪುಟ್ಟರಾಜು, ಶಾಂತರಾಜು, ಪುಟ್ಟಯ್ಯ, ಪ್ರಕಾಶ್, ಮುತ್ತು, ಸರಗೂರು ಹೋಬಳಿ ಪದಾಧಿಕಾರಿಗಳು ಕಾಂತಯ್ಯ, ರಂಗಸ್ವಾಮಿ, ಹುಚ್ಚಯ್ಯ, ರಂಗಯ್ಯ, ಕಂದಲಿಕೆ ಹೋಬಳಿ ಪದಾಧಿಕಾರಿಗಳು ನಾಗಣ್ಣ, ಲೋಕೇಶ್, ನಾಗರಾಜು,ಕಾಳಸ್ವಾಮಿ, ದೇವಣ್ಣ, ಲೋಕೇಶ್, ಎಚ್.ಡಿ.ಕೋಟೆ ಪದಾಧಿಕಾರಿಗಳು ಮಹೇಶ್, ರಾಜಶೇಖರ್, ಕೃಷ್ಣ, ಮಹೇಶ್, ಗೋಪಾಲ್, ಸುರೇಶ್, ಸಿದ್ದರಾಜು, ದಾಸಯ್ಯ, ಅಂಕಯ್ಯ, ಪುಟ್ಟಸ್ವಾಮಿ, ಕೃಷ್ಣ, ಮಲ್ಲಿಕ, ಸಿದ್ದರಾಜು, ನಾಗರಾಜು, ಸೋಮೇಶ್, ಗಣೇಶ, ಪರಮೇಶ್, ಕರಿಯಪ್ಪ, ರವಿಕುಮಾರ್, ಪುಟ್ಟಯ್ಯ,ಮಹದೇವ, ದೊರೆಸ್ವಾಮಿ, ರಾಮಯ್ಯ ಅಮವಾಸೆ, ನಂಜುಂಡಸ್ವಾಮಿ, ಹಾಲಪ್ಪ, ನಾರಾಯಣ, ಮಂಜು ಜಯಣ್ಣ, ಮುಖಂಡರು ಬೋಗಯ್ಯ, ಚಿನ್ನಣ್ಣ, ಮಲ್ಲೇಶ್, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.