nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಬಹುಜನರಿಗೆ ಸೈದ್ಧಾಂತಿಕ ಧೈರ್ಯ ತುಂಬಿದ ಅಂಬೇಡ್ಕರ್ ವಾದಿ ಪಿ.ಡೀಕಯ್ಯ”: ಡಾ.ವೆಂಕಟಸ್ವಾಮಿ
    ರಾಜ್ಯ ಸುದ್ದಿ July 31, 2022

    “ಬಹುಜನರಿಗೆ ಸೈದ್ಧಾಂತಿಕ ಧೈರ್ಯ ತುಂಬಿದ ಅಂಬೇಡ್ಕರ್ ವಾದಿ ಪಿ.ಡೀಕಯ್ಯ”: ಡಾ.ವೆಂಕಟಸ್ವಾಮಿ

    By adminJuly 31, 2022No Comments2 Mins Read
    p dikaiha

    Provided by
    Provided by

    ಪದ್ಮುಂಜ: ಪಿ.ಡೀಕಯ್ಯರವರಿಗೆ ಹುಟ್ಟೂರ ಶ್ರದ್ಧಾಂಜಲಿ

    ಬೆಳ್ತಂಗಡಿ:  ಬಹುಜನ ಸಮಾಜಕ್ಕೆ ಸೈಸಮಾಜದಲ್ಲಿ ಮೌಲ್ಯಾಧಾರಿತ ಬದಲಾವಣೆಗಾಗಿ ಚಳುವಳಿಯಲ್ಲಿ ತೊಡಗಿದ್ದ ಪಿ.ಡೀಕಯ್ಯರವರು ಅಪ್ಪಟ ಅಂಬೇಡ್ಕರ್ ವಾದಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತರ ಮೇಲಾಗುತ್ತಿದ್ದ  ಶೋಷಣೆ, ದೌರ್ಜನ್ಯ, ಅನ್ಯಾಯ,ಅಸಮಾನತೆಗಳ ವಿರುದ್ಧ ಗಟ್ಟಿ ಧ್ವನಿ ಎತ್ತಿ ಹೋರಾಡಿ ದಲಿತ, ಹಿಂದುಳಿದ ಶೋಷಿತ ಸಮುದಾಯಗಳ ವಿಮೋಚನೆಗಾಗಿ  ಶ್ರಮಿಸಿ ರಾಜ್ಯಾದ್ಯಂತ ಸಾವಿರಾರು ಬೆಂಬಲಿಗರನ್ನು ಅಭಿಮಾನಿಗಳನ್ನು ಸಂಪಾದಿಸಿ ಚಳುವಳಿಯನ್ನು ಮುನ್ನಡೆಸುತ್ತಾ ಬಹುಜನ ಸಮಾಜದಲ್ಲಿ ಸೈದ್ಧಾಂತಿಕ ಧೈರ್ಯವನ್ನು ತುಂಬಿದವರು ಎಂದು ಹಿರಿಯ ಅಂಬೇಡ್ಕರ್ ವಾದಿ, ಪಿ.ಡೀಕಯ್ಯರವರ ಚಳುವಳಿಯ ಒಡನಾಡಿ ಸಮತಾ ಸೈನಿಕದಳ ಸ್ಥಾಪಕ , ಆರ್.ಪಿ.ಐ. ರಾಜ್ಯಾಧ್ಯಕ್ಷ ಡಾ.ವೆಂಕಟ ಸ್ವಾಮಿ ಹೇಳಿದರು.

    ಇತ್ತೀಚೆಗೆ ಪರಿನಿಬ್ಬಾಣ ಹೊಂದಿದ ಹಿರಿಯ ಅಂಬೇಡ್ಕರ್ ವಾದಿ, ಬಹುಜನ ಸಮಾಜ ಚಳುವಳಿಯ ನೇತಾರ ಪಿ.ಡೀಕಯ್ಯ ಅವರಿಗೆ ಪದ್ಮುಂಜ  ಸಂಗಮ್ ವಿಹಾರ್ ನಲ್ಲಿ ನಡೆದ ಹುಟ್ಟೂರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣಕಾರರಾಗಿ ಜು.30ರಂದು ಮಾತನಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಬತ್ತರ ದಶಕದಲ್ಲಿ ದಲಿತ ಸಂಘರ್ಷ ಸಮಿತಿ ಪ್ರಾರಂಭವಾದ ದಿನಗಳಲ್ಲಿ ಮಂಗಳೂರಿನಲ್ಲಿ ಹೋರಾಟಗಳನ್ನು ರೂಪಿಸುವುದು ಕಷ್ಟವೆಂದು ಕಾಣಿಸಿದಾಗ ಬೆಳ್ತಂಗಡಿ ತಾಲೂಕಿನಲ್ಲಿ  ಜಿಲ್ಲಾ ಕೇಂದ್ರವೆಂಬ ರೀತಿಯಲ್ಲಿ ಅನೇಕ ಹೋರಾಟಗಳ ನೇತೃತ್ವವಹಿಸಿಕೊಂಡು ಒಬ್ಬ ಹೋರಾಟಗಾರನಾಗಿ ರಾಜ್ಯ,  ರಾಷ್ಟ್ರಮಟ್ಟದಲ್ಲಿ ತಮ್ಮ ಸಂಘಟನಾ ಚತುರತೆಯಿಂದಲೂ ಜ್ಞಾನದಿಂದಲೂ ಗುರುತಿಸಿಕೊಂಡು ನಾಯಕರಾಗಿ ಬೆಳೆದ ಪಿ. ಡೀಕಯ್ಯ  ಅವರ ಅಗಲುವಿಕೆಯಿಂದ  ಕುಟುಂಬಕ್ಕೆ ಸಹಿಸಲಾಗದ ನೋವು,  ಬಹುಜನ ಸಮಾಜಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದರು.


    Provided by
    Provided by

    ಹಿರಿಯ ಸಾಮಾಜಿಕ ಚಿಂತಕ ,  ಹೋರಾಟಗಾರ ಲೋಲಾಕ್ಷ ಮಂಗಳೂರು ಅವರು ನುಡಿ ನಮನ ಸಲ್ಲಿಸುತ್ತಾ ಮಾತನಾಡಿ, ಬಹುಜನ ಸಮಾಜ ಚಳುವಳಿ ನೇತಾರ ಅಂಬೇಡ್ಕರ್ ವಾದಿ ಪಿ.ಡೀಕಯ್ಯ ಅವರ  ಸಾವಿನ ಸುತ್ತ ಇರುವ  ಸಂಶಯಗಳು ನಿವಾರಣೆಯಾಗಿ ಸಾವಿಗೆ ನ್ಯಾಯ ಸಿಗಲಿ ಎಂದರು.

    ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ, ನಿವೃತ್ತ ಮ್ಯಾನೇಜರ್ ತಿಮ್ಮಯ್ಯ ಗೌಡ , ಡಾ.ರಾಜಾರಾಮ್, ಎಲ್ ಐ ಸಿ ಅಧಿಕಾರಿ, ಬಿ.ಎಸ್.ಪಿ. ರಾಜ್ಯ ಮುಖಂಡ ಕಾಂತಪ್ಪ ಆಲಂಗಾರ್, ಪ.ಜಾ., ಪ.ಪಂ. ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ, ನ್ಯಾಯವಾದಿ ಶಿವಕುಮಾರ್ , ಬೆಳ್ತಂಗಡಿ ಠಾಣಾ  ಪೊಲೀಸ್ ವೆಂಕಪ್ಪ ಪಿ.ಎಸ್., ಹಿರಿಯರಾದ  ಬೀರಣ್ಣ ಸಾಧನ, ಅಣ್ಣು ಸಾಧನ, ಪೊಡಿಯ ಬಾಂಗೇರು, ಎಲ್ ಐ ಸಿ ಅಧಿಕಾರಿ ಮೋಹನ್ ರಾಮನಗರ, ಸಾಮಾಜಿಕ ಹೋರಾಟಗಾರ ಶೇಖರ್ ಎಲ್,  ಬಾಬು ಎಂ. ಬೆಳಾಲು  ಮುಂತಾದವರು  ನುಡಿ ನಮನ ಸಲ್ಲಿಸುತ್ತಾ ಪಿ.ಡೀಕಯ್ಯರವರ  ಆಶಯಗಳ ಈಡೇರಿಕೆಗೆ ಶ್ರಮಿಸೋಣ ಎಂದರು.

    ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕುಟುಂಬದ ಸದಸ್ಯರು ನುಡಿ ನಮನ ಸಲ್ಲಿಸಿದರು. ಬಂಗಾಡಿ ಕಾನದ – ಕಟದ ಜನ್ಮಭೂಮಿ ಶೋಧನಾ ಸಮಿತಿ ಗೌರವಾಧ್ಯಕ್ಷ ವೆಂಕಣ್ಣ ಕೊಯ್ಯೂರು, ಬಿ.ಎಸ್.ಪಿ ತಾಲೂಕು ಉಸ್ತುವಾರಿ ಸಂಜೀವ ನೀರಾಡಿ, ಬರಹಗಾರ ಸತೀಶ್ ಕಕ್ಯಪದವು ಉಪಸ್ಥಿತರಿದ್ದರು. ಅಚುಶ್ರೀ ಬಾಂಗೇರು ಕಾರ್ಯಕ್ರಮ ನಿರ್ವಹಿಸಿದರು.

     

    ಕಾರ್ಯಕ್ರಮಕ್ಕೆ  ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪಿ.ಡೀಕಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಣೆಯೊಂದಿಗೆ  ಗೌರವ ಸಲ್ಲಿಸಿ  ಅವರ  ಕುಟುಂಬಕ್ಕೆ ಸಾಂತ್ವನ ನೀಡಿದರು. ಈ ಸಂದರ್ಭ ಪಿ.ಡೀಕಯ್ಯ ಅವರ ನಿಗೂಢ ಸಾವಿನ ಬಗ್ಗೆ ನೀಡಿರುವ ದೂರಿಗೆ ಸಂಬಂಧಿಸಿ ಪ್ರಕರಣದ  ತನಿಖೆಯನ್ನು  ಚುರುಕುಗೊಳಿಸಲು  ಕ್ರಮಕೈಗೊಳ್ಳುವಂತೆ ಶಾಸಕರಲ್ಲಿ ಕುಟುಂಬದ ಸದಸ್ಯರು  ವಿನಂತಿಸಿಕೊಂಡಿದ್ದು ಈ ಬಗ್ಗೆ ಶಾಸಕರು ಭರವಸೆ ನೀಡಿದರು.

    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಜೂನ್ 30) ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಂಗವಾಗಿ…

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.