nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಹಾನಿ: ಪರಿಹಾರ ಬೇಕಾದರೆ, 60 ಸಾವಿರ ಲಂಚಕೊಡಬೇಕು | ಕೊತ್ತೇಗಾಲ ಗ್ರಾಮಸ್ಥರಿಂದ ಗಂಭೀರ ಆರೋಪ
    ಸ್ಪೆಷಲ್ ನ್ಯೂಸ್ December 15, 2021

    ಮಳೆಹಾನಿ: ಪರಿಹಾರ ಬೇಕಾದರೆ, 60 ಸಾವಿರ ಲಂಚಕೊಡಬೇಕು | ಕೊತ್ತೇಗಾಲ ಗ್ರಾಮಸ್ಥರಿಂದ ಗಂಭೀರ ಆರೋಪ

    By adminDecember 15, 2021No Comments2 Mins Read
    kottegala

    ಸರಗೂರು:  ಮಳೆಯಿಂದ ಹಾನಿಗೊಳಗಾದ ಮನೆ ದುರಸ್ತಿಗೆ ಪರಿಶೀಲನೆಗೆ ಬರುವ ಗ್ರಾಮ ಲೆಕ್ಕಿಗರು 60ರಿಂದ 80 ಸಾವಿರ ರೂಪಾಯಿ ಹಣ ಲಂಚ ನೀಡಬೇಕು ಎಂದು ಬೇಡಿಕೆಯಿಡುತ್ತಿದ್ದಾರೆ ಎಂದು ಆರೋಪಿಸಿ, ಕೊತ್ತೇಗಾಲ ಗ್ರಾಮಸ್ಥರು ತಾಲ್ಲೂಕು ಕಛೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

    ಈ ಸಂಬಂಧ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ತಹಸೀಲ್ದಾರ್ ಚಲುವರಾಜು ರವರಿಗೆ ಮನವಿ ಪತ್ರ ಸಲ್ಲಿಸಿದರು.

    ತಾಲ್ಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ಉಂಟಾದ ಭಾರಿ ಮಳೆಯಿಂದಾಗಿ ಸಾಕಷ್ಟು ಮನೆಯ ಗೋಡೆಗಳು, ಮೇಲ್ಚಾವಣಿಗಳು ಕುಸಿದು ಹೋಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಹಾನಿಯುಂಟಾಗಿತ್ತು. ಗ್ರಾಮಸ್ಥರು ಸಹ ಪ್ರವಾಹ ಪೀಡಿತ ಯೋಜನೆಯ ಅಡಿಯಲ್ಲಿ ಪರಿಹಾರವನ್ನು ನೀಡಿ ಮನೆಗಳ ದುರಸ್ತಿಗೆ ಸಹಕರಿಸುವಂತೆ ಕೋರಿ ಅರ್ಜಿಗಳನ್ನು ಸಹ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು.

    kottegala

    ಆ ಸಂಬಂಧ ಪರಿಶೀಲನೆಗೆ ಬಂದಿದ್ದ ಗ್ರಾಮ ಲೆಕ್ಕಿಗರು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿರುವ ಸುಮಾರು 20 ಮನೆಗಳನ್ನು ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಅಲ್ಲದೇ ಕೆಲವರ ಬಳಿ ಹಣ ಪಡೆದು ಅವರನ್ನು ಫಲಾನುಭವಿಗಳ ಪಟ್ಟಿಗೆ ಸೇರಿಸಿದ್ದಾರೆ. ಉಳಿದ 20 ಮನೆಯ ಫಲಾನುಭವಿಗಳ ಹೆಸರನ್ನು ಸೇರಿಸಲು 60-80 ಸಾವಿರ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಬುಧವಾರ ಗ್ರಾಮಸ್ಥರು ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟಿಸಿ ದಂಡಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಆಗ್ರಹಿಸಿದರು.  ಪ್ರತಿಭಟನೆ ವೇಳೆ ಮಾತನಾಡಿದ ಗ್ರಾಮದ ಮುಖಂಡ ಬಸವಣ್ಣ, ನಮ್ಮ ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಯಾಗಿದ್ದ ಮನೆಗಳ ಪರಿಹಾರಕ್ಕೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಆದರೆ ಪರಿಶೀಲನೆಗೆ ಬಂದ ಗ್ರಾಮ ಲೆಕ್ಕಿಗರು ಕೆಲವರ ಬಳಿ 70-80 ಸಾವಿರ ಹಣವನ್ನು ಪಡೆದು ಅವರನ್ನು ಫಲಾನುಭವಿಗಳ ಪಟ್ಟಿಗೆ ಸೇರಿಸಿದ್ದಾರೆ. ಆದರೆ ಬಡವರನ್ನು ಕೈ ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

