nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಬಹುಜನರಿಗೆ ಸೈದ್ಧಾಂತಿಕ ಧೈರ್ಯ ತುಂಬಿದ ಅಂಬೇಡ್ಕರ್ ವಾದಿ ಪಿ.ಡೀಕಯ್ಯ”: ಡಾ.ವೆಂಕಟಸ್ವಾಮಿ
    ರಾಜ್ಯ ಸುದ್ದಿ July 31, 2022

    “ಬಹುಜನರಿಗೆ ಸೈದ್ಧಾಂತಿಕ ಧೈರ್ಯ ತುಂಬಿದ ಅಂಬೇಡ್ಕರ್ ವಾದಿ ಪಿ.ಡೀಕಯ್ಯ”: ಡಾ.ವೆಂಕಟಸ್ವಾಮಿ

    By adminJuly 31, 2022No Comments2 Mins Read
    p dikaiha

    ಪದ್ಮುಂಜ: ಪಿ.ಡೀಕಯ್ಯರವರಿಗೆ ಹುಟ್ಟೂರ ಶ್ರದ್ಧಾಂಜಲಿ

    ಬೆಳ್ತಂಗಡಿ:  ಬಹುಜನ ಸಮಾಜಕ್ಕೆ ಸೈಸಮಾಜದಲ್ಲಿ ಮೌಲ್ಯಾಧಾರಿತ ಬದಲಾವಣೆಗಾಗಿ ಚಳುವಳಿಯಲ್ಲಿ ತೊಡಗಿದ್ದ ಪಿ.ಡೀಕಯ್ಯರವರು ಅಪ್ಪಟ ಅಂಬೇಡ್ಕರ್ ವಾದಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತರ ಮೇಲಾಗುತ್ತಿದ್ದ  ಶೋಷಣೆ, ದೌರ್ಜನ್ಯ, ಅನ್ಯಾಯ,ಅಸಮಾನತೆಗಳ ವಿರುದ್ಧ ಗಟ್ಟಿ ಧ್ವನಿ ಎತ್ತಿ ಹೋರಾಡಿ ದಲಿತ, ಹಿಂದುಳಿದ ಶೋಷಿತ ಸಮುದಾಯಗಳ ವಿಮೋಚನೆಗಾಗಿ  ಶ್ರಮಿಸಿ ರಾಜ್ಯಾದ್ಯಂತ ಸಾವಿರಾರು ಬೆಂಬಲಿಗರನ್ನು ಅಭಿಮಾನಿಗಳನ್ನು ಸಂಪಾದಿಸಿ ಚಳುವಳಿಯನ್ನು ಮುನ್ನಡೆಸುತ್ತಾ ಬಹುಜನ ಸಮಾಜದಲ್ಲಿ ಸೈದ್ಧಾಂತಿಕ ಧೈರ್ಯವನ್ನು ತುಂಬಿದವರು ಎಂದು ಹಿರಿಯ ಅಂಬೇಡ್ಕರ್ ವಾದಿ, ಪಿ.ಡೀಕಯ್ಯರವರ ಚಳುವಳಿಯ ಒಡನಾಡಿ ಸಮತಾ ಸೈನಿಕದಳ ಸ್ಥಾಪಕ , ಆರ್.ಪಿ.ಐ. ರಾಜ್ಯಾಧ್ಯಕ್ಷ ಡಾ.ವೆಂಕಟ ಸ್ವಾಮಿ ಹೇಳಿದರು.

    ಇತ್ತೀಚೆಗೆ ಪರಿನಿಬ್ಬಾಣ ಹೊಂದಿದ ಹಿರಿಯ ಅಂಬೇಡ್ಕರ್ ವಾದಿ, ಬಹುಜನ ಸಮಾಜ ಚಳುವಳಿಯ ನೇತಾರ ಪಿ.ಡೀಕಯ್ಯ ಅವರಿಗೆ ಪದ್ಮುಂಜ  ಸಂಗಮ್ ವಿಹಾರ್ ನಲ್ಲಿ ನಡೆದ ಹುಟ್ಟೂರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣಕಾರರಾಗಿ ಜು.30ರಂದು ಮಾತನಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಬತ್ತರ ದಶಕದಲ್ಲಿ ದಲಿತ ಸಂಘರ್ಷ ಸಮಿತಿ ಪ್ರಾರಂಭವಾದ ದಿನಗಳಲ್ಲಿ ಮಂಗಳೂರಿನಲ್ಲಿ ಹೋರಾಟಗಳನ್ನು ರೂಪಿಸುವುದು ಕಷ್ಟವೆಂದು ಕಾಣಿಸಿದಾಗ ಬೆಳ್ತಂಗಡಿ ತಾಲೂಕಿನಲ್ಲಿ  ಜಿಲ್ಲಾ ಕೇಂದ್ರವೆಂಬ ರೀತಿಯಲ್ಲಿ ಅನೇಕ ಹೋರಾಟಗಳ ನೇತೃತ್ವವಹಿಸಿಕೊಂಡು ಒಬ್ಬ ಹೋರಾಟಗಾರನಾಗಿ ರಾಜ್ಯ,  ರಾಷ್ಟ್ರಮಟ್ಟದಲ್ಲಿ ತಮ್ಮ ಸಂಘಟನಾ ಚತುರತೆಯಿಂದಲೂ ಜ್ಞಾನದಿಂದಲೂ ಗುರುತಿಸಿಕೊಂಡು ನಾಯಕರಾಗಿ ಬೆಳೆದ ಪಿ. ಡೀಕಯ್ಯ  ಅವರ ಅಗಲುವಿಕೆಯಿಂದ  ಕುಟುಂಬಕ್ಕೆ ಸಹಿಸಲಾಗದ ನೋವು,  ಬಹುಜನ ಸಮಾಜಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದರು.

    ಹಿರಿಯ ಸಾಮಾಜಿಕ ಚಿಂತಕ ,  ಹೋರಾಟಗಾರ ಲೋಲಾಕ್ಷ ಮಂಗಳೂರು ಅವರು ನುಡಿ ನಮನ ಸಲ್ಲಿಸುತ್ತಾ ಮಾತನಾಡಿ, ಬಹುಜನ ಸಮಾಜ ಚಳುವಳಿ ನೇತಾರ ಅಂಬೇಡ್ಕರ್ ವಾದಿ ಪಿ.ಡೀಕಯ್ಯ ಅವರ  ಸಾವಿನ ಸುತ್ತ ಇರುವ  ಸಂಶಯಗಳು ನಿವಾರಣೆಯಾಗಿ ಸಾವಿಗೆ ನ್ಯಾಯ ಸಿಗಲಿ ಎಂದರು.

    ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ, ನಿವೃತ್ತ ಮ್ಯಾನೇಜರ್ ತಿಮ್ಮಯ್ಯ ಗೌಡ , ಡಾ.ರಾಜಾರಾಮ್, ಎಲ್ ಐ ಸಿ ಅಧಿಕಾರಿ, ಬಿ.ಎಸ್.ಪಿ. ರಾಜ್ಯ ಮುಖಂಡ ಕಾಂತಪ್ಪ ಆಲಂಗಾರ್, ಪ.ಜಾ., ಪ.ಪಂ. ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ, ನ್ಯಾಯವಾದಿ ಶಿವಕುಮಾರ್ , ಬೆಳ್ತಂಗಡಿ ಠಾಣಾ  ಪೊಲೀಸ್ ವೆಂಕಪ್ಪ ಪಿ.ಎಸ್., ಹಿರಿಯರಾದ  ಬೀರಣ್ಣ ಸಾಧನ, ಅಣ್ಣು ಸಾಧನ, ಪೊಡಿಯ ಬಾಂಗೇರು, ಎಲ್ ಐ ಸಿ ಅಧಿಕಾರಿ ಮೋಹನ್ ರಾಮನಗರ, ಸಾಮಾಜಿಕ ಹೋರಾಟಗಾರ ಶೇಖರ್ ಎಲ್,  ಬಾಬು ಎಂ. ಬೆಳಾಲು  ಮುಂತಾದವರು  ನುಡಿ ನಮನ ಸಲ್ಲಿಸುತ್ತಾ ಪಿ.ಡೀಕಯ್ಯರವರ  ಆಶಯಗಳ ಈಡೇರಿಕೆಗೆ ಶ್ರಮಿಸೋಣ ಎಂದರು.

    ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕುಟುಂಬದ ಸದಸ್ಯರು ನುಡಿ ನಮನ ಸಲ್ಲಿಸಿದರು. ಬಂಗಾಡಿ ಕಾನದ – ಕಟದ ಜನ್ಮಭೂಮಿ ಶೋಧನಾ ಸಮಿತಿ ಗೌರವಾಧ್ಯಕ್ಷ ವೆಂಕಣ್ಣ ಕೊಯ್ಯೂರು, ಬಿ.ಎಸ್.ಪಿ ತಾಲೂಕು ಉಸ್ತುವಾರಿ ಸಂಜೀವ ನೀರಾಡಿ, ಬರಹಗಾರ ಸತೀಶ್ ಕಕ್ಯಪದವು ಉಪಸ್ಥಿತರಿದ್ದರು. ಅಚುಶ್ರೀ ಬಾಂಗೇರು ಕಾರ್ಯಕ್ರಮ ನಿರ್ವಹಿಸಿದರು.

     

    ಕಾರ್ಯಕ್ರಮಕ್ಕೆ  ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪಿ.ಡೀಕಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಣೆಯೊಂದಿಗೆ  ಗೌರವ ಸಲ್ಲಿಸಿ  ಅವರ  ಕುಟುಂಬಕ್ಕೆ ಸಾಂತ್ವನ ನೀಡಿದರು. ಈ ಸಂದರ್ಭ ಪಿ.ಡೀಕಯ್ಯ ಅವರ ನಿಗೂಢ ಸಾವಿನ ಬಗ್ಗೆ ನೀಡಿರುವ ದೂರಿಗೆ ಸಂಬಂಧಿಸಿ ಪ್ರಕರಣದ  ತನಿಖೆಯನ್ನು  ಚುರುಕುಗೊಳಿಸಲು  ಕ್ರಮಕೈಗೊಳ್ಳುವಂತೆ ಶಾಸಕರಲ್ಲಿ ಕುಟುಂಬದ ಸದಸ್ಯರು  ವಿನಂತಿಸಿಕೊಂಡಿದ್ದು ಈ ಬಗ್ಗೆ ಶಾಸಕರು ಭರವಸೆ ನೀಡಿದರು.

    admin
    • Website

    Related Posts

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ…

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.