nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೌರವ್ ಗುಪ್ತಾ ಅವರೇ, ಪಾಲಿಕೆ ಕಚೇರಿಗೆ ಬಿಜೆಪಿ ಬೋರ್ಡ್ ಹಾಕಿಕೊಳ್ಳಿ : ಡಿಕೆಶಿ
    ರಾಜ್ಯ ಸುದ್ದಿ March 2, 2022

    ಗೌರವ್ ಗುಪ್ತಾ ಅವರೇ, ಪಾಲಿಕೆ ಕಚೇರಿಗೆ ಬಿಜೆಪಿ ಬೋರ್ಡ್ ಹಾಕಿಕೊಳ್ಳಿ : ಡಿಕೆಶಿ

    By adminMarch 2, 2022No Comments4 Mins Read
    dk shivakumar

    ಇಡೀ ರಾಜ್ಯದ ಜನತೆ ಶಿವರಾತ್ರಿ ಆಚರಿಸುವ ಸಂದರ್ಭದಲ್ಲಿ ನಾವು ಬೆಂಗಳೂರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರ ಬದುಕಿನ ರಕ್ಷಣೆಗಾಗಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ನಾನು ಬೆಂಗಳೂರು ಜನರ ಕ್ಷಮೆ ಕೇಳಲು ಬಯಸುತ್ತೇನೆ. ಮುಂದಿನ 3 ದಿನ ಟ್ರಾಫಿಕ್ ಸಮಸ್ಯೆ ಎದುರಾಗಲಿದೆ. ಈ ಹೋರಾಟದಿಂದ ಮುಂದಿನ 50 ವರ್ಷ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಹೀಗಾಗಿ ನೀವು ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಬೆಂಗಳೂರಿನ ಜನರಿಗಾಗಿ ಪಾದಯಾತ್ರೆ ಮಾಡುತ್ತಿದ್ದು, ಎಲ್ಲರೂ ಈ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡುತ್ತೇನೆ. ಪಾದಯಾತ್ರೆಗೆ ಅಪಾಟ್ರ್ಮೆಂಟ್ ಸಂಘ, ಕೈಗಾರಿಕೆ, ಕಾರ್ಖಾನೆ ಸಂಘಗಳು ಎಲ್ಲರೂ ಪಕ್ಷಭೇಧ ಮರೆತು ಆಗಮಿಸಿದ್ದಾರೆ. ಎಲ್ಲ ಸಹಕಾರ ಕೊಟ್ಟಿದ್ದಾರೆ ಎಂದರು.ಮಾರ್ಚ್ 3ರಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದ್ದು ಇದರಲ್ಲಿ ಭಾಗವಹಿಸುವ ಎಲ್ಲ ಕಾರ್ಯಕರ್ತರು ಮೆಟ್ರೋ ಮೂಲಕ ಆಗಮಿಸಿ, ಮೆಟ್ರೋ ಮೂಲಕ ತೆರಳಬೇಕು ಎಂದು ಮನವಿ ಮಾಡುತ್ತೇನೆ ಎಂದರು.ಮಾ.3ರ ಅಂತಿಮ ದಿನದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಎಲ್ಲರಿಗೂ ಅವಕಾಶ ಇದ್ದು, ರಾಜ್ಯದ ಮೂಲೆ ಮೂಲೆಯಿಂದ ಎಲ್ಲರೂ ಪಾದಯಾತ್ರೆಗೆ ಬಂದು ಹೆಜ್ಜೆ ಹಾಕಬಹುದು. ಅಂದು ಅರಮನೆ ಮೈದಾನದಿಂದ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು.

    ನಮ್ಮ ಪಾದಯಾತ್ರೆ ಈಗ ಬೆಂಗಳೂರು ನಗರ ಪ್ರವೇಶಿಸಿದೆ. ಪೊಲೀಸ್ ಅಧಿಕಾರಿಗಳು, ಪಾಲಿಕೆ ಜಂಟಿ ಆಯುಕ್ತರು ಹಾಗೂ ಅಧಿಕಾರಿಗಳು ನಮ್ಮ ಬ್ಯಾನರ್ ಕಿತ್ತು ಹಾಕಿದ್ದಾರೆ. ನಮ್ಮ ಕೆಲ ನಾಯಕರು ಅದನ್ನು ತಡೆದಿದ್ದಾರೆ. ರಾಜಕೀಯ ದ್ವೇಷದಿಂದ ನಿರ್ಬಂಧ ಹಾಕಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪನವರ ಹುಟ್ಟುಹಬ್ಬ, ಅಶ್ವತ್ಥ್ ನಾರಾಯಣ, ಸೋಮಣ್ಣನವರ ಹುಟ್ಟುಹಬ್ಬ, ಬೊಮ್ಮನಹಳ್ಳಿಯಲ್ಲಿ ಸಿಎಂ ಕಾರ್ಯಕ್ರಮ ಆಯೋಜಿಸಿ ಬ್ಯಾನರ್ ಹಾಕಿದ್ದಾರೆ. ಇವರಿಗೆಲ್ಲ ಅನುಮತಿ ಕೊಟ್ಟವರು ಯಾರು? ಅವರಿಗೆ ಕಾನೂನು ಅನ್ವಯ ಆಗುವುದಿಲ್ಲವೇ? ಎಂದು ಪ್ರಶ್ನಿಸಿದರು.

    ಗೌರವ್ ಗುಪ್ತಾ ಅವರೇ ಪಾಲಿಕೆ ಕಚೇರಿಗೆ ಬಿಜೆಪಿ ಕಚೇರಿ ಎಂದು ಬೋರ್ಡ್ ಹಾಕಿಕೊಳ್ಳಿ. ಆಗ ನಾವು ಬಿಜೆಪಿ ಕಚೇರಿ ಎಂದು ಸಂತೋಷ ಪಡುತ್ತೇವೆ. ನಮ್ಮ ಕಾರ್ಯಕರ್ತರು ಬ್ಯಾನರ್ ಗಳನ್ನು ಒಂದು ದಿನ ಹಾಕಿ ನಂತರ ಅದನ್ನು ಬಿಚ್ಚಿ ಹಾಕುತ್ತಾರೆ. ನಾವು ಬಲೂನ್ ಮೂಲಕ ಆಕಾಶದಲ್ಲಿ ಬ್ಯಾನರ್ ಹಾರಿಸುತ್ತಿದ್ದು, ಅದನ್ನು ತಡೆಯಲು ನಿಮ್ಮಿಂದ ಸಾಧ್ಯವಿಲ್ಲ ಎಂದರು.

    ನಮ್ಮ ಹೋರಾಟದ ಬಗ್ಗೆ ಟೀಕೆ ಮಾಡುವವರ ಟೀಕೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತಿದ್ದೇವೆ ಎಂದ ಅವರು, ಮುಖ್ಯಮಂತ್ರಿಗಳು ಬಜೆಟ್ ಮಂಡನೆ ಮಾಡಲು ಸಹಕಾರ ನೀಡಬೇಕು ಎಂದು ಐದು ದಿನಗಳ ಪಾದಯಾತ್ರೆಯನ್ನು, ಮೂರು ದಿನಗಳಿಗೆ ಇಳಿಸಿದ್ದೇವೆ ಎಂದು ಹೇಳಿದರು.
    ನಿನ್ನೆಯ ಪಾದಯಾತ್ರೆಗೆ ಮುರುಘಾಮಠದ ಶ್ರೀಗಳು ಹಾಗೂ ಇತರ ಸ್ವಾಮೀಜಿಗಳು ಬೆಂಬಲ ನೀಡಿ ಆಶೀರ್ವಾವದಸಿದ್ದಾರೆ. ವಿಶೇಷವಾಗಿ ಮುರುಘಾಮಠದ ಶ್ರೀಗಳು ಹಾಗೂ ಎಲ್ಲರಿಗೂ ಅಭಿನಂದನೆಗಳು ತಿಳಿಸುತ್ತಿದ್ದೇನೆ ಎಂದರು.

    ಕಾಂಗ್ರೆಸ್ ಹೋರಾಟದಿಂದ ಸುಪ್ರೀಂಕೋರ್ಟ್ ಹೋರಾಟದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಲಿದೆ ಎಂಬ ಗೋವಿಂದ ಕಾರಜೋಳ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಡಿಯುವ ನೀರಿನ ಯೋಜನೆಗೆ ಯಾವುದೇ ಅಡ್ಡಿ ಇಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ನಾವು ಜಲಸಂಪನ್ಮೂಲ ಸಚಿವರಾಗಿದ್ದು, ನಮಗೂ ಅಲ್ಪ ಸ್ವಲ್ಪ ಪರಿಜ್ಞಾನ ಇದೆ.

    ಗೋವಿಂದ ಕಾರಜೋಳ ಅವರು ತಮ್ಮ ಅಧಿಕಾರಿಗಳನ್ನು ಕರೆದುಕೊಂಡು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಿ. ಅವರಿಗೆ ಹೋರಾಟ ಮಾಡಿ ಗೊತ್ತಿಲ್ಲ. ಆಡ್ವಾಣಿ ಅವರು ರಥಯಾತ್ರೆ ಮಾಡಿದ್ದು ಬಿಟ್ಟರೆ ಅವರು ಬೇರೆ ಹೋರಾಟ ಮಾಡಿಲ್ಲ. ಆದರೆ ನಮಗೆ ಮಹಾತ್ಮಾ ಗಾಂೀಧಿಜಿ ಅವರು ಅಹಿಂಸಾ ಮಾರ್ಗದ ಹೋರಾಟ ಹೇಳಿಕೊಟ್ಟಿದ್ದು ಅದು ನಮ್ಮ ರಕ್ತದ ಕಣಗಳಲ್ಲೇ ಬಂದಿದೆ ಎಂದು ತಿರುಗೇಟು ನೀಡಿದರು.

    ಕೋವಿಡ್ ನಿರ್ಬಂಧ ಹಿಂಪಡೆಯುವಂತೆ ಕೇಂದ್ರ ಸರ್ಕಾರ ಆದೇಶ ಮಾಡಿದ್ದರೂ ರಾಜ್ಯ ಸರ್ಕಾರ ಅದನ್ನು ಪಾಲಿಸದ ಬಗ್ಗೆ ಕೇಳಿದ ಪ್ರಶ್ನೆಗೆ, ಬಿಜೆಪಿಯವರಿಗೆ ರಾಜಕಾರಣ ಮುಖ್ಯ. ನಮ್ಮ ಹೋರಾಟ ನಿಲ್ಲಿಸಲು ಈ ರೀತಿ ಮಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಇಲ್ಲದ ಅಧಿಸೂಚನೆ ನಾವು ರಾಜಕೀಯ ಸಮಾವೇಶ ಮಾಡುವಂತಿಲ್ಲ ಎಂದು ಕೊಟ್ಟಿದ್ದಾರೆ.

    ಅವರು ಶಿವಮೊಗ್ಗದಲ್ಲಿ ಮೆರವಣಿಗೆ ಮಾಡಲಿಲ್ಲವೇ? ಬಜರಂಗದಳದವರು ಹಾಗೂ ಬಿಜೆಪಿಯವರು ಟೌನ್ ಹಾಲ್ ಬಳಿ ಯಾಕೆ ಸಮಾವೇಶ ಮಾಡಿದರು? ಇಂದು ಬೊಮ್ಮನಹಳ್ಳಿಯಲ್ಲಿ ಕ್ರೀಡಾಂಗಣ ಉದ್ಘಾಟನೆ ಮಾಡುತ್ತಿರುವುದೇಕೆ? ನಮಗೆ ಮಾತ್ರ ಈ ನಿರ್ಬಂಧ ಯಾಕೆ? ಈ ಕೇಸ್, ಜೈಲಿಗೆಲ್ಲ ನಾವು ಹೆದರುವುದಿಲ್ಲ.

    ರಾಜ್ಯದಲ್ಲಿ ಅವರು ಏನೆಲ್ಲಾ ಮಾಡಿದ್ದಾರೆ ಎಂದು ಕಾರ್ಯಕರ್ತರಿಂದ ಪಟ್ಟಿ ತರಿಸಿ ಅವರ ಮುಂದೆ ಇಡುತ್ತೇನೆ. ಈ ವಿಚಾರವಾಗಿಯೇ ಹೋರಾಟ ಮಾಡುತ್ತೇವೆ. ಪೆÇಲೀಸ್ ಅಕಾರಿಗಳು ಸಮವಸ್ತ್ರ ತೆಗೆದು ಬಿಜೆಪಿಯವರ ಬಟ್ಟೆ ತೊಟ್ಟುಕೊಳ್ಳಲಿ. ಪೊಲೀಸ್ ಅಧಿಕಾರಿಗಳು ಒಂದು ವಿಚಾರ ಗಮನದಲ್ಲಿಟ್ಟುಕೊಳ್ಳಲಿ, ಸೂರ್ಯ ಹುಟ್ಟುತ್ತಾನೆ ಮುಳುಗುತ್ತಾನೆ, ಇವರುಗಳು ಯಾರೂ ಶಾಶ್ವತವಾಗಿ ಇರುವುದಿಲ್ಲ.

    ನಮಗೆ ತೊಂದರೆ ನೀಡುತ್ತಿರುವ ಪೊಲೀಸರ ಪಟ್ಟಿ ನಮ್ಮ ಬಳಿ ಇದೆ. ಸಮಯ ಬಂದಾಗ ಉತ್ತರ ನೀಡುತ್ತೇನೆ. ನಮಗೆ ತೊಂದರೆ ನೀಡಬೇಕು ಅಂತಲೇ ಕೇಸ್ ದಾಖಲಿಸುತ್ತಿದ್ದಾರೆ. ಪಾದಯಾತ್ರೆಯಲ್ಲಿ ಕೇವಲ 40 ಜನ ಮಾತ್ರ ಭಾಗವಹಿಸಿದ್ದೇವೆಯೇ? ಭಾಗವಹಿಸಿರುವ ಎಲ್ಲ 10 ಸಾವಿರ ಜನರ ಪಟ್ಟಿ ನೀಡುತ್ತೇವೆ ಕೇಸ್ ದಾಖಲಿಸಲಿ ಎಂದು ಎಚ್ಚರಿಸಿದರು.ಶಿವಮೊಗ್ಗದಲ್ಲಿ ಸ್ಥಳೀಯ ಶಾಸಕರಾದ ಕಾರಣ ಈಶ್ವರಪ್ಪ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಹೋಗಿದ್ದರು ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಅವರ ಸಮರ್ಥನೆ ಬಗ್ಗೆ ಕೇಳಿದ ಪ್ರಶ್ನೆಗೆ, ¿ಆತ ಗೃಹ ಸಚಿವ ಸ್ಥಾನಕ್ಕೆ ಅನರ್ಹ. ಅವರು ಸ್ಥಳೀಯ ಶಾಸಕರಾಗಿದ್ದರೆ ನೇರವಾಗಿ ಅವರ ಮನೆಗೆ ಹೋಗಿ ಸಾಂತ್ವಾನ ಹೇಳಬೇಕು. ನಿಷೇಧಾಜ್ಞಾ ಇದ್ದರೂ ಮೆರವಣಿಗೆ ಮಾಡಿದ್ದೇಕೆ. ಎಲ್ಲ ಗಲಭೆಗೂ ಅವರೇ ಕಾರಣ¿ ಎಂದರು.

    ಹತ್ಯೆಯಾದ ಹರ್ಷ ಮನೆಗೆ ಕಾಂಗ್ರೆಸ್ ನಾಯಕರು ಹೋಗಿಲ್ಲ ಎಂಬ ಟೀಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ¿ನಾವು ಯಾರಿಂದಲೂ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ನಾನು ನಮ್ಮ ಜಿಲ್ಲಾಧ್ಯಕ್ಷರ ಜತೆ ಮಾತನಾಡಿದ್ದೇನೆ. ಈ ಎಲ್ಲ ಹೋರಾಟ ಮುಗಿದ ಬಳಿಕ ನಾನೂ ಕೂಡ ಆ ಯುವಕನ ಮನೆಗೆ ಹೋಗಿ ಭೇಟಿ ನೀಡುತ್ತೇನೆ. ಆತನು ನಮ್ಮ ಹುಡುಗ, ತಪ್ಪುಗಳಾಗಿರಬಹುದು ಆದರೆ ಯಾರೂ ಯಾರನ್ನು ಹತ್ಯೆ ಮಾಡಬಾರದು. ಕಾನೂನಿನಲ್ಲಿ ಅದಕ್ಕೆ ಅವಕಾಶ ಇಲ್ಲ. ನಾವು ಅದನ್ನು ಖಂಡಿಸುತ್ತೇವೆ ಎಂದರು.

    ಡಿ.ಕೆ. ಶಿವಕುಮಾರ್ ಪಾದಯಾತ್ರೆ ಮೂಲಕ ಅವರ ಅಕ್ರಮ ಹಣವನ್ನು ಪ್ರದರ್ಶಿಸುತ್ತಿದ್ದಾರೆ, ಬಿರಿಯಾನಿ ತಿಂದು ಪಾದಯಾತ್ರೆ ಮಾಡುವುದು ಯಾವ ಹೋರಾಟ ಎಂಬ ಶ್ರೀನಿವಾಸ ಪ್ರಸಾದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ನಾನು ಶ್ರೀನಿವಾಸ್ ಪ್ರಸಾದ್ ಅವರ ಬಳಿ ಹೋಗಿ ಅವರ ಹಿತವಚನ ಕೇಳಿ, ಕಳಿತುಕೊಳ್ಳುತ್ತೇನೆ ಎಂದರು.

    ಬೆಳ್ತಂಗಡಿಯಲ್ಲಿ ಹತ್ಯೆಯಾದ ದಲಿತ ಯುವಕನ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ¿ಹತ್ಯೆಯಾದ ಯುವಕನ ಮನೆಗೆ ಹೋಗುವುದಿರಲಿ, ಸರಿಯಾಗಿ ಪ್ರಕರಣ ದಾಖಲಿಸಿ ಕ್ರಮವನ್ನೇ ಕೈಗೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ಪೊಲೀಸರು ಖಾಕಿ ಸಮವಸ್ತ್ರ ತ್ಯಜಿಸಿ ಬಿಜೆಪಿ ಬಟ್ಟೆ ಧರಿಸಲಿ ಎಂದರು.

    ಬೆಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು ನಿಯೋಜನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಪೊಲೀಸ್ ಅವರನ್ನಾದರೂ ನಿಯೋಜಿಸಲಿ, ಕಾರ್ಯಕರ್ತರನ್ನಾದರೂ ನಿಯೋಜಿಸಲಿ. ನಾವು ಶಾಂತಿಪ್ರಿಯರು, ನೀರಿಗಾಗಿ ಹೆಜ್ಜೆ ಹಾಕುತ್ತಿದ್ದು. ಅವರ ಕರ್ತವ್ಯ ಅವರು ಮಾಡಲಿ ನಮ್ಮ ಅಭ್ಯಂತರವಿಲ್ಲ ಎಂದು ಹೇಳಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

     

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.