    ಮೊದಲು ಬಡವರಿಗೆ ಆದ್ಯತೆ ಕೊಡುವಂತಾಗಬೇಕು. ಈ ಬಗ್ಗೆ ತನಿಖೆ ನಡೆಸಿ ಬಡರಿಗೆ ಮನೆಗಳನ್ನು ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಕಳೆದ ಬಾರಿಯೂ ಸಹ ಈ ಬಗ್ಗೆ ತಹಸೀಲ್ದಾರ್ ರವರಿಗೆ ಮನವಿ ಮಾಡಲಾಗಿದೆ. ಆದರೂ ಯಾವುದೇ ಪ್ರಯೋಜನವಾಗದೆ ತನಿಖೆ ನಡೆಸುವಂತೆ ಆಗ್ರಹಿಸಿ ಈ ಬಾರಿ ಪ್ರತಿಭಟಿಸಿ ಇಂದು ತಹಸೀಲ್ದಾರ್‍ರವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಇದು ಕೇವಲ ನಮ್ಮ ಗ್ರಾಮದ ಸಮಸ್ಯೆ ಮಾತ್ರವಲ್ಲ ಇದು ನಮ್ಮ ತಾಲ್ಲೂಕಿನ ಸಾಕಷ್ಟು ಗ್ರಾಮ ಪಂಚಾಯಿತಿಗಳ ಸಮಸ್ಯೆಯಾಗಿದೆ ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

    ಮನವಿಯನ್ನು ಸ್ವೀಕರಿಸಿ ಬಳಿಕ ಮಾತನಾಡಿದ ತಹಸೀಲ್ದಾರ್ ಚಲುವರಾಜು, ಈ ಮನವಿಯ ಕುರಿತಂತೆ ಕಾನೂನಾತ್ಮಕವಾಗಿ ತನಿಖೆ ನಡೆಸಲಾಗುವುದು. ಇದು ಯಾರಿಗೂ ಮನೆ ಹಂಚಿಕೆಯ ಯೋಜನೆಯಲ್ಲ ಬದಲಿಗೆ ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸುವುದಾಗಿದೆ. ಅರ್ಜಿಗಳು ಬಂದ ಸ್ಥಳಕ್ಕೆ ಗ್ರಾಮ ಲೆಕ್ಕಿಗರು ಭೇಟಿ ಮಾಡಿ ಹಾನಿಯ ಪ್ರಮಾಣವನ್ನು ನೋಡಿ ಅದಕ್ಕನುಗುವಾಗಿ ಪರಿಹಾರದ ಪಟ್ಟಿಗೆ ಸೇರಿಸಬೇಕು. ಆದರೆ ಇದರಲ್ಲಿ ಲೋಪವಾಗಿದೆ ಎಂದು ಕೊತ್ತೇಗಾಲ ಗ್ರಾಮದಿಂದ ಬಂದಿರುವ ದೂರಿನ ಅನ್ವಯ ಗ್ರಾಮ ಲೆಕ್ಕಿಗರಿಗೆ ನೋಟಿಸ್ ನೀಡಿ ಘಟನೆಯ ಕುರಿತಂತೆ ಅವರಿಂದ ಉತ್ತರ ಪಡೆದು ಬಳಿಕ ಕಾನೂನಿನ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಒಂದು ವೇಳೆ ಲೋಪ ಕಂಡುಬಂದಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

    ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಶೋಭ, ಗ್ರಾಮಸ್ಥರಾದ ರಾಮಚಂದ್ರ, ಆದಿರಾಜಪ್ಪ, ನಾಗಗೌಡ, ಬಿ.ನಾಗರರಾಜು, ಬಸವರಾಜು, ದೇವಮಣಿ, ನಾಗಮ್ಮ, ರತ್ನಮ್ಮ, ಶಿವಮ್ಮ, ಬೀರೇಗೌಡ, ಮಲ್ಲೇಗೌಡ, ಪ್ರಭುಸ್ವಾಮಿ, ಹರೀಶ, ಶಂಕರೇಗೌಡ, ಗಿರೀಶ್, ಶಿವು ಮುಂತಾದವರು ಹಾಜರಿದ್ದರು.

    ವರದಿ: ಚಂದ್ರಹಾದನೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.