nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025
    Facebook Twitter Instagram
    ಟ್ರೆಂಡಿಂಗ್
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    • ಭಾರತ–ಪಾಕಿಸ್ತಾನ ಯುದ್ಧ ಸಂದರ್ಭ : ನಾಗರಿಕರ ರಕ್ಷಣೆಗಾಗಿ 3,000 ಸ್ವಯಂ ಸೇವಕರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಯಲಸೀಮೆ ಜಿಲ್ಲೆಯ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಬದ್ದ: ಸಚಿವ ಎನ್‌.ಎಸ್‌.ಭೋಸರಾಜು
    ತುಮಕೂರು April 20, 2025

    ಬಯಲಸೀಮೆ ಜಿಲ್ಲೆಯ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಬದ್ದ: ಸಚಿವ ಎನ್‌.ಎಸ್‌.ಭೋಸರಾಜು

    By adminApril 20, 2025No Comments2 Mins Read
    yettinahole

    ತುಮಕೂರು: ಬಯಲುಸೀಮೆಯ ಜಿಲ್ಲೆಗಳಲ್ಲಿ ಜನರ ನೀರಿನ ಬವಣೆಗೆ ಶಾಶ್ವತವಾಗಿ ಪರಿಹಾರ ಒದಗಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಈ ನಿಟ್ಟಿನಲ್ಲಿ ಏತ್ತಿನಹೊಳೆ, ಕೆ.ಸಿ.ವ್ಯಾಲಿ, ಹೆಚ್‌ ಎನ್‌ ವ್ಯಾಲಿ ಹಾಗೂ ವೃಷಭಾವತಿ ವ್ಯಾಲಿಯಂತಹ ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

    ಗೊರವನಹಳ್ಳಿಯಲ್ಲಿ ಕೊರಟಗೆರೆ ತಾಲ್ಲೂಕಿನಲ್ಲಿ ಅಂತರ್ಜಲ ಅಭಿವೃದ್ದಿ ಸಲುವಾಗಿ ಎತ್ತಿನಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 62 ಕೆರೆಗಳಿಗೆ ನೀರನ್ನು ತುಂಬಿಸುವ ಕಾಮಗಾರಿಗೆ ಗೃಹ ಸಚಿವರಾದ ಪರಮೇಶ್ವರ್‌ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.


    Provided by

    ಎತ್ತಿನ ಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 285 ಕೋಟಿ ವೆಚ್ಚದಲ್ಲಿ 62 ಕೆರೆಗಳಿಗೆ ನೀರು ತುಂಬಿಸುವ ಈ ಮಹತ್ವದ ಕಾಮಗಾರಿಗಳಿಂದ ಕೊರಟಗೆರೆ ತಾಲೂಕಿನ ಅಂತರ್ಜಲ ವೃದ್ಧಿಸಲಿದೆ. ಈ ಕೆರೆಗಳಲ್ಲಿ ಸುಮಾರು 826 ಎಂಸಿಎಫ್ಟಿ ನಷ್ಟು ನೀರು ಸಂಗ್ರಹವಾಗುವುದರಿಂದ ತಾಲೂಕಿನ ಕುಡಿಯುವ ನೀರಿನ ಬವಣೆ ಗಣನೀಯವಾಗಿ ಇಳಿಕೆಯಾಗಲಿದೆ. ಇದರಲ್ಲಿ ನಮ್ಮ ಸಣ್ಣ ನೀರಾವರಿ ಇಲಾಖೆಯ 43 ಕೆರೆಗಳು ಸೇರಿವೆ. ಇವುಗಳ ಸಂಗ್ರಹಣಾ ಸಾಮರ್ಥ್ಯ1848.46 ಎಂ.ಸಿ.ಎಫ್ ಟಿ ಇದ್ದು, ಈ ಯೋಜನೆ ಮೂಲಕ ಇವುಗಳಿಗೆ 659.47 ಎಂಸಿಎಫ್ ಟಿ ನಷ್ಟು ನೀರನ್ನು ತುಂಬಿಸುವುದರಿಂದ ಕೊರಟಗೆರೆ ತಾಲೂಕಿನ ರೈತರ ನೆಮ್ಮದಿಯ ಬದುಕಿಗೆ ದಾರಿಯಾಗಲಿದೆ ಎಂದರು.

