ತಿಪಟೂರು: ಬೇರೆ ಧರ್ಮಕ್ಕೂ ನಮ್ಮ ಧರ್ಮಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಈ ಬಗ್ಗೆ ಜನರಲ್ಲಿ ನಾವು ಅರಿವು ಮೂಡಿಸಬೇಕು. ನಮ್ಮದು ಬೇಡುವ ಸಮಾಜವಲ್ಲ ನೀಡುವ ಸಮಾಜ. ಮಠಮಾನ್ಯಗಳು ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕವಾಗಿ ಅನ್ನ ದಾಸೋಹ, ಅಕ್ಷರ ದಾಸೋಹದಿಂದಲೇ ಖ್ಯಾತಿ ಪಡೆದಿವೆ ಎಂದು ತಿಪಟೂರು ಶಾಸಕ ಕೆ. ಷಡಕ್ಷರಿ ಹೇಳಿದರು.
ತಿಪಟೂರು ನಗರದ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಮೈದಾನದಲ್ಲಿ ವೀರಶೈವ ಲಿಂಗಾಯತ ಸಂಘಟನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವೀರಶೈವ ಸಂಘದ ಅಧ್ಯಕ್ಷ ರೇಣುಕಾರಾಧ್ಯ ಮಾತನಾಡಿ, ತಾಲೂಕಿನಲ್ಲಿ ಮನೆಮನೆಗೂ ಹೋಗಿ ಸಂಘಟಿಸಲಾಗುವುದು, ಕುಟುಂಬದ ಒಬ್ಬರಾದರೂ ಸದಸ್ಯರಾಗಬೇಕು. ನಮ್ಮ ಸಮಾಜದ ಬಡವರು, ರೈತ, ಕಾರ್ಮಿಕರ ಸಮಸ್ಯೆ ಪರಿಹರಿಸಲು ನಮ್ಮ ಸಮಾಜ ಸಂಘಟಿತರಾಗಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾಧಿಕಾರಿ ಸೋಮಶೇಖರ್, ಸಮಾಜದ ಮುಖಂಡರಾದ ಅರಸೀಕೆರೆ ಬಸವರಾಜು ಜಿ.ವಿ.ಟಿ, ಚಲನಚಿತ್ರ ನಟರು ಮತ್ತು ನಿರ್ದೇಶಕರಾದ ಮನು, ನಾಕೇನಹಳ್ಳಿ ಸುರೇಶ್, ಮಾದಿಹಳ್ಳಿ ಪ್ರಕಾಶ್ ಸೇರಿದಂತೆ ಹಲವಾರು ವೀರಶೈವ ಸಮಾಜದ ಮುಖಂಡರುಗಳು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು