ತುಮಕೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದ ಹೊರತಾಗಿಯೂ ಪಾಕಿಸ್ತಾನಿ ಪ್ರಜೆಗಳು ಭಾರತವನ್ನು ಬಿಟ್ಟು ಹೋಗದಿರುವುದನ್ನು ಖಂಡಿಸಿ ಇಂದು ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪಾಕಿಸ್ತಾನಿರೇ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.
ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————