ಮಧುಗಿರಿ : ಪರಿಸರವ ರಕ್ಷಣೆ ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.
ತಾಲ್ಲೂಕಿನ ಜನಕಲೋಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಸಿಗಳನ್ನು ನೆಟ್ಟರೆ ಸಾಲದು, ಮರ ಆಗುವವರೆಗೂ ಅದರ ಸಂರಕ್ಷಣೆ ಮಾಡವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಅರಣ್ಯ ಇಲಾಖೆ ಮತ್ತಷ್ಟು ಗಿಡ-ಮರಗಳನ್ನು ಬೆಳೆಸುವ ಮೂಲಕ ಪರಿಸರ ಉಳಿವಿಗೆ ಹೆಚ್ಚಿನ ಆದ್ಯತೆ ನೀಡಬೇಕು. ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು. ಈ ದಿಸೆಯಲ್ಲಿ ಎಲ್ಲರೂ ಪರಿಸರ ಸಂರಕ್ಷಣೆ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದರು.
ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ, ವಲಯ ಅರಣ್ಯ ಅಧಿಕಾರಿ ಸಿ.ರವಿ, ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ವಲಯ ಅರಣ್ಯ ಅಧಿಕಾರಿ ತಾರಕೇಶ್ವರಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಆರ್.ಕೆ.ರೆಡ್ಡಿ, ಸದಸ್ಯ ಜೀಲಾನ್, ನರಸಿಂಹಯ್ಯ, ಬಿ.ಆರ್.ಸಿ ಹನುಮಂತರಾಯಪ್ಪ, ಸಿ.ಆರ್.ಪಿ. ರಂಗನಾಥಪ್ಪ, ಮುಖ್ಯ ಶಿಕ್ಷಕ ಚಂದ್ರಣ್ಣ, ಶಿಕ್ಷಕರಾದ ಕೆ.ಲಿಂಗರಾಜು, ಮಂಜುಳಾ, ರಾಜೇಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಚೌಡಪ್ಪ, ಮುಖಂಡರಾದ ಪೋಸ್ಟ್ ಮಾಸ್ಟರ್ ಸೂರ್ಯಪ್ರಕಾಶ್, ರಾಮಚಂದ್ರಪ್ಪ, ಬಾಲಕೃಷ್ಣ, ಸತೀಶ್, ಸರಸಿಂಹಯ್ಯ ಹಾಗೂ ಮುಂತಾದವರು ಇದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB