ಕೊರಟಗೆರೆ : ತಾಲ್ಲೂಕಿನ ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಳಲಸಂದ್ರ ಗ್ರಾಮದ ಕೊಳಗದಮ್ಮ ಮತ್ತು ವಡಸಲಮ್ಮ ದೇವಿಯ ದೇವಸ್ಥಾನ ಅಭಿವೃದ್ಧಿಗೆ ಮುಂದಾದ ಭಕ್ತರು, ದೇವಸ್ಥಾನ ನಿರ್ಮಾಣಕ್ಕಾಗಿ 5 ಹಳ್ಳಿ ಗ್ರಾಮಸ್ಥರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಅಗಮಿಸುತ್ತಿದ್ದಾರೆ.
ಕೊಳಗದಮ್ಮ ಸೇವಾ ಸಮಿತಿಯ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವುಳ್ಳ ವಡಸಲಮ್ಮ ದೇವಿಯು ಅತ್ಯಂತ ಶಕ್ತಿಶಾಲಿಯಾಗಿದ್ದು ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾ, ಸಾವಿರಾರು ಭಕ್ತಾದಿಗಳ ನಂಬಿಕೆಗೆ ಪಾತ್ರಳಾಗಿದ್ದಾಳೆ. ಭಕ್ತರ ಸಹಾಯದಿಂದ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಮಾಡಲು ಮುಂದಾಗಿದ್ದು. ದೇವಸ್ಥಾನ ಅಭಿವೃದ್ಧಿಗಾಗಿ ಐದು ಹಳ್ಳಿಯ ಪಣಗಾರರಾದ ರಾಮೇಗೌಡ್ರು ಹಾಗೂ ಕಮಲಮ್ಮನವರ ಕುಟುಂಬದ ಮಕ್ಕಳು ಮೊಮ್ಮಕ್ಕಳು ಇಂದು ಹತ್ತು ಲಕ್ಷದ ಒಂದು ರೂ. ಗಳನ್ನು ದೇವಾಲಯದ ನಿರ್ಮಾಣಕ್ಕಾಗಿ ದೇಣಿಗೆ ರೂಪದಲ್ಲಿ ಹಣ ನೀಡಿದ್ದಾರೆ, ಮುಂದಿನ ದಿನಗಳಲ್ಲಿ ದೇವಸ್ಥಾನ ಇನ್ನು ಹೆಚ್ಚು ಅಭಿವೃದ್ಧಿಯಾಗಲಿ ಎಂದರು.
ನಟ ಅರ್ಜುನ್ ಯೋಗಿ ಮಾತನಾಡಿ, ವಡಸಲಮ್ಮ ದೇವಿಯ ದೇವಾಲಯವು ಈಗಾಗಲೇ ಒಂದು ಹಂತಕ್ಕೆ ತಲುಪಿದ್ದು, ನಮ್ಮ ಹಿರಿಯರ ಕಾಲದಿಂದಲೂ ಮೂರು ವರ್ಷಕ್ಕೊಮ್ಮೆ ಜಾತ್ರೆ ಮಾಡುತ್ತಾ ಬಂದಿದ್ದಾರೆ. ನಾವು ಯಾವುದೇ ಕೆಲಸ ಕಾರ್ಯಗಳನ್ನು ಆರಂಭಕ್ಕೂ ಮುನ್ನ ಈ ತಾಯಿಗೆ ಪೂಜೆ ಮಾಡಿ ನಂತರ ಕಾರ್ಯಗಳನ್ನು ಆರಂಭಿಸುತ್ತೇವೆ. ಪ್ರತಿ ಮಂಗಳವಾರ ಹಾಗೂ ಶುಕ್ರವಾರ ದಿನದಂದು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ವಿಶೇಷ ಪೂಜಾ ಕಾರ್ಯಕ್ರಮಗಳು ಮತ್ತು ಅನ್ನ ದಾಸೋಹ ಏರ್ಪಡಿಸಲಾಗಿರುತ್ತದೆ.
ದೇವಾಲಯದ ನಿರ್ಮಾಣಕ್ಕೆ ಇನ್ನು ಹೆಚ್ಚಿನ ಹಣದ ಅವಶ್ಯಕತೆ ಇದ್ದು, ಭಕ್ತರು ತನು ಮನ ಧನ ಸಹಾಯ ಮಾಡಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಮಿತಿ ಉಪಾಧ್ಯಕ್ಷ ತಿಮ್ಮೇಗೌಡ, ಕಾರ್ಯದರ್ಶಿ ಎಚ್.ವಿ.ನಾಗರಾಜು, ಖಜಾಂಚಿ ನಾಗಣ್ಣ, ಮಾಜಿ ತಾ.ಪಂ ಸದಸ್ಯ ಶ್ರೀನಿವಾಸ್ ಮೂರ್ತಿ, ವೆಂಕಟಪುರ ಮಂಜಣ್ಣ, ಸೇರಿದಂತೆ ಸಮಿತಿ ನಿರ್ದೇಶಕರ ಜೊತೆಗೆ ಗ್ರಾಮಸ್ಥರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW