nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025
    Facebook Twitter Instagram
    ಟ್ರೆಂಡಿಂಗ್
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    • ನಗರೋತ್ಥಾನ ಯೋಜನೆ ಅನುಷ್ಠಾನ: ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ
    • ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳ ಆರೋಪ
    • ತುಮಕೂರಿನಲ್ಲಿ ಬೃಹತ್ ತಿರಂಗ ಯಾತ್ರೆ
    • ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲ ಕಾನೂನುಗಳ ಮೂಲ ಸ್ತ್ರೋತ್ರ ನಮ್ಮ ಸಂವಿಧಾನ: ಬೆಟ್ಟಯ್ಯ ಕೋಟೆ
    ಜಿಲ್ಲಾ ಸುದ್ದಿ April 29, 2025

    ಎಲ್ಲ ಕಾನೂನುಗಳ ಮೂಲ ಸ್ತ್ರೋತ್ರ ನಮ್ಮ ಸಂವಿಧಾನ: ಬೆಟ್ಟಯ್ಯ ಕೋಟೆ

    By adminApril 29, 2025No Comments2 Mins Read
    samvidhan

    ಸರಗೂರು.:  ನಮ್ಮ ಸಂವಿಧಾನದ ಬಗ್ಗೆ ನಮಗೆ ಎಷ್ಟು ಅರಿವು ಇದೆ ಎಂಬುದರ ಮೌಲ್ಯ ಮಾಪನವಾಗಿತ್ತು. ಆದರೆ ಪ್ರಶ್ನೆಗಳಿಗೆ ಉತ್ತರಿಸುವಾಗ ವ್ಯಕ್ತವಾದ ಅವರ ಅಜ್ಞಾನ ಮಾತ್ರ ಬೆಚ್ಚಿ ಬೀಳಿಸುವಂತಿತ್ತು. ಈ ಹಿನ್ನೆಲೆಯಲ್ಲಿ ಇಂಥದೊಂದು ದಿನದ ಆಚರಣೆಯ ಮಹತ್ವ ನಮಗೆ ಮನವರಿಕೆಯಾಗಬೇಕು. ನಮ್ಮ ರಾಷ್ಟ್ರದಲ್ಲಿ ಜಾರಿಯಲ್ಲಿರುವ ಆಡಳಿತ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ ಮತ್ತು ಎಲ್ಲ ಕಾನೂನುಗಳ ಮೂಲ ಸ್ತ್ರೋತ್ರ ನಮ್ಮ ಸಂವಿಧಾನ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಾಗೂ ಬೆಟ್ಟಯ್ಯ ಕೋಟೆ ತಿಳಿಸಿದರು.

    ತಾಲೂಕಿನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸೋಮವಾರದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜನ್ಮದಿನದ ಅಂಗವಾಗಿ ಸ್ವಾತಂತ್ರ್ಯ ನಂತರ ಭಾರತದ 77 ನಡೆಯಲ್ಲಿ ಸಂಕಿರಣಗೊಂಡ ಸಂವಿಧಾನ ಆಶಯಗಳು ಕುರಿತು ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ದಲಿತ ಸಂಘರ್ಷ ಸಮಿತಿ ಸರಗೂರು ತಾಲೂಕು ವತಿಯಿಂದ ಹಮ್ಮಿಕೊಂಡು ಡಾ.ಬಿ.ಆರ್.ಅಂಬೇಡ್ಕರ್ ಅವರ ಪೋಟೋ ದೀಪ ಬೆಳಗಿಸುವ ಮೂಲಕ ಪೋಟೋ ಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು.


    Provided by

    ಸಂವಿಧಾನದಲ್ಲಿ ಇರುವ ಅನೇಕ ಅಂಶಗಳನ್ನು ಮತ್ತು ಸಿದ್ಧಾಂತಗಳನ್ನು ಎರವಲು ಪಡೆದು ನಮ್ಮ ಸಂವಿಧಾನದಲ್ಲಿ ಅಳವಡಿಸಿಕೊಳ್ಳಲಾಗಿದೆ. ಬ್ರಿಟಿಷರ ಆಳ್ವಿಕೆಯಲ್ಲಿ ಭಾರತದ ಜನತೆ ಸಮಾನತೆಯ ಹಕ್ಕುಗಳಿಂದ, ಸ್ವಾತಂತ್ರ್ಯದ ಹಕ್ಕುಗಳಿಂದ ವಂಚಿತರಾಗಿದ್ದರು. ಆದರೆ, ಸ್ವಾತಂತ್ರ್ಯದ ಹೋರಾಟ ಹಾಗೂ ಸಾಮಾಜಿಕ ಹಾಗೂ ಸಿವಿಲ್ ಹಕ್ಕುಗಳಿಗಾಗಿ ನಡೆದ ಹೋರಾಟಗಳಿಂದಾಗಿ ಭಾರತದ ಜನತೆಗೆ ಈ ಹಕ್ಕುಗಳನ್ನು ಪಡೆಯುವುದು ಸಾಧ್ಯವಾಯಿತು ಈ ಹೋರಾಟಗಳೇ ಮುಂದೆ ಸಂವಿಧಾನ ಸಭೆಯ ರಚನೆಗೂ ಕಾರಣವಾಯಿತು ಎಂದರು.

    ಮುಖ್ಯ ಭಾಷಣಕಾರರಾಗಿ ಬಾರ್ ಕೋಲ್ ಪತ್ರಿಕೆ ಸಂಪಾದಕ ಬಾರ್ ಕೋಲ್ ರಂಗಸ್ವಾಮಿ ಮಾತನಾಡಿ,  ಡಾ.ಅಂಬೇಡ್ಕರ್ ಅವರು ಸಂವಿಧಾನ ಪ್ರಾರೂಪಣಾ ಸಮಿತಿಯ ಅಧ್ಯಕ್ಷರಾಗಿದ್ದರು. ಸಂವಿಧಾನ ಸಭೆ ಎರಡು ವರ್ಷ, ಹನ್ನೊಂದು ತಿಂಗಳು, ಹದಿನೆಂಟು ದಿನಗಳು ನಡೆಯಿತು. ಈ ಅವಧಿಯಲ್ಲಿ 166 ದಿನಗಳ ಕಾಲ ಸಭೆ ಸೇರಿತ್ತು. ಅಲ್ಲಿಯ ಚರ್ಚೆಗಳಲ್ಲಿ ಪತ್ರಕರ್ತರಿಗೆ ಹಾಗೂ ಜನತೆಗೆ ಮುಕ್ತ ಪ್ರವೇಶಾವಕಾಶವಿತ್ತು ಎಂದು ತಿಳಿಸಿದರು.

    ಸಂವಿಧಾನ ಸಭೆ ಸಂವಿಧಾನ ರಚನೆಯನ್ನು ಪೂರ್ಣಗೊಳಿಸಿ 1949ರ ನವೆಂಬರ್ ನಲ್ಲಿ ರಾಷ್ಟ್ರಕ್ಕೆ ಸಮರ್ಪಿಸಿಕೊಂಡಿತು, 1950ರ ಜನವರಿ 26 ರಂದು ಭಾರತದ ಸಂವಿಧಾನ ಜಾರಿಗೆ ಬಂತು.  ಸಂವಿಧಾನ ಜನತೆಯ ಹಕ್ಕುಗಳ ಮೂಲವಾಯಿತು. ವಿಶ್ವದಲ್ಲೆ ಅತ್ಯಧಿಕ ಹಕ್ಕುಗಳನ್ನು ಆಧರಿಸಿ ರಚನೆಯಾದಂಥ ಅತಿ ದೀರ್ಘವಾದ ಲಿಖಿತ ಸಂವಿಧಾನ ಎಂಬ ಗರಿಮೆಗೆ ಪಾತ್ರವಾಗಿದೆ ನಮ್ಮ ಸಂವಿಧಾನ ಎಂದರು.

    ವ್ಯವಸ್ಥೆ, ಸ್ವತಂತ್ರ ನ್ಯಾಯಾಂಗ ವ್ಯವಸ್ಥೆ, ಸಂಸದೀಯ ವ್ಯವಸ್ಥೆ, ಜಾತ್ಯತೀತ ನಿಲುವು, ಏಕ ನಾಗರಿಕತ್ವ ವ್ಯವಸ್ಥೆ, ಪ್ರಾಪ್ತ ವಯಸ್ಕರ ಮತದಾನದ ಹಕ್ಕು ಮತ್ತು ಸಂವಿಧಾನವನ್ನು ತಿದ್ದುಪಡಿ ಮಾಡಲು ಇರುವ ಅವಕಾಶ-ಈ ಎಲ್ಲ ಅಂಶಗಳು ನಮ್ಮ ಸಂವಿಧಾನ.

    ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಅಲಗೂಡು ಶಿವಕುಮಾರ್, ದಸಂಸ ಜಿಲ್ಲಾ ಸಮಿತಿ ಸಂಚಾಲಕರು ಶುಂಭುಲಿಂಗಸ್ವಾಮಿ, ಹೆಗ್ಗನೂರು ನಿಂಗರಾಜು,ಬಿ ಡಿ. ಶಿವಬುದ್ದಿ, ಅದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ಟೌನ್ ಗಡಿಯಜಮಾನ ರಂಗಯ್ಯ,ಯಜಮಾನ ಬೋಗಯ್ಯ, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಸಣ್ಣಸ್ವಾಮಿ, ಸರಗೂರು ತಾಲೂಕು ಸಮಿತಿ ಸಂಚಾಲಕರು ಡಿ.ಎಂ. ಶಿವಶಂಕರ್, ಕಾಳಸ್ವಾಮಿ, ಶಿವಚನ್ನ, ಕಾಳಸ್ವಾಮಿ, ರಾಮಲಿಂಗಪ್ಪ, ಕಲ್ಲೇಶ್, ಪುಟ್ಟರಾಜು, ಶಾಂತರಾಜು, ಪುಟ್ಟಯ್ಯ, ಪ್ರಕಾಶ್, ಮುತ್ತು, ಸರಗೂರು ಹೋಬಳಿ ಪದಾಧಿಕಾರಿಗಳು ಕಾಂತಯ್ಯ, ರಂಗಸ್ವಾಮಿ, ಹುಚ್ಚಯ್ಯ, ರಂಗಯ್ಯ, ಕಂದಲಿಕೆ ಹೋಬಳಿ ಪದಾಧಿಕಾರಿಗಳು ನಾಗಣ್ಣ, ಲೋಕೇಶ್, ನಾಗರಾಜು,ಕಾಳಸ್ವಾಮಿ, ದೇವಣ್ಣ, ಲೋಕೇಶ್, ಎಚ್.ಡಿ.ಕೋಟೆ ಪದಾಧಿಕಾರಿಗಳು ಮಹೇಶ್, ರಾಜಶೇಖರ್, ಕೃಷ್ಣ, ಮಹೇಶ್, ಗೋಪಾಲ್, ಸುರೇಶ್, ಸಿದ್ದರಾಜು, ದಾಸಯ್ಯ, ಅಂಕಯ್ಯ, ಪುಟ್ಟಸ್ವಾಮಿ, ಕೃಷ್ಣ, ಮಲ್ಲಿಕ, ಸಿದ್ದರಾಜು, ನಾಗರಾಜು, ಸೋಮೇಶ್, ಗಣೇಶ, ಪರಮೇಶ್, ಕರಿಯಪ್ಪ, ರವಿಕುಮಾರ್, ಪುಟ್ಟಯ್ಯ,ಮಹದೇವ, ದೊರೆಸ್ವಾಮಿ, ರಾಮಯ್ಯ ಅಮವಾಸೆ, ನಂಜುಂಡಸ್ವಾಮಿ, ಹಾಲಪ್ಪ, ನಾರಾಯಣ, ಮಂಜು ಜಯಣ್ಣ, ಮುಖಂಡರು ಬೋಗಯ್ಯ, ಚಿನ್ನಣ್ಣ, ಮಲ್ಲೇಶ್, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025

    ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೈಪರ್ ಟೆನ್ಶನ್ ದಿನಾಚರಣೆ

    May 18, 2025

    ಶಂಕಹಳ್ಳಿ ಗ್ರಾಮದ ಸಾರ್ವಜನಿಕ ಸ್ಮಶಾನ ಭೂಮಿ ಒತ್ತುವರಿ ತೆರವು: ಕಠಿಣ ಕ್ರಮಕ್ಕೆ ತಹಶೀಲ್ದಾರ್ ಸೂಚನೆ

    May 17, 2025
    Our Picks

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025

    ಸಿಂಧೂ ಜಲ ಒಪ್ಪಂದ ಸ್ಥಗಿತ ಬೆನ್ನಲ್ಲೇ ಹೆಚ್ಚುವರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಕೆಗೆ ಭಾರತ ಚಿಂತನೆ!

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ತುಮಕೂರು:  ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (TG) ಮೀಸಲಾತಿಯಡಿ 1:3…

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.