nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025
    Facebook Twitter Instagram
    ಟ್ರೆಂಡಿಂಗ್
    • ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ
    • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
    • ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು
    • ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್
    • ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ
    • ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ
    • ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಛೇರಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ!
    • ತೋಟಗಾರಿಕೆ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಹಾನಿ: ಪರಿಹಾರ ಬೇಕಾದರೆ, 60 ಸಾವಿರ ಲಂಚಕೊಡಬೇಕು | ಕೊತ್ತೇಗಾಲ ಗ್ರಾಮಸ್ಥರಿಂದ ಗಂಭೀರ ಆರೋಪ
    ಸ್ಪೆಷಲ್ ನ್ಯೂಸ್ December 15, 2021

    ಮಳೆಹಾನಿ: ಪರಿಹಾರ ಬೇಕಾದರೆ, 60 ಸಾವಿರ ಲಂಚಕೊಡಬೇಕು | ಕೊತ್ತೇಗಾಲ ಗ್ರಾಮಸ್ಥರಿಂದ ಗಂಭೀರ ಆರೋಪ

    By adminDecember 15, 2021No Comments2 Mins Read
    kottegala

    ಸರಗೂರು:  ಮಳೆಯಿಂದ ಹಾನಿಗೊಳಗಾದ ಮನೆ ದುರಸ್ತಿಗೆ ಪರಿಶೀಲನೆಗೆ ಬರುವ ಗ್ರಾಮ ಲೆಕ್ಕಿಗರು 60ರಿಂದ 80 ಸಾವಿರ ರೂಪಾಯಿ ಹಣ ಲಂಚ ನೀಡಬೇಕು ಎಂದು ಬೇಡಿಕೆಯಿಡುತ್ತಿದ್ದಾರೆ ಎಂದು ಆರೋಪಿಸಿ, ಕೊತ್ತೇಗಾಲ ಗ್ರಾಮಸ್ಥರು ತಾಲ್ಲೂಕು ಕಛೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

    ಈ ಸಂಬಂಧ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ತಹಸೀಲ್ದಾರ್ ಚಲುವರಾಜು ರವರಿಗೆ ಮನವಿ ಪತ್ರ ಸಲ್ಲಿಸಿದರು.


    Provided by

    ತಾಲ್ಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ಉಂಟಾದ ಭಾರಿ ಮಳೆಯಿಂದಾಗಿ ಸಾಕಷ್ಟು ಮನೆಯ ಗೋಡೆಗಳು, ಮೇಲ್ಚಾವಣಿಗಳು ಕುಸಿದು ಹೋಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಹಾನಿಯುಂಟಾಗಿತ್ತು. ಗ್ರಾಮಸ್ಥರು ಸಹ ಪ್ರವಾಹ ಪೀಡಿತ ಯೋಜನೆಯ ಅಡಿಯಲ್ಲಿ ಪರಿಹಾರವನ್ನು ನೀಡಿ ಮನೆಗಳ ದುರಸ್ತಿಗೆ ಸಹಕರಿಸುವಂತೆ ಕೋರಿ ಅರ್ಜಿಗಳನ್ನು ಸಹ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು.

    kottegala

    ಆ ಸಂಬಂಧ ಪರಿಶೀಲನೆಗೆ ಬಂದಿದ್ದ ಗ್ರಾಮ ಲೆಕ್ಕಿಗರು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿರುವ ಸುಮಾರು 20 ಮನೆಗಳನ್ನು ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಅಲ್ಲದೇ ಕೆಲವರ ಬಳಿ ಹಣ ಪಡೆದು ಅವರನ್ನು ಫಲಾನುಭವಿಗಳ ಪಟ್ಟಿಗೆ ಸೇರಿಸಿದ್ದಾರೆ. ಉಳಿದ 20 ಮನೆಯ ಫಲಾನುಭವಿಗಳ ಹೆಸರನ್ನು ಸೇರಿಸಲು 60-80 ಸಾವಿರ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಬುಧವಾರ ಗ್ರಾಮಸ್ಥರು ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟಿಸಿ ದಂಡಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಆಗ್ರಹಿಸಿದರು.  ಪ್ರತಿಭಟನೆ ವೇಳೆ ಮಾತನಾಡಿದ ಗ್ರಾಮದ ಮುಖಂಡ ಬಸವಣ್ಣ, ನಮ್ಮ ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಯಾಗಿದ್ದ ಮನೆಗಳ ಪರಿಹಾರಕ್ಕೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಆದರೆ ಪರಿಶೀಲನೆಗೆ ಬಂದ ಗ್ರಾಮ ಲೆಕ್ಕಿಗರು ಕೆಲವರ ಬಳಿ 70-80 ಸಾವಿರ ಹಣವನ್ನು ಪಡೆದು ಅವರನ್ನು ಫಲಾನುಭವಿಗಳ ಪಟ್ಟಿಗೆ ಸೇರಿಸಿದ್ದಾರೆ. ಆದರೆ ಬಡವರನ್ನು ಕೈ ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

    ಮೊದಲು ಬಡವರಿಗೆ ಆದ್ಯತೆ ಕೊಡುವಂತಾಗಬೇಕು. ಈ ಬಗ್ಗೆ ತನಿಖೆ ನಡೆಸಿ ಬಡರಿಗೆ ಮನೆಗಳನ್ನು ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಕಳೆದ ಬಾರಿಯೂ ಸಹ ಈ ಬಗ್ಗೆ ತಹಸೀಲ್ದಾರ್ ರವರಿಗೆ ಮನವಿ ಮಾಡಲಾಗಿದೆ. ಆದರೂ ಯಾವುದೇ ಪ್ರಯೋಜನವಾಗದೆ ತನಿಖೆ ನಡೆಸುವಂತೆ ಆಗ್ರಹಿಸಿ ಈ ಬಾರಿ ಪ್ರತಿಭಟಿಸಿ ಇಂದು ತಹಸೀಲ್ದಾರ್‍ರವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಇದು ಕೇವಲ ನಮ್ಮ ಗ್ರಾಮದ ಸಮಸ್ಯೆ ಮಾತ್ರವಲ್ಲ ಇದು ನಮ್ಮ ತಾಲ್ಲೂಕಿನ ಸಾಕಷ್ಟು ಗ್ರಾಮ ಪಂಚಾಯಿತಿಗಳ ಸಮಸ್ಯೆಯಾಗಿದೆ ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

    ಮನವಿಯನ್ನು ಸ್ವೀಕರಿಸಿ ಬಳಿಕ ಮಾತನಾಡಿದ ತಹಸೀಲ್ದಾರ್ ಚಲುವರಾಜು, ಈ ಮನವಿಯ ಕುರಿತಂತೆ ಕಾನೂನಾತ್ಮಕವಾಗಿ ತನಿಖೆ ನಡೆಸಲಾಗುವುದು. ಇದು ಯಾರಿಗೂ ಮನೆ ಹಂಚಿಕೆಯ ಯೋಜನೆಯಲ್ಲ ಬದಲಿಗೆ ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸುವುದಾಗಿದೆ. ಅರ್ಜಿಗಳು ಬಂದ ಸ್ಥಳಕ್ಕೆ ಗ್ರಾಮ ಲೆಕ್ಕಿಗರು ಭೇಟಿ ಮಾಡಿ ಹಾನಿಯ ಪ್ರಮಾಣವನ್ನು ನೋಡಿ ಅದಕ್ಕನುಗುವಾಗಿ ಪರಿಹಾರದ ಪಟ್ಟಿಗೆ ಸೇರಿಸಬೇಕು. ಆದರೆ ಇದರಲ್ಲಿ ಲೋಪವಾಗಿದೆ ಎಂದು ಕೊತ್ತೇಗಾಲ ಗ್ರಾಮದಿಂದ ಬಂದಿರುವ ದೂರಿನ ಅನ್ವಯ ಗ್ರಾಮ ಲೆಕ್ಕಿಗರಿಗೆ ನೋಟಿಸ್ ನೀಡಿ ಘಟನೆಯ ಕುರಿತಂತೆ ಅವರಿಂದ ಉತ್ತರ ಪಡೆದು ಬಳಿಕ ಕಾನೂನಿನ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಒಂದು ವೇಳೆ ಲೋಪ ಕಂಡುಬಂದಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

    ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಶೋಭ, ಗ್ರಾಮಸ್ಥರಾದ ರಾಮಚಂದ್ರ, ಆದಿರಾಜಪ್ಪ, ನಾಗಗೌಡ, ಬಿ.ನಾಗರರಾಜು, ಬಸವರಾಜು, ದೇವಮಣಿ, ನಾಗಮ್ಮ, ರತ್ನಮ್ಮ, ಶಿವಮ್ಮ, ಬೀರೇಗೌಡ, ಮಲ್ಲೇಗೌಡ, ಪ್ರಭುಸ್ವಾಮಿ, ಹರೀಶ, ಶಂಕರೇಗೌಡ, ಗಿರೀಶ್, ಶಿವು ಮುಂತಾದವರು ಹಾಜರಿದ್ದರು.

    ವರದಿ: ಚಂದ್ರಹಾದನೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025

    ರೈಲಿನಿಂದ ಹಳಿಯ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವು!

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.…

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025

    ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್

    June 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.