    ನಮ್ಮ ಸರ್ಕಾರದ ಗುರಿಯಂತೆ, ಎತ್ತಿನಹೊಳೆ ಯೋಜನೆ ಅಡಿ ಈಗಾಗಲೇ ತಿಪಟೂರು ತಾಲೂಕಿನ 105 ಕೆರೆಗಳು, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 131 ಕೆರೆಗಳ ನೀರು ತುಂಬಿಸುವ ಕಾಮಗಾರಿಗಳನ್ನು ಅಂತಿಮ ಹಂತಕ್ಕೆ ತಂದು, ಆ ಭಾಗದ ರೈತರು, ಜನರ ಮೊಗದಲ್ಲಿ ನಮ್ಮ ಸರ್ಕಾರ ಮಂದಹಾಸ ಮೂಡಿಸಿದೆ. ಮಧುಗಿರಿ ಗುರುತ್ವಾ ಕಾಲುವೆಯಿಂದ ಮಧುಗಿರಿ ತಾಲೂಕಿನಲ್ಲಿ 45 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳಿಗೂ ಈ ಎತ್ತಿನ ಯೋಜನೆ ಅಡಿ ತಾಂತ್ರಿಕ, ಆಡಳಿತಾತ್ಮಕ ಅನುಮೋದನೆ ಪಡೆದಿರುವುದಲ್ಲದೇ, ಕಾಮಗಾರಿಗಳೂ ಆರಂಭಿಸಿರುವುದು ಭವಿಷ್ಯದ ನೀರಿನಬವಣೆ ನೀಗಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಇಟ್ಟಿರುವ ದಿಟ್ಟ ಹೆಜ್ಜೆಗೆ ಸಾಕ್ಷಿಯಾಗಿದೆ. ಎತ್ತಿನಹೊಳೆ ಯೋಜನೆಯ ಸಮರ್ಪಕ ಅನುಷ್ಠಾನದ ಮೂಲಕ ಬಯಲು ಸೀಮೆಯ 7 ಜಿಲ್ಲೆಗಳ ನೀರಿನ ಬವಣೆಗೆ ಮುಕ್ತಿ ದೊರಕಿಸುವುದಂತೂ ಖಚಿತ. ಮುಖ್ಯವಾಗಿ,ಇದರ ಹೆಚ್ಚಿನ ಲಾಭ ತುಮಕೂರು ಜಿಲ್ಲೆಯ ರೈತರಿಗೂ ಆಗಲಿದೆ. ಈ ಮುಖ್ಯ ಕಾಲುವೆಯ ಉದ್ದ 262 ಕಿ.ಮೀಯಾಗಿದ್ದು, ಇದರಲ್ಲಿ ಸುಮಾರು 159 ಕಿ.ಮೀಯಷ್ಟು ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲೇ ಹಾದುಹೋಗುವುದರಿಂದ ಸುತ್ತಮುತ್ತ ರೈತರ ಕೃಷಿ ಚಟುವಟಿಕೆಗಳಿಗೂ, ಜನರ ಕುಡಿಯುವ ನೀರಿಗೂ  ಪರಿಹಾರ ದೊರೆಯಲಿದೆ ಎನ್ನುವುದು ಖುಷಿಯ ವಿಚಾರ ಎಂದರು.

    ಬಯಲುಸೀಮೆಯ ಜಿಲ್ಲೆಗಳಲ್ಲಿ ಜನರು ನೀರಿನ ಬವಣೆಯಿಂದ ತತ್ತರಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ಈಗಾಗಲೇ ಕೆಸಿ ವ್ಯಾಲಿ, ಹೆಚ್‌ ನ್‌ ವ್ಯಾಲಿಯಂತಹ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ತುಮಕೂರು ಜಿಲ್ಲೆಯಲ್ಲಿ ಕುಸಿದಿರುವ ಅಂತರ್ಜಲವನ್ನು ಅಭಿವೃದ್ದಿಗೊಳಿಸಿ, ವ್ಯವಸಾಯ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ತುಮಕೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ, ಆನೆ ಕಾಲು ರೋಗ, ಮಲೇರಿಯಾ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ…

